NEWSದೇಶ-ವಿದೇಶ

ವ್ಯಾಂಕೋವರ್ ನಿಂದ  45, ಮನಿಲಾದಿಂದ 176 ಪ್ರಯಾಣಿಕರ ಆಗಮನ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು ಗ್ರಾಮಾಂತರ:  ಕೋವಿಡ್-19 ಲಾಕ್ ಡೌನ್ ಪರಿಸ್ಥಿತಿಯಲ್ಲಿ ಫಿಲಿಪ್ಪೀನ್ಸ್ ನ ಮನಿಲಾದಿಂದ ಇಂದು (ಮೇ 26) ಬೆಳಗ್ಗೆ 7 ಗಂಟೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ, ದೇವನಹಳ್ಳಿಯಲ್ಲಿರುವ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಹದಿನೇಳನೇ ಏರ್ ಇಂಡಿಯಾ ವಿಮಾನದಲ್ಲಿ 176 ಮಂದಿ ಅನಿವಾಸಿ ಭಾರತೀಯರು ಆಗಮಿಸಿದ್ದಾರೆ.

ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಒಟ್ಟು 176 ಮಂದಿ ಪ್ರಯಾಣಿಕರಲ್ಲಿ 115 ಪುರುಷರು ಮತ್ತು 61 ಮಹಿಳೆಯರು ಇದ್ದರು.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ    https://play.google.com/store/apps/detail

ತಜ್ಞ ವೈದ್ಯರು ಹಾಗೂ ಸಿಬ್ಬಂದಿ 176 ಪ್ರಯಾಣಿಕರ ಆರೋಗ್ಯ ತಪಾಸಣೆ ನಡೆಸಿದ್ದು, ಯಾವುದೇ ಪ್ರಯಾಣಿಕರಲ್ಲಿ ಕೊರೊನಾ ವೈರಾಣು ಸೋಂಕಿನ ಲಕ್ಷಣಗಳು ಕಂಡುಬಂದಿರುವುದಿಲ್ಲ.

176 ಪ್ರಯಾಣಿಕರನ್ನು 14 ದಿನಗಳ ಕ್ವಾರಂಟೈನ್ ಗಾಗಿ ಹೋಟೆಲ್ ಗಳಿಗೆ ಕಳುಹಿಸಿಕೊಡಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ   ತಿಳಿಸಿದ್ದಾರೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ    https://play.google.com/store/apps/detail

ವ್ಯಾಂಕೋವರ್ ನಿಂದ ಬಂದಿಳಿದ 45 ಪ್ರಯಾಣಿಕರು
ಕೆನಡಾದ ವ್ಯಾಂಕೋವರ್ ನಿಂದ ಇಂದು (ಮೇ 26) ಬೆಳಗ್ಗೆ 8.30  ವಿಮಾನ ನಿಲ್ದಾಣಕ್ಕೆ ಬಂದಿಳಿದ ಹದಿನೆಂಟನೇ ಏರ್ ಇಂಡಿಯಾ ವಿಮಾನದಲ್ಲಿ 45 ಮಂದಿ ಪುರುಷ ಪ್ರಯಾಣಿಕರು ಆಗಮಿಸಿದ್ದಾರೆ.

ನಂತರ ಏರ್ ಇಂಡಿಯಾ ವಿಮಾನವು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೈದರಾಬಾದ್ ವಿಮಾನ ನಿಲ್ದಾಣಕ್ಕೆ ಪ್ರಯಾಣಿಸಿತು. ತಜ್ಞ ವೈದ್ಯರು ಹಾಗೂ ಸಿಬ್ಬಂದಿ  45 ಪ್ರಯಾಣಿಕರ ಆರೋಗ್ಯ ತಪಾಸಣೆ ನಡೆಸಿದ್ದು, ಯಾವುದೇ ಪ್ರಯಾಣಿಕರಲ್ಲಿ ಕೊರೊನಾ  ವೈರಾಣು ಸೋಂಕಿನ ಲಕ್ಷಣಗಳು ಕಂಡುಬಂದಿರುವುದಿಲ್ಲ.

45 ಪ್ರಯಾಣಿಕರನ್ನು 14 ದಿನಗಳ ಕ್ವಾರಂಟೈನ್ ಗಾಗಿ ಹೋಟೆಲ್ ಗಳಿಗೆ ಕಳುಹಿಸಿಕೊಡಲಾಗಿದೆ ಎಂದು   ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ    https://play.google.com/store/apps/detail

Leave a Reply

error: Content is protected !!
LATEST
KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ