NEWSಆರೋಗ್ಯ

ಸಿಎಂ ತುರ್ತು ಸಭೆ: ಕೊರೊನಾ ನಿಯಂತ್ರಣ ಕುರಿತು ಚರ್ಚೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಏರುತ್ತಲೆ ಇರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ತುರ್ತು ಸಭೆ ಕರೆದಿದ್ದಾರೆ.

ಇಂದು ಮಧ್ಯಾಹ್ನ 12ಗಂಟೆಗೆ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಬಿಬಿಎಂಪಿ ಅಧಿಕಾರಿಗಳು ಆರೋಗ್ಯಾಧಿಕಾಗಳ ಸಭೆ ಕರೆದಿದ್ದು, ಕೊರೊನಾ ನಿಯಂತ್ರಣದ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳಲು ಚರ್ಚಿಸಲಿದ್ದಾರೆ.

ಕಳೆದ 10 ದಿನಗಳಲ್ಲಿ ಬೆಂಗಳೂರಿನಲ್ಲಿ 691 ಕೊರೊನಾ ಪಾಸಿಟಿವ್ ಪ್ರಕರಣಗಳು ದೃಢಪಟ್ಟಿವೆ. ಭಾನುವಾರ ಒಂದೇ ದಿನ 196 ಕೇಸ್​ಗಳು ಪತ್ತೆಯಾಗಿವೆ. ಬಹುತೇಕ ಪ್ರಕರಣಗಳ ಮೂಲವನ್ನು ಪತ್ತೆ ಹಚ್ಚಲಾಗದಿರುವುದು ಆತಂಕಕಾರಿ ವಿಚಾರವಾಗಿದೆ.

ತುರ್ತು ಸಭೆಗೆ  ಮೇಯರ್, ಆರೋಗ್ಯಾಧಿಕಾರಿಗಳು, ಆರೋಗ್ಯ ಸಚಿವರು ಸೇರಿದಂತೆ ಸಂಬಂಧಪಟ್ಟವರು ಹಾಜರಾಗುವಂತೆ ಮಾಹಿತಿ ನೀಡಿದ್ದಾರೆ. ಜತೆಗೆ ಕೊರೊನಾ ನಿಯಂತ್ರಣಕ್ಕೆ ಏನೆಲ್ಲಾ ಮಾಡಬಹುದು ಎನ್ನುವ ಕುರಿತು ಅಗತ್ಯ ಮಾಹಿತಿ, ಯೋಜನೆಗಳೊಂದಿಗೆ ಬರಬೇಕು ಎಂದು ಅಧಿಕಾರಿಗಳಿಗೆ ಸಿಎಂ ಸೂಚನೆ ನೀಡಿದ್ದಾರೆ.

ನಿಗದಿತ ಆಸ್ಪತ್ರೆಗಳಲ್ಲಿ ಹಾಸಿಗೆ ಸಾಮರ್ಥ್ಯ, ಮತ್ತೆ ಹೆಚ್ಚುವರಿ ಹಾಸಿಗೆ ವ್ಯವಸ್ಥೆ ಕಲ್ಪಿಸುವ ಅಗತ್ಯತೆ, ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸೆಗೆ ದರ ನಿಗದಿ ಸೇರಿ  ಸೋಂಕು ನಿಯಂತ್ರಣ ಸಂಬಂಧ ಸಮಗ್ರ‌ ಚರ್ಚೆ ನಡೆಯಲಿದೆ.

ಇನ್ನು ಮಹಾನಗರದ 8ರಿಂದ10 ಪ್ರದೇಶಗಳನ್ನು ಸೀಲ್‌ಡೌನ್‌ ಮಾಡುವ ಬಗ್ಗೆಯೂ ವಿಸ್ತೃತ ಚರ್ಚೆ ನಡೆಯಲಿದೆ.

Leave a Reply

error: Content is protected !!
LATEST
160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ ಮೇಲುಸೇತುವೆ-ಕೆಳಸೇತುವೆಗಳ ನಿರ್ವಹಣೆ ಸರಿಯಾಗಿ ಮಾಡಿ: ತುಷಾರ್ ಗಿರಿನಾಥ್