NEWSನಮ್ಮರಾಜ್ಯ

ಜೂನ್‌ 20- ರಾಜ್ಯದಲ್ಲಿ 416 ಮಂದಿಗೆ ಸೋಂಕು, 9 ಜನರು ಮೃತ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ವಿಶ್ವಮಾರಿ ಕೊರೊನಾ ಸೋಂಕಿಗೆ ರಾಜ್ಯದಲ್ಲಿ ಇಂದು 416 ಮಂದಿ ಹೊಸದಾಗಿ ಸೇರ್ಪಡೆಯಾಗಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ  8,697ಕ್ಕೆ ಏರಿಕೆಯಾಗಿದೆ.

ಕೆಲ ದಿನಗಳಿಂದ ಕೊರೊನಾಗೆ ಮೃತಪಡುತ್ತಿರುವ ಸಂಖ್ಯೆ ಏರುತ್ತಲೇ ಇದ್ದು  ಇಂದು ಕೂಡ 9  ಮಂದಿ ಹೆಮ್ಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಮೃತ ಸಂಖ್ಯೆ 136ಕ್ಕೆ ಏರಿಕೆ ಆಗಿದೆ. (ಅನ್ಯಕಾರಣಕ್ಕೆ ನಾಲ್ವರು ಸೇರಿ).

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ  https://play.google.com/store/apps/detail

24 ಗಂಟೆಗಳಲ್ಲಿ ರಾಜ್ಯದಲ್ಲಿ 181 ಮಂದಿ ಸೋಂಕಿತರು ಗುಣಮುಖರಾಗಿದ್ದಾರೆ. ಇಲ್ಲಿಯವರೆಗೆ 5,391 ಮಂದಿ ಗುಣಮುಖರಾಗಿ ಮನೆಗೆ ಮರಳಿದ್ದಾರೆ. ಇನ್ನು 3,170 ಸಕ್ರಿಯ ಪ್ರಕರಣಗಳಿವೆ. 416 ಪ್ರಕರಣಗಳಲ್ಲಿ 116 ಮಂದಿ ಹೊರರಾಜ್ಯ ಮತ್ತು 22 ಮಂದಿ ಅಂತಾರಾಷ್ಟ್ರ ಪ್ರಯಾಣದ ಇತಿಹಾಸ ಹೊಂದಿದ್ದಾರೆ.

ರಾಜಧಾನಿ ಬೆಂಗಳೂರಿನಲ್ಲಿ 94, ಬೀದರ್‌ನಲ್ಲಿ 73, ಬಳ್ಳಾರಿ, ರಾಮನಗರದಲ್ಲಿ ತಲಾ 38, ಕಲಬುರಗಿಯಲ್ಲಿ 34, ಮೈಸೂರಿನಲ್ಲಿ 22, ಹಾಸನದಲ್ಲಿ 16, ರಾಯಚೂರಿನಲ್ಲಿ 15, ಉಡುಪಿಯಲ್ಲಿ 13, ಹಾವೇರಿಯಲ್ಲಿ 12, ವಿಜಯಪುರದಲ್ಲಿ 9, ಚಿಕ್ಕಮಗಳೂರಿನಲ್ಲಿ 8, ಧಾರವಾಡ, ಚಿಕ್ಕಬಳ್ಳಾಪುರದಲ್ಲಿ ತಲಾ 5, ದಕ್ಷಿಣ ಕನ್ನಡ, ಕೋಲಾರ, ಮಂಡ್ಯ, ಕೋಲಾರ, ಬೆಂಗಳೂರು ಗ್ರಾಮಾಂತರದಲ್ಲಿ ತಲಾ 4, ದಾವಣಗೆರೆಯಲ್ಲಿ 3, ಬಾಗಲಕೋಟೆ, ಶಿವಮೊಗ್ಗ, ಗದಗ, ತುಮಕೂರಿನಲ್ಲಿ ತಲಾ 2, ಬೆಳಗಾವಿ, ಚಾಮರಾಜನಗರದಲ್ಲಿ ತಲಾ ಒಂದೊಂದು ಪ್ರಕರಣಗಳು ವರದಿಯಾಗಿವೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ  https://play.google.com/store/apps/detail

ಬೆಂಗಳೂರಿನಲ್ಲಿ46, 56, 39 ವರ್ಷದ ವ್ಯಕ್ತಿ ಮತ್ತು ಅಂತಾರಾಜ್ಯ ಪ್ರಯಾಣದ ಹಿನ್ನೆಲೆಯುಳ್ಳ 66 ವರ್ಷದ ಮಹಿಳೆ ಮೃತಪಟ್ಟಿದ್ದಾರೆ.   ದಾವಣಗೆರೆಯಲ್ಲಿ 90 ವರ್ಷದ ವ್ಯಕ್ತಿ, ಚಿಕ್ಕಮಗಳೂರಿನಲ್ಲಿ 72 ವರ್ಷದ ಮಹಿಳೆ, ಉಡುಪಿಯಲ್ಲಿ 54, ಬೀದರ್‌ನಲ್ಲಿ 51 ವರ್ಷದ ಗೃಹಿಣಿ, 65 ವರ್ಷದ ಪುರುಷ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ದೇಶದಲ್ಲಿ 400,724 ಕ್ಕೇರಿದ ಸೋಂಕಿತರ ಸಂಖ್ಯೆ
ಇನ್ನು ದೇಶದಲ್ಲಿ ಈವರೆಗೆ 400,724  ಮಂದಿಗೆ ಸೋಂಕು ಇರುವುದು ದೃಢಪಟ್ಟಿದೆ 13,035  ಮಂದಿ ಮೃತಪಟ್ಟಿದ್ದಾರೆ. 216,730 ಮಂದಿ ರೋಗಮುಕ್ತರಾಗಿದ್ದಾರೆ. ಪ್ರಪಂಚಾದ್ಯಂತ ಈವರೆಗೆ8,805,608 ಜನರಲ್ಲಿ ಸೋಂಕು ಇರುವುದನ್ನು ವಿಶ್ವ ಆರೋಗ್ಯ ಸಂಸ್ಥೆ ಖಚಿತಪಡಿಸಿದೆ. ಇನ್ನು463,541 ಜನರು ಮೃತಪಟ್ಟಿದ್ದಾರೆ 4,657,731 ಮಂದಿ ರೋಗದಿಂದ ಮುಕ್ತಗೊಂಡಿದ್ದಾರೆ. view by country

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ  https://play.google.com/store/apps/detail

Leave a Reply

error: Content is protected !!
LATEST
KSRTC ನಿರ್ದೇಶಕರ ಆದೇಶಕ್ಕೂ ಕಿಮ್ಮತ್ತಿಲ್ಲ: ಅಮಾನತು ತೆರವು ಮಾಡದೆ ಚಾಲಕನಿಗೆ ಮಾನಸಿಕ ಹಿಂಸೆ ಕೊಡುತ್ತಿರುವ ತುಮಕೂರು ... ಪ್ರಜ್ವಲ್ ರೇವಣ್ಣ ಪ್ರಕರಣ: ಅಶ್ಲೀಲ ವಿಡಿಯೋಗಳ ಹಂಚಿಕೆ ಅತ್ಯಂತ ಪಾಪ ಕೃತ್ಯ, ಸಂತ್ರಸ್ತೆಯರಿಗೆ ಅವಮಾನ- ಹೈಕೋರ್ಟ್ ವಿಶ್ವವಿಖ್ಯಾತ ಮೈಸೂರು ದಸರಾ ಗಂಡಾನೆಗಳ ನಡುವೆ ಕಿತ್ತಾಟ: ದಿಕ್ಕಾಪಾಲಾಗಿ ಓಡಿದ ಜನರು ಬನ್ನೂರು: ಬಸವನಹಳ್ಳಿ ಬಳಿ ಬೈಕ್‌ಗೆ ಡಿಕ್ಕಿ ಹೊಡೆದ ಹೆಣ್ಣು ಚಿರತೆ ಸಾವು ಅ.3ರಿಂದ ಶಾಲೆಗಳಿಗೆ ದಸರಾ ರಜೆ: ಶಾಲಾ ಶಿಕ್ಷಣ ಇಲಾಖೆ ಆದೇಶ BMTC ನೌಕರರ ₹400 ಕೋಟಿ ಗ್ರಾಚ್ಯುಟಿ, ಗಳಿಕೆ ರಜೆ ನಗದೀಕರಣ ಬಿಡುಗಡೆಗೆ ಮೀನಮೇಷ..!! KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್