ಬೆಂಗಳೂರು: ರಾಜ್ಯದಲ್ಲಿ ಕೊರೊನಾ ವಿಶ್ವಮಾರಿ ತನ್ನ ಆರ್ಭಟವನ್ನು ಮುಂದುವರಿಸಿದ್ದು, ಇಂದು ಒಂದೇದಿನ ಮೂವರು ಮೃತಪಟ್ಟಿದ್ದು, 127ಮಂದಿಯಲ್ಲಿ ಸೋಂಕು ಇರುವುದು ದೃಢಪಟ್ಟಿದೆ. ಆ ಮೂಲಕ ಮೃತಪಟ್ಟವರ ಸಂಖ್ಯೆ 39ಕ್ಕೆ ಏರಿಕೆ ಅಗಿದ್ದು, ಸೋಂಕಿತರ ಸಂಖ್ಯೆ 1373ಕ್ಕೆ ತಲುಪಿದೆ.
ಇಂದು ಬೆಂಗಳೂರು, ವಿಜಯಪುರ ಮತ್ತು ಬಳ್ಳಾರಿಯಲ್ಲಿ ಒಬ್ಬೊಬ್ಬರು ಮೃತಪಟ್ಟಿದ್ದಾರೆ. ಇನ್ನು ಸೋಂಕಿಗೆ ಒಳಗಾದ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಂಡ್ಯದಲ್ಲಿ 62 ಮಂದಿಯಲ್ಲಿ ಪಾಸಿಟಿವ್ ಬಂದಿದ್ದು, ಜಿಲ್ಲೆಯಲ್ಲಿ ಒಟ್ಟಾರೆ ಈವರೆಗೆ 151ಕ್ಕೆ ಸೋಂಕಿತರ ಸಂಖ್ಯೆ ಏರಿಕೆಯಗಿದೆ. ಇಂದು ಕಂಡು ಬಂದಿರುವ ಸೋಂಕಿತರಲ್ಲಿ 91 ಮಂದಿ ಮುಂಬೈನಿಂದ ಬಂದವರಾಗಿದ್ದಾರೆ.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail
ಇನ್ನು ದಾವಣಗೆರೆಯಲ್ಲಿ 19, ಶಿವಮೊಗ್ಗ 12, ಕಲಬುರಗಿ 11, ಬೆಂಗಳೂರು 5, ಉಡುಪಿ 4, ಉತ್ತರ ಕನ್ನಡ 4, ಹಾಸನ 3, ಚಿಕ್ಕಮಗಳೂರು 2, ಗದಗ, ಯಾದಗಿರಿ, ವಿಜಯಪುರ ಮತ್ತು ಚಿತ್ರದುರ್ಗ 1 ಪ್ರಕರಣ ಸೇರಿ ಒಟ್ಟು 127 ಸೋಂಕಿತರು ಇಂದು ಪತ್ತೆಯಾಗಿದ್ದು, ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 1373ಕ್ಕೆ ಏರಿಕೆ ಆಗಿದೆ.
ದೇಶದಲ್ಲಿ 101,261 ಕ್ಕೇರಿದ ಸೋಂಕಿತರ ಸಂಖ್ಯೆ
ಇನ್ನು ದೇಶದಲ್ಲಿ ಈವರೆಗೆ 101,261 ಮಂದಿಗೆ ಸೋಂಕು ಇರುವುದು ದೃಢಪಟ್ಟಿದೆ. 3,164 ಮಂದಿ ಮೃತಪಟ್ಟಿದ್ದಾರೆ.39,233ಮಂದಿ ರೋಗಮುಕ್ತರಾಗಿದ್ದಾರೆ. ಪ್ರಪಂಚಾದ್ಯಂತ ಈವರೆಗೆ 4,904,566 ಜನರಲ್ಲಿ ಸೋಂಕು ಇರುವುದನ್ನು ವಿಶ್ವ ಆರೋಗ್ಯ ಸಂಸ್ಥೆ ಖಚಿತಪಡಿಸಿದೆ. ಇನ್ನು 320,326 ಜನರು ಮೃತಪಟ್ಟಿದ್ದಾರೆ. 1,916,024 ಮಂದಿ ರೋಗದಿಂದ ಮುಕ್ತಗೊಂಡಿದ್ದಾರೆ.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail