NEWSದೇಶ-ವಿದೇಶನಮ್ಮರಾಜ್ಯ

ರಾಜ್ಯದಲ್ಲಿ ಕೊರೊನಾ ಅಟ್ಟಹಾಸ: ಉಡುಪಿಯೊಂದರಲ್ಲೇ 150 ಪಾಸಿಟಿವ್‌

ಇಂದು ರಾಜ್ಯದಲ್ಲಿ 388 ಕೋವಿಡ್‌-19 ಸೋಂಕಿತರು ಪತ್ತೆ l ದಿನದಿಂದ ದಿನಕ್ಕೆ ಬೆಚ್ಚಿಬೀಳಿಸುವ ವರದಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ  ಇಂದೂ ಕೂಡ ರಣಕೇಕೆ ಹಾಕಿದ್ದು, 388 ಹೊಸ ಪ್ರಕರಣಗಳು ದೃಢಪಟ್ಟಿದ್ದು  ಈ ಮೂಲಕ ರಾಜ್ಯದಲ್ಲಿ 3,796 ಮಂದಿ ಸೋಂಕಿಗೆ ಒಳಗಾಗಿದ್ದಾರೆ.

ಇಂದು  ಉಡುಪಿಯಲ್ಲಿ 150 ಕೊರೊನಾ  ಸೋಂಕು ತಗುಲಿದ್ದು ರಾಜ್ಯದಲ್ಲಿಯೇ ಉಡುಪಿ ಕೊರೊನಾದಲ್ಲಿ ಮೊದಲನೇ ಸ್ಥಾನಕ್ಕೆ ಏರಿದೆ.  ಈವರೆಗೆ ರಾಜ್ಯದಲ್ಲಿ ಕೊರೊನಾದಿಂದ ಅಸುನೀಗಿದವರ ಸಂಖ್ಯೆ 54 ಕ್ಕೆ ಏರಿಕೆ ಆಗಿದೆ. (ಇದರಲ್ಲಿ ಎರಡು ಅನ್ಯಕಾರಣದಿಂದ ಬಲಿಯಾಗಿದ್ದಾರೆ).

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

ಇಂದು ದೃಢಪಟ್ಟಿರುವ 388  ಪ್ರಕರಣಗಳ ಪೈಕಿ ಬಹುತೇಕರು ಅಂತಾರಾಜ್ಯ ಸಂಪರ್ಕ ಹೊಂದಿದ್ದಾರೆ. ಕಲಬುರಗಿ ಜಿಲ್ಲೆಯಲ್ಲಿ 100, ಬೆಳಗಾವಿಯಲ್ಲಿ 51, ರಾಯಚೂರು 16, ಬೆಂಗಳೂರು 12, ಬೀದರ್‌ 10, ಬಾಗಲಕೋಟೆ ಮತ್ತು ಹಾಸನದಲ್ಲಿ ತಲಾ 9, ದಾವಣಗೆರೆ 7, ಯಾದಗಿರಿ 5, ಮಂಡ್ಯ ಮತ್ತು ವಿಜಯಪುರ ತಲಾ 4, ಬೆಂಗಳೂರು ಗ್ರಾಮಾಂತರ 3, ಚಿಕ್ಕಬಳ್ಳಾಪುರ, ತುಮಕೂರು ಮತ್ತು ಧಾರವಾಡ ತಲಾ 2, ಕೋಲಾರ ಮತ್ತು ಹಾವೇರಿಯಲ್ಲಿ ತಲಾ ಒಂದೊಂದು ಸೋಂಕಿತ ಪ್ರಕರಣ ದೃಢಪಟ್ಟಿದೆ ಎಂದು   ಸಂಜೆ ಆರೋಗ್ಯ ಇಲಾಖೆ ನೀಡಿದ ಬುಲೆಟಿನ್‌ನಲ್ಲಿ ಅಧಿಕಾರಿಗಳು ಖಚಿತಪಡಿಸಿದ್ದಾರೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

ಇದುವರೆಗೆ 1403 ಮಂದಿ ಗುಣಮುಖರಾಗಿ  ಆಸ್ಪತ್ರೆಯಿಂದ ಮನೆಗೆ ಮರಳಿದ್ದಾರೆ.  2339 ಮಂದಿಯಲ್ಲಿ  ಸಕ್ರಿಯವಾಗಿದೆ. ಪ್ರಸ್ತುತ 15 ಮಂದಿ ಕೊರೊನಾ ಸೋಂಕಿತರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ದೇಶದಲ್ಲಿ 201,009 ಕ್ಕೇರಿದ ಸೋಂಕಿತರ ಸಂಖ್ಯೆ
ಇನ್ನು ದೇಶದಲ್ಲಿ ಈವರೆಗೆ 201,009  ಮಂದಿಗೆ ಸೋಂಕು ಇರುವುದು ದೃಢಪಟ್ಟಿದೆ. 5,628  ಮಂದಿ ಮೃತಪಟ್ಟಿದ್ದಾರೆ. 96,534 ಮಂದಿ ರೋಗಮುಕ್ತರಾಗಿದ್ದಾರೆ. ಪ್ರಪಂಚಾದ್ಯಂತ ಈವರೆಗೆ 6,407,648 ಜನರಲ್ಲಿ ಸೋಂಕು ಇರುವುದನ್ನು ವಿಶ್ವ ಆರೋಗ್ಯ ಸಂಸ್ಥೆ ಖಚಿತಪಡಿಸಿದೆ. ಇನ್ನು 378,290 ಜನರು ಮೃತಪಟ್ಟಿದ್ದಾರೆ 2,934,619  ಮಂದಿ ರೋಗದಿಂದ ಮುಕ್ತಗೊಂಡಿದ್ದಾರೆ. view by country

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

 

Leave a Reply

error: Content is protected !!
LATEST
KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ