Vijayapatha - ವಿಜಯಪಥ > NEWS > ನಮ್ಮರಾಜ್ಯ > ಕೊರೊನಾ ಸೇನಾನಿಗಳಿಗೆ ವಿಧಾನಸೌಧದ ಮುಂಭಾಗ ಗೌರವ ಸಮರ್ಪಣೆ
ಬೆಂಗಳೂರು: ಕೊರೊನಾ ಸೇನಾನಿಗಳಿಗೆ ಪುಷ್ಪಾಲಂಕಾರದ ಮೂಲಕ ವಿಶಿಷ್ಟವಾಗಿ ಗೌರವ ಸಮರ್ಪಣಾ ಕಾರ್ಯಕ್ರಮವನ್ನು ವಿಧಾನಸೌಧದ ಮುಂಭಾಗ ಗುರುವಾರ ಏರ್ಪಡಿಸಲಾಗಿತ್ತು.

ತೋಟಗಾರಿಕೆ ಇಲಾಖೆ ಸಹಭಾಗಿತ್ವದಲ್ಲಿ ಫ್ಲವರ್ ಕೌನ್ಸೆಲಿಂಗ್ ಆಫ್ ಇಂಡಿಯಾ ಆಯೋಜಿಸಿದ್ದ ಕಾರ್ಯಕ್ರಮವನ್ನು ತೋಟಗಾರಿಕಾ ಸಚಿವ ನಾರಾಯಣಗೌಡ ಉದ್ಘಾಟಿಸಿದರು. ಈ ವೇಳೆ 1.72 ಲಕ್ಷ ಹೂವುಗಳನ್ನು ಬಳಸಿ ಕೊರೊನಾ ಸೇನಾನಿಗಳಂತೆ ಅಲಂಕಾರ ಮಾಡಲಾಗಿದೆ. ಬೆಂಗಳೂರಿನ ವಿವಿಧೆಡೆ ಇಂದಿನಿಂದ ಮೂರು ದಿನಗಳ ಕಾಲ ಪುಷ್ಪಾಲಂಕಾರದ ಮೂಲಕ ಗೌರವ ಸಮರ್ಪಣೆ ಮಾಡಲಾಗುತ್ತಿದೆ ಎಂದು ಸಚಿವರು ತಿಳಿಸಿದರು.
ಸಮಾರಂಭದಲ್ಲಿ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ತೋಟಗಾರಿಕೆ ಇಲಾಖೆ ಕಾರ್ಯದರ್ಶಿ ರಾಜೇಂದ್ರ ಕಠಾರಿಯಾ, ನಿರ್ದೇಶಕ ವೆಂಕಟೇಶ್ ಮತ್ತಿತರರು ಭಾಗವಹಿಸಿದ್ದರು.
Related posts
ಸಿಎಂ, ಸಾರಿಗೆ ಸಚಿವರಿಗೆ ಬಹಿರಂಗ ಪತ್ರ ಬರೆದ ನೊಂದ ನೌಕರರು : ಸಾರಿಗೆ ಸಂಘಟನೆಗಳ ಚುನಾವಣೆ ನಡೆಸಿ, ಅಧಿಕಾರಿಗಳ ಕಿರುಕುಳ ತಪ್ಪಿಸಿ
ಬೆಂಗಳೂರು: ಮುಖ್ಯಮಂತ್ರಿ ಬಸವರ...
NEWS
ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ: ಮಹಾ ಸಿಎಂ ಠಾಕ್ರೆ ಹೇಳಿಕೆಗೆ ಕನ್ನಡಪರ ಸಂಘಟನೆಗಳು ಕಿಡಿ
ವಿಜಯಪಥ ಸಮಗ್ರ ಸುದ್ದಿ
ಬೆಂಗಳ...
NEWS
ಭಾಷೆಗಳ ಕಲಿಕಾ ತರಬೇತಿಯಲ್ಲಿ ಕನ್ನಡ ಕೈಬಿಟ್ಟ ಕೇಂದ್ರದ ಪ್ರೈಡ್: ಎಚ್ಡಿಕೆ ಆಕ್ರೋಶ
ಬೆಂಗಳೂರು: ಭಾಷೆಗಳ ಕಲಿಕಾ ತರಬ...
NEWS
Editordev
Leave a reply