NEWSನಮ್ಮಜಿಲ್ಲೆ

ಸಿದ್ದಾಪುರ, ವಿವಿ ಪುರಂ, ಚಿಕ್ಕಪೇಟೆ, ಕೆ.ಆರ್.ಮಾರುಕಟ್ಟೆ, ಕಲಾಸಿಪಾಳ್ಯ ಸೀಲ್‌ಡೌನ್‌

ಬಿಬಿಎಂಪಿ ಅಧಿಕಾರಿಗಳಿಗೆ ಸೀಲ್‌ಡೌನ್‌ ಮಾಡಲು ಮುಖ್ಯಮಂತ್ರಿ ಯಡಿಯೂರಪ್ಪ ಸೂಚನೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು:  ಹೆಚ್ಚು ಕೊರೊನಾ ಸೋಂಕು   ಪ್ರಕರಣಗಳು ಕಂಡು ಬಂದ ಪ್ರದೇಶಗಳನ್ನು ಕೂಡಲೆ ಸೀಲ್ ಡೌನ್ ಮಾಡಿ ಎಂದು ಬಿಬಿಎಂಪಿ ಅಧಿಕಾರಿಗಳಿಗೆ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಸೂಚನೆ ನೀಡಿದ್ದಾರೆ.

ಸೋಮವಾರ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ  ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಅನ್ ಲಾಕ್ ಆದ ಬಳಿಕ ಕೋವಿಡ್-19 ಸೋಂಕು ಪ್ರಕರಣಗಳು ಹೆಚ್ಚಳವಾಗುತ್ತಿರುವ  ಹಿನ್ನೆಲೆಯಲ್ಲಿ  ಮುಖ್ಯಮಂತ್ರಿ  ಅಧ್ಯಕ್ಷತೆಯಲ್ಲಿ ನಡೆದ  ಸಭೆಯಲ್ಲಿ ಅಧಿಕಾರಿಗಳೊಂದಿಗೆ ಚರ್ಚಿಸಿ ಹಲವಾರು ಸೂಚನೆಗಳನ್ನು ನೀಡಿದರು.

ಅದರಂತೆ ಹೆಚ್ಚು ಸೋಂಕು ಪತ್ತೆಯಾಗಿರುವ ವಾರ್ಡ್ ಗಳಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಿರುವ 5 ಪ್ರದೇಶಗಳನ್ನು ಮಾತ್ರ ಸೀಲ್ ಡೌನ್ ಮಾಡಲು

ಸಿದ್ದಾಪುರ, ವಿ.ವಿ.ಪುರಂ, ಚಿಕ್ಕಪೇಟೆ  ಪ್ರದೇಶದ ಕೋವಿಡ್  ಸೋಂಕಿತರು ವಾಸವಿದ್ದ ಸ್ಥಳದ ಸುತ್ತಮುತ್ತಲಿನ ಪ್ರದೇಶವನ್ನು ಸೀಲ್‌ಡೌನ್‌ ಮಾಡಲು ತಿಳಿಸಿದ್ದಾರೆ.

ಜತೆಗೆ ವಿಶೇಷವಾಗಿ ಜನಸಾಂದ್ರತೆ ಹೆಚ್ಚಿರುವ   ಕೆ.ಆರ್.ಮಾರುಕಟ್ಟೆ ಮತ್ತು ಕಲಾಸಿಪಾಳ್ಯ ಹೊಲ್‌ಸೇಲ್ ಮಾರುಕಟ್ಟೆ ಪ್ರದೇಶವನ್ನು   ಸೀಲ್ ಡೌನ್ ಮಾಡಿ  ನಾಳೆಯಿಂದ (ಮಂಗಳವಾರ) ಜಾರಿಗೊಳಿಸಿ ಎಂದು ಸಿಎಂ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಚಿಕ್ಕಪೇಟೆ ವ್ಯಾಪ್ತಿಯಲ್ಲಿ ಹೆಚ್ಚು ಕೊರೊನಾ ಪ್ರಕರಣಗಳು ಕಂಡುಬರುತ್ತಿರುವ ಹಿನ್ನೆಲೆಯಲ್ಲಿ ಸ್ಥಳೀಯ ವರ್ತಕರು ಸ್ವಯಂ ಪ್ರೇರಿತರಾಗಿ ಇಡೀ ಪ್ರದೇಶವನ್ನು ಈಗಾಗಲೇ ಲಾಕ್ ಡೌನ್ ಮಾಡಿದ್ದಾರೆ.   ಜೊತೆಗೆ ಕೆ.ಆರ್.ಮಾರುಕಟ್ಟೆ ಹಾಗೂ ಕಲಾಸಿಪಾಳ್ಯ ಮಾರುಕಟ್ಟೆಯನ್ನು ಕೂಡ ಸ್ವಯಂಪ್ರೇರಿತವಾಗಿ ಮುಚ್ಚುವ ತೀರ್ಮಾನವನ್ನು ಅಲ್ಲಿನ ಮಾರುಕಟ್ಟೆ ಆಸೋಸಿಯೇಷನ್ ವರ್ತಕರು ತೆಗೆದುಕೊಂಡಿದ್ದಾರೆ.

ಈ ನಿಟ್ಟಿನಲ್ಲಿ ಸೋಂಕು ಪ್ರಕರಣಗಳು ಹೆಚ್ಚಳವಾಗದಂತೆ ಬಿಬಿಎಂಪಿ, ಆರೋಗ್ಯ ಇಲಾಖೆ ಹಾಗೂ ಪೊಲೀಸ್ ಅಧಿಕಾರಿಗಳು ಕಾರ್ಯಪ್ರವೃತ್ತರಾಗಲು ಕ್ರಮವಹಿಸಲಾಗುವುದು ಎಂದು  ಬಿಬಿಎಂಪಿ  ಆಯುಕ್ತ ಅನಿಲ್‌ ಕುಮಾರ್‌ ತಿಳಿಸಿದ್ದಾರೆ.

ತಿಲಕ್‌ನಗರ, ಕೆಂಗೇರಿ ಪೊಲೀಸ್‌ ಠಾಣೆ ಸೀಲ್‌ಡೌನ್‌
ಕೆಂಗೇರಿ ಮತ್ತು ತಿಲಕ್‌ನಗರ ಪೊಲೀಸ್‌ ಠಾಣೆಯ ಕೆಲ ಸಿಬ್ಬಂದಿಯಲ್ಲಿ ಕೊರೊನಾ ಪಾಸಿಟಿವ್‌ ಕಂಡು ಬಂದ ಹಿನ್ನೆಲೆಯಲ್ಲಿ ಠಾಣೆಯನ್ನು ಸೀಲ್‌ಡೌನ್‌ ಮಾಡಲಾಗಿದೆ. ನಗರದಲ್ಲಿ ಪೊಲೀಸರಲ್ಲೂ ಸೋಂಕು  ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಆಯುಕ್ತ ಭಾಸ್ಕರ್‌ ರಾವ್‌ ಸಿಬ್ಬಂದಿಗೆ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಿದ್ದು, ಪ್ರಮುಖ ಪ್ರಕರಣಗಳಲ್ಲಿ ಮಾತ್ರ ಆರೋಪಿಗಳನ್ನು ಬಂಧಿಸುವಂತೆ ಸೂಚಿಸಿದ್ದಾರೆ.

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ