NEWSನಮ್ಮರಾಜ್ಯ

ಪ್ರಯಾಣಿಕರಿಲ್ಲದೇ ಓಡುತ್ತಿವೆ BMTC, KSRTC ಬಸ್‌ಗಳು

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಬೃಹತ್‌ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಮತ್ತು ಕೆಎಸ್‌ಆರ್‌ಟಿಸಿ  ಬಸ್‌ಗಳು ರಸ್ತೆಗಳಿದು ಇಂದಿಗೆ ಮೂರು ದಿನವಾಯಿತು. ಆದರೆ ದಿನದಿಂದ ದಿನಕ್ಕೆ ಪ್ರಯಾಣಿಕರ ಸಂಖ್ಯೆ ಇಳಿಮುಖವಾಗಿಯೇ ಸಾಗುತ್ತಿದೆ.

ಮೊನ್ನೆ ಕೆಎಸ್‌ಆರ್‌ಟಿಸಿಯಲ್ಲಿ ಅಂತರ ಜಿಲ್ಲೆಗಳಿಗೆ ಹೋಗುವ ಜನರು ಮುಗಿಬಿದ್ದು ಬಸ್‌ ಹತ್ತಿದ್ದರು. ಇನ್ನು ನಿನ್ನೆ ಇಡೀ ರಾತ್ರಿ ಬಸ್‌ ನಿಲ್ದಾಣದಲ್ಲೇ ಕಾಲ ಕಳೆದು ಬೆಳಗ್ಗೆ ಬಸ್‌ ಏರಿ ಹೋದರು. ಆದರೆ ಇಂದು ಪ್ರಯಾಣಿಕರಿಲ್ಲದೆ ವಿವಿಧ ಜಿಲ್ಲೆಗಳಿಗೆ ಹೋಗುವ ಬಸ್‌ಗಳು ಖಾಲಿಯಾಗಿ ನಿಂತಿವೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ  https://play.google.com/store/apps/detail

ಬೆಳಗ್ಗೆ 7 ಗಂಟೆಗೆ ಹೊರಡಬೇಕಿರುವ ಬಸ್‌ಗಳು ಪ್ರಯಾಣಿಕರಿಲ್ಲದೆ 8.30 ಆದರೂ ಕೆಂಪೇಗೌಡ ಬಸ್‌ ನಿಲ್ದಾಣದಲ್ಲೇ ನಿಂತಿದ್ದು, ಜನರ ಬರುವಿಕೆಗೆ ಕಾಯುತ್ತಿವೆ. ಇನ್ನು ನಿಗದಿತ ಪ್ರಯಾಣಿಕರು ಇಲ್ಲದಿದ್ದರೆ ಬಸ್‌ಗಳನ್ನು ಓಡಿಸುವುದು ಕಷ್ಟಸಾಧ್ಯ. ಆದ್ದರಿಂದ ಚಾಲಕರು ಮತ್ತು ನಿರ್ವಾಹಕರು ಇರುವ 2-3 ಪ್ರಯಾಣಿಕರನ್ನು ಹೊತ್ತುಕೊಂಡುಹೋಗಲು ಸಾಧ್ಯವಿಲ್ಲ ಎಂದು ಹೇಳುತ್ತಿದ್ದಾರೆ.

ಈ ನಡುವೆ ಬಿಎಂಟಿಸಿ ಬಸ್‌ಗಳಲ್ಲಿ ಪ್ರಯಾಣಿಸಲು ಸಹ ಜನರು ಹಿಂದೇಟು ಹಾಕುತ್ತಿದ್ದಾರೆ. ಅದಕ್ಕೆ ಬಲವಾದ ಕಾರಣವು ಇದೆ. ಕಳೆದ ಮೂರು ದಿನದಲ್ಲಿ ನೂರಾರು ಸಂಖ್ಯೆಯಲ್ಲಿ ಕೊರೊನಾ ಪಾಸಿಟಿವ್‌ ಬಂದಿರುವುದು. ಇದರಿಂದ ಭಯಗೊಂಡಿರುವ ಜನರು ತಮ್ಮ ಸ್ವಂತ ವಾಹನಗಳಲ್ಲಿ ಪ್ರಯಾಣ ಮಾಡುತ್ತಿದ್ದಾರೆ. ಹೀಗಾಗಿ ಬಿಎಂಟಿಸಿ ಬಸ್‌ಗಳು ಖಾಲಿಯಾಗಿಯೇ ಓಡುತ್ತಿವೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ  https://play.google.com/store/apps/detail

ಈಗಾಗಲೇ ನಷ್ಟದಲ್ಲಿದ್ದೇವೆ ಎಂದು ಹೇಳಿಕೊಳ್ಳುತ್ತಿರುವ ಸಾರಿಗೆ ಅಧಿಕಾರಿಗಳು ಹೀಗೆ ಖಾಲಿಯಾಗಿಯೇ ಬಸ್‌ಗಳನ್ನು ಓಡಿಸಿದರೆ ಇನ್ನಷ್ಟು ಸಂಕಷ್ಟಕ್ಕೆ ಸಿಲುಕುವ ಮೂಲಕ ತಮ್ಮ ನೌಕರರಿಗೆ ವೇತನವನ್ನು ನೀಡುವುದು ಕಷ್ಟವಾಗಲಿದೆ ಎಂದು ಹೇಳಿಕೊಳ್ಳುತ್ತಿದ್ದಾರೆ.

ಆದರೆ ದಿನ ಕಳೆದಂತೆ ಪ್ರಯಾಣಿಕರ ಸಂಖ್ಯೆ ಹೆಚ್ಚಳವಾಗಬಹುದು ಎಂಬ ನಿರೀಕ್ಷೆಯಲ್ಲಿದ್ದ ಸಾರಿಗೆ ಅಧಿಕಾರಿಗಳಿಗೆ ಇದು ಉಲ್ಟಾ ಹೊಡೆದಿರುವುದರಿಂದ ಮುಂದೆ ಏನು ಮಾಡಬೇಕು ಎಂಬ ದಾರಿಕಾಣದೆ ಬಸ್‌ಗಳನ್ನು ಓಡಿಸಬೇಕೆ ಅಥವಾ ನಿಲ್ಲಿಸಬೇಕೆ ಎಂಬ ಗೊಂದಲದಲ್ಲಿ ಮುಳುಗಿದ್ದಾರೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ  https://play.google.com/store/apps/detail

Leave a Reply

error: Content is protected !!
LATEST
160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ ಮೇಲುಸೇತುವೆ-ಕೆಳಸೇತುವೆಗಳ ನಿರ್ವಹಣೆ ಸರಿಯಾಗಿ ಮಾಡಿ: ತುಷಾರ್ ಗಿರಿನಾಥ್