NEWSನಮ್ಮಜಿಲ್ಲೆ

ಇಂದು ಬೆಂಗಳೂರಿನ ಐದು ಪೊಲೀಸರಿಗೆ ಕೊರೊನಾ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಯಮಸ್ವರೂಪಿ ಕೊರೊನಾ ಬೆಂಗಳೂರು ಪೊಲೀಸರನ್ನು ಬೆಂಬಿಡದೇ ಕಾಡುತ್ತಿದೆ. ಇಂದು 5 ಮಂದಿಯಲ್ಲಿ ಸೋಂಕು ಇರುವುದು ದೃಢಪಟ್ಟಿದ್ದು, ಈ ಮೂಲಕ ನಗರದಲ್ಲಿ 81 ಮಂದಿ ಪೊಲೀಸರು ಕೊರೊನಾ ಸೋಂಕಿನಿಂದ ಬಳಲುವಂತಾಗಿದೆ.

ಮಾರತ್‌ಹಳ್ಳಿ ಪೊಲೀಸ್‌ ಠಾಣೆಯ 12 ಮಂದಿ ಪೊಲೀಸರಲ್ಲಿ 5 ಮಂದಿಗೆ ಕೊರೊನಾ ಪಾಸಿಟಿವ್‌ ಬಂದಿರುವುದಾಗಿ ವರದಿ ಬಂದಿದೆ. ಈ 12 ಮಂದಿಯೂ ತಮಿಳುನಾಡಿನಲ್ಲಿದ್ದ ಆರೋಪಿಯನ್ನು ಬಂಧಿಸಲು ಹೋಗಿದ್ದರು. ಆ ಆರೋಪಿಯಲ್ಲಿ ಕೊರೊನಾ ಪಾಸಿಟಿವ್‌ ಇದ್ದರಿಂದ ಠಾಣೆಯ ಐದು ಮಂದಿಗೆ ಕೊರೊನಾ ಇರುವುದು ದೃಢಪಟ್ಟಿದೆ.

ಇನ್ನು ಡಿ.ಜೆ.ಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ಕೊಲೆ ಯತ್ನ ಆರೋಪಿಯನ್ನು ಬಂಧಿಸಿದ್ದ ಪೊಲೀಸರಿಗೆ ಕೊರೊನಾ ಪಾಸಿಟಿವ್‌ ಬಂದಿದೆ. ಈ ಹಿನ್ನೆಲೆಯಲ್ಲಿ ಠಾಣೆಯಲ್ಲಿದ್ದ ಪೊಲೀಸರನ್ನು ಕ್ವಾರಂಟೈನ್‌ ಮಾಡಲಾಗಿದೆ.

ತಿಲಕ್‌ನಗರ ಠಾಣೆಯ ಸಿಬ್ಬಂದಿಗೂ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಠಾಣೆಯಮನ್ನು ಸೀಲ್‌ಡೌನ್‌ ಮಾಡುವುದಾಗಿ ಬಿಬಿಎಂಪಿ ಅಧಿಕಾರಿಗಳು ತಿಳಿಸಿದ್ದರು. ಆದರೆ ಈವರೆಗೂ ಯಾವೊಬ್ಬ ಅಧಿಕಾರಿಯೂ ಸೀಲ್‌ಡೌನ್‌ ಮಾಡಲು ಬಾರದ ಕಾರಣ ಠಾಣೆ ಸಿಬ್ಬಂದಿಯೇ ಠಾಣೆಯನ್ನು ಬಂದ್‌ ಮಾಡಿ ಸ್ವಯಂ ಕ್ವಾರಂಟೈನ್‌ಗೆ ಒಳಗಾಗಿದ್ದಾರೆ.

Leave a Reply

error: Content is protected !!
LATEST
KSRTC ನಿರ್ದೇಶಕರ ಆದೇಶಕ್ಕೂ ಕಿಮ್ಮತ್ತಿಲ್ಲ: ಅಮಾನತು ತೆರವು ಮಾಡದೆ ಚಾಲಕನಿಗೆ ಮಾನಸಿಕ ಹಿಂಸೆ ಕೊಡುತ್ತಿರುವ ತುಮಕೂರು ... ಪ್ರಜ್ವಲ್ ರೇವಣ್ಣ ಪ್ರಕರಣ: ಅಶ್ಲೀಲ ವಿಡಿಯೋಗಳ ಹಂಚಿಕೆ ಅತ್ಯಂತ ಪಾಪ ಕೃತ್ಯ, ಸಂತ್ರಸ್ತೆಯರಿಗೆ ಅವಮಾನ- ಹೈಕೋರ್ಟ್ ವಿಶ್ವವಿಖ್ಯಾತ ಮೈಸೂರು ದಸರಾ ಗಂಡಾನೆಗಳ ನಡುವೆ ಕಿತ್ತಾಟ: ದಿಕ್ಕಾಪಾಲಾಗಿ ಓಡಿದ ಜನರು ಬನ್ನೂರು: ಬಸವನಹಳ್ಳಿ ಬಳಿ ಬೈಕ್‌ಗೆ ಡಿಕ್ಕಿ ಹೊಡೆದ ಹೆಣ್ಣು ಚಿರತೆ ಸಾವು ಅ.3ರಿಂದ ಶಾಲೆಗಳಿಗೆ ದಸರಾ ರಜೆ: ಶಾಲಾ ಶಿಕ್ಷಣ ಇಲಾಖೆ ಆದೇಶ BMTC ನೌಕರರ ₹400 ಕೋಟಿ ಗ್ರಾಚ್ಯುಟಿ, ಗಳಿಕೆ ರಜೆ ನಗದೀಕರಣ ಬಿಡುಗಡೆಗೆ ಮೀನಮೇಷ..!! KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್