NEWSನಮ್ಮರಾಜ್ಯಸಿನಿಪಥ

ಬಾರದ ಲೋಕಕ್ಕೆ ಪಯಣ ಬೆಳೆಸಿದ ಚಿರು, ಮಡುಗಟ್ಟಿದ ದುಃಖ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರುನಟ ಜಿರಂಜೀವಿ ಸರ್ಜಾ ಅವರ ಅಂತಿಮ ವಿಧಿವಿಧಾನವನ್ನು  ಇಂದು ಮಧ್ಯಾಹ್ನ ಕನಕಪುರದ ನೆಲಗೂಳಿ ಗ್ರಾಮದ ಫಾರ್ಮ್‌ಹೌಸ್‌ನಲ್ಲಿ ನೆರವೇರಲಿದೆ.

ಮಧ್ಯಾಹ್ನ  1 ಗಂಟೆಗೆ ಅಂತ್ಯಕ್ರಿಯೆ ಮಾಡಲು ಕುಟುಂಬ ಸಿದ್ಧತೆ  ಮಾಡಿಕೊಂಡಿದ್ದಾರೆ. ಇದಕ್ಕೂ ಮುನ್ನಾ ಬೆಳಗ್ಗೆಯಿಂದಲೇ  ಬಸವನಗುಡಿಯ ನಿವಾಸದಲ್ಲಿ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಕೊರೊನಾ ವಿಶ್ವಮಾರಿಯ ಭಯವಿರುವುದರಿಂದ ಸಾಮಾಜಿ ಅಂತರ ಕಾಯ್ದುಕೊಂಡು ಅಭಿಮಾನಿಗಳು ಮತ್ತು ಸಿನಿಮಾದ ಹಿರಿಯ ಕಿರಿಯ ನಟ ನಟಿಯರು ಮತ್ತು ಗಣ್ಯರು ಅಂತಿ ದರ್ಶನ ಪಡೆಯುತ್ತಿದ್ದಾರೆ.

ಇಷ್ಟು ಚಿಕ್ಕ ವಯಸ್ಸಿನಲ್ಲೇ ಇಹಲೋಕ ತ್ಯಜಿಸಿರುವ ಚಿರು ಅವರ ಅಗಲಿಕೆಯಿಂದ ಇಡೀ ಕುಟುಂಬ ಅಷ್ಟೇ ಅಲ್ಲ ಚಿತ್ರರಂಗ ಸೇರಿ ಅಭಿಮಾನಗಳಲ್ಲೂ ದುಃಖ ಮಡುಗಟ್ಟಿದೆ. ಇಷ್ಟು ಬೇಗೆ ಬಾರದ ಲೋಕಕ್ಕೆ ಏಕೆ ಪಯಣ ಬೆಳೆಸಿದರು ಚಿರು ಎಂದು ಎಲ್ಲರ ಕಣ್ಣಾಲೆಗಳು ತೇವವಾಗುತ್ತಿವೆ.

ಇನ್ನು ಪತ್ನಿ ಮೇಘನಾ ರಾಜ್‌ ಅವರು ಕರುಳ ಬಳ್ಳಿಯನ್ನು ಹೊತ್ತಿಕೊಂಡಿದ್ದು, ಮನೆಯಲ್ಲಿ ಸಂತಸ ವಾತಾವರಣ ನಿರ್ಮಾಣವಾಗುತ್ತಿರುವ ಈ ಹೊತ್ತಿನಲ್ಲಿ ಚಿರು ಪಯಣದಿಂದ ಕುಸಿದು ಬಿದ್ದಿದ್ದು, ದಿಕ್ಕು ತೋಚದಂತೆ ಕುಳಿತ್ತಿದ್ದಾರೆ. ಅಷ್ಟೇ ಅಲ್ಲ ಅಭಿಮಾನಿಗಳು ಬಂಧು ಬಳಗದವರಲ್ಲೂ ಅಗಲಿಕೆಯ ನೋವು ಇನ್ನಿಲ್ಲದಂತೆ ಬಾಧಿಸುತ್ತಿದೆ.

 

 

 

Leave a Reply

error: Content is protected !!
LATEST
KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ