NEWSಕೃಷಿನಮ್ಮರಾಜ್ಯ

 ರಾಜ್ಯದ ಪ್ರಮುಖ ವಾಣಿಜ್ಯ  ಹತ್ತಿ ಬೆಳೆ ರೈತರಿಗೆ ಸಲಹೆಗಳು

ವಿಜಯಪಥ ಸಮಗ್ರ ಸುದ್ದಿ

ಮ್ಮ ರಾಜ್ಯದ ಪ್ರಮುಖ ವಾಣಿಜ್ಯ ಬೆಳೆಗಳಲ್ಲಿ ಹತ್ತಿಯು ಒಂದಾಗಿದ್ದು, 2020ನೇ ಮುಂಗಾರು ಹಂಗಾಮಿನಲ್ಲಿ ದಾವಣಗೆರೆ ಜಿಲ್ಲೆಯಲ್ಲಿ 10,427 ಹೆಕ್ಟೇರ್ ಪ್ರದೇಶದಲ್ಲಿ ಹತ್ತಿ ಬೆಳೆಯುವ ಗುರಿ ಹೊಂದಲಾಗಿದೆ. ಸುಧಾರಿತ ಕ್ರಮಗಳಾದ ಸುಧಾರಿತ ತಳಿಗಳು, ಬೇಸಾಯ ಪದ್ಧತಿಗಳು, ಕೀಟ ಹಾಗೂ ರೋಗಗಳ ಸಮಗ್ರ ನಿರ್ವಹಣಾ ಕ್ರಮಗಳನ್ನು ಅನುಸರಿಸುವುದರಿಂದ ನಿರೀಕ್ಷಿತ ಗುಣಮಟ್ಟದ ಇಳುವರಿಯ ಜೊತೆಗೆ ಉತ್ತಮ ಆದಾಯ ಗಳಿಸಬಹುದಾಗಿದೆ.

ಬಿತ್ತನೆ ಕಾಲ:

ವಿಜಾತಿ ಶಕ್ತಿಮಾನ್ ತಳಿಗಳನ್ನು ಮೇ ತಿಂಗಳಿನಿಂದ ಜೂನ್ ತಿಂಗಳ ವರೆಗೆ (ಡಿ.ಹೆಚ್.ಬಿ-105, ಡಿ.ಸಿ.ಹೆಚ್ 32 ಮತ್ತು  ವರಲಕ್ಷ್ಮಿ ತಳಿಗಳು) ಹಾಗೂ  ಸ್ವಜಾತಿ ಶಕ್ತಿಮಾನ್ ತಳಿಗಳನ್ನು ಮೇ ತಿಂಗಳಿನಿಂದ ಜುಲೈ (ಎನ್.ಹೆಚ್.ಹೆಚ್44 ಮತ್ತು ಡಿ.ಹೆಚ್.ಹೆಚ್11 ತಳಿಗಳು) ತಿಂಗಳವರೆಗೆ ಬೆಳೆಯಬಹುದಾಗಿದೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ
https://play.google.com/store/apps/detail

ಬೀಜ ಪ್ರಮಾಣ ಮತ್ತು ಅಂತರ

ಪ್ರತಿ ಎಕರೆಗೆ 0.5 ಕಿ.ಗ್ರಾಂ. ಗುಂಜು ರಹಿತ ಹತ್ತಿಯ ಬೀಜಗಳನ್ನು ಸಾಲಿನಿಂದ ಸಾಲಿಗೆ 3 ಅಡಿ ಅಂತರದಲಿ ಹಾಗೂ ಗಿಡದಿಂದ ಗಿಡಕ್ಕೆ 2 ಅಡಿ ಅಂತರ ನೀಡಿ ಬಿತ್ತನೆ ಮಾಡುವುದು. ಪ್ರಮಾಣಿತ ಬಿಟಿ ಹತ್ತಿ ಬೀಜಗಳನ್ನು ಅಧಿಕೃತ ಮಾರಾಟಗಾರರಿಂದ ಖರೀದಿಸಿ ಬೆಳೆಯಬಹುದಾಗಿದೆ.

  • ಬಿಟಿ ಹತ್ತಿಯ ಜೊತೆಗೆ ಬಿಟಿ ಹತ್ತಿರಹಿತ ಹತ್ತಿಯನ್ನುಅಥವಾ ಬಿಟಿ ಹತ್ತಿ ಪ್ಯಾಕ್‍ನೊಂದಿಗೆ ನೀಡುವ ರೆಫ್ಯೂಜಿ ಬೀಜಗಳನ್ನು ರೈತರು ತಪ್ಪದೆ ಆಶ್ರಯ ಬೆಳೆಗಳಾಗಿ ಬೆಳೆಯುವುದು.
  • ಹೆಚ್ಚು ಗುಲಾಬಿ ಕಾಯಿ ಕೊರಕದ ಭಾಧೆಯಿದ್ಧಲ್ಲಿ ಅಲ್ಪ ಕಾಲಾವಧಿ ಬಿಟಿ ಹತ್ತಿ ಹೈಬ್ರಿಡ್Àನ್ನು ಬೆಳೆಯುವುದು.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ
https://play.google.com/store/apps/detail

ಬೀಜೋಪಚಾರ
 ಪ್ರಾರಂಭದಲ್ಲಿ ಬರುವ ಹತ್ತಿ ರಸ ಹೀರುವ ಕೀಟಗಳನ್ನು ಹತೋಟಿಯಲ್ಲಿಡಲು ಪ್ರತಿ ಕಿ.ಗ್ರಾಂ. ಹತ್ತಿ ಬೀಜವನ್ನು 10 ಗ್ರಾಂ ಇಮಿಡಾಕ್ಲೋಪ್ರಿಡ್-70 ಡಬ್ಲ್ಯೂ.ಎಸ್. ನಿಂದ ಉಪಚಾರ ಮಾಡಿ ಬಿತ್ತನೆ ಮಾಡುವುದು.

ಪೋಷಕಾಂಶಗಳ ನಿರ್ವಹಣೆ
 ಬಿತ್ತನೆಗೆ 2-3 ವಾರಗಳ ಮೊದಲು 5 ಟನ್ ಕೊಟ್ಟಿಗೆ ಗೊಬ್ಬರ / ಸಾವಯವ ಗೊಬ್ಬರವನ್ನು ಪ್ರತಿ ಎಕರೆಗೆ ಬಳಸಬೇಕು. ಹಾಗೂ ಪ್ರತಿ ಎಕರೆಗೆ 60ಕಿ.ಗ್ರಾಂ. ಸಾರಜನಕ, 30 ಕಿ.ಗ್ರಾಂ. ರಂಜಕ, 30 ಕಿ.ಗ್ರಾಂ. ಪೊಟ್ಯಾಷ್ ರಾÀಸಾಯನಿಕ ಗೊಬ್ಬರಗಳ ಶಿಪಾರಸಿದ್ದು, ಬಿತ್ತನೆ ಸಮಯದಲ್ಲಿ ಅರ್ಧದಷ್ಟು ಸಾರಜನಕ, ಪೂರ್ತಿ ಪ್ರಮಾಣದ ರಂಜಕ & ಪೊಟ್ಯಾಶ್ ಗೊಬ್ಬರಗಳನ್ನು ಹಾಕಬೇಕು. ಉಳಿದ ಶೇ.50ರ ಸಾರಜನಕವನ್ನು ಬಿತ್ತನೆಯಾದ 60 ದಿನಗಳ ನಂತರ ಮೇಲುಗೊಬ್ಬರವಾಗಿ ನೀಡುವುದು. ಬಿತ್ತನೆ ಸಮಯದಲ್ಲಿ 10ಕಿ.ಗ್ರಾಂ. ಮೆಗ್ನಿಷಿಯಂ ಸಲ್ಫೇಟ್ ಪ್ರತಿ ಎಕರೆಗೆ ಬಳಸುವುದು.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ
https://play.google.com/store/apps/detail

ಹತ್ತಿಯಲ್ಲಿ ಸಮತೋಲನ ಗೊಬ್ಬರಗಳ ಬಳಕೆ ಅತೀ ಅಗತ್ಯವಾಗಿದ್ದು, ಕೆಲವೊಂದು ರೈತರು ಪೊಟ್ಯಾಷ್ ಗೊಬ್ಬರಗಳನ್ನು ಬಳಸುತ್ತಿರುವುದಿಲ್ಲ. ಇದರಿಂದಾಗಿ ಕಾಯಿಯ ಗಾತ್ರ ಕಡಿಮೆಯಾಗುವುದಲ್ಲದೆ ಇಳುವರಿಯು ಕಡಿಮೆಯಾಗುವುದು. ಪೊಟ್ಯಾಷ್ ಗೊಬ್ಬರದ ಬಳಕೆಯಿಂದಾಗಿ ಕಾಂಡ ಮತ್ತು ಕಾಯಿಯ ತೊಗಟೆ ದಪ್ಪನಾಗಿ ರೋಗ ಹಾಗೂ ಕೀಟದ ಹಾವಳಿ ಕಡಿಮೆಯಾಗುವುದು.

ಕಳೆ ನಿರ್ವಹಣೆ
 ಬಿತ್ತನೆಯಾದ ದಿವಸ/ಮಾರನೆ ದಿವಸ ಎಕರೆಗೆ 400 ಗ್ರಾಂಡೈಯುರಾನ್ ಶೇ.80 ಅಥವಾ 800 ಮಿ.ಲೀ. ಫ್ಲೋಕ್ಲೋರಾಲಿನ್ 45ಇ.ಸಿ. ಅಥವಾ 1.3ಲೀ. ಪೆಂಡಿಮೆಥಾಲಿನ್ ಶೇ.30ಇ.ಸಿ. ಅಥವಾ 800ಮಿ.ಲೀ. ಬ್ಯೂಟಾಕ್ಲೋರ್ 50 ಇ.ಸಿ.ನ್ನು 300 ಲೀಟರ್ ನೀರಿನಲ್ಲಿ ಬೆರಸಿ ಸಿಂಪಡಿಸುವುದು. ಸಿಂಪರಣೆ ಸಮಯದಲ್ಲಿ ಮಣ್ಣಿನಲ್ಲಿ ಸಾಕಷ್ಟು ತೇವಾಂಶವಿರಬೇಕು. ಬಿತ್ತಿದ 30 ದಿವಸಗಳ ನಂತರ 3 ರಿಂದ 4 ಬಾರಿ ಅಳವಾಗಿ ಎಡೆಕುಂಟೆ ಹೊಡೆಯುವುದು.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ
https://play.google.com/store/apps/detail

ಅಂತರ ಬೆಳೆ
 ಹತ್ತಿಯಜೊತೆಗೆ ಮೆಣಸಿನಕಾಯಿ, ಸೊಯಾ ಆವರೆ, ಬೀನ್ಸ್, ಅಲಸಂದೆ, ಉದ್ದು ಬೆಳೆಗಳನ್ನು 1:1 ಅನುಪಾತದಲ್ಲಿ ಬೆಳೆಯಬಹುದಾಗಿದೆ. ಜೋಡಿ ಸಾಲು ಪದ್ಧತಿ: ಹತ್ತಿಯನ್ನು 120 ಸೆಂ.ಮೀ-60 ಸೆಂ.ಮೀ-120 ಸೆಂ.ಮೀ ಅಂತರz ಜೋಡಿ ಸಾಲುಗಳಲ್ಲಿ, ಗಿಡದಿಂದ ಗಿಡಕ್ಕೆ 60 ಸೆಂ.ಮೀ ಅಂತರ ನೀಡಿ ಬೆಳೆಯುವುದರಿಂದ ವಿವಿಧ ಅಂತರ ಬೆಳೆಗಳನ್ನು ಬೆಳೆಯಬಹುದಾಗಿದೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ
https://play.google.com/store/apps/detail

ಪ್ರಮುಖ ಸಲಹೆಗಳು

  • ಪ್ರತಿ ವರ್ಷ ಒಂದೇ ಜಮೀನಿನಲ್ಲಿ ಹತ್ತಿಯು ನಂತರ ಹತ್ತಿ ಬೆಳೆಯದೆ ಬೆಳೆ ಪರಿವರ್ತನೆ ಮಾಡುವುದು.
  • ಪ್ರಮಾಣಿತ ಹಾಗೂ ಶಿಫಾರಸ್ಸು ಮಾಡಿದ ಬಿತ್ತನೆ ಬೀಜಗಳನ್ನು ಬಳಸುವುದು.
  • ಬಿ.ಟಿ. ಹತ್ತಿಯ ಜೊತೆಗೆ ಬಿ.ಟಿ. ಹತ್ತಿ ರಹಿತ ಹತ್ತಿಯನ್ನು ಅಥವಾ ಬಿ.ಟಿ. ಹತ್ತಿ ಪ್ಯಾಕ್‍ನೊಂದಿಗೆ ನೀಡುವ ರೆಫ್ಯೂಜಿ ಬೀಜಗಳನ್ನು ರೈತರು ತಪ್ಪದೆ ಆಶ್ರಯ ಬೆಳೆಗಳಾಗಿ ಬೆಳೆಯುವುದು.
  • ಹೊಲದ ಸುತ್ತಲೂ ಪ್ರತಿ 20 ಸಾಲು ಹತ್ತಿಗೆ 1 ಸಾಲಿನಲ್ಲಿ ಬೆಂಡೆ ಬೀಜ ಹಾಕುವುದರಿಂದ ಕೀಟಗಳ ಹಾವಳಿ ಕಡಿಮೆಯಾಗುವುದು.
  • ಶಿಫಾರಸ್ಸಿನ ರಸಾಯನಿಕ ಗೊಬ್ಬರಗಳ ಜೊತೆಗೆ ಸಾವಯವ ಗೊಬ್ಬರಗಳನ್ನು ಬಳಸುವುದರಿಂದ ಅಧಿಕ ಇಳುವರಿಯೊಂದಿಗೆ ಮಣ್ಣಿನ ಫಲವತ್ತತೆ ಕಾಪಾಡಿಕೊಳ್ಳಲು ಸಾಧ್ಯ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ
https://play.google.com/store/apps/detail

ಹೆಸರು ಬೆಳೆಯ ಬೇಸಾಯ ಕ್ರಮಗಳು:  ತಳಿಗಳು: ಪಿ.ಎಸ್.16 ಬೀಜ ಪ್ರಮಾಣ ಮತ್ತು ಅಂತರ:  ಎಕರೆಗೆ 6-8 ಕಿ.ಗ್ರಾಂ ಬಿತ್ತನೆ ಬೀಜ ಬಳಸುವುದು. ಸಾಲಿನಿಂದ ಸಾಲಿಗೆ 12 ಅಂಗುಲ ಹಾಗೂ ಗಿಡದಿಂದಗಿಡಕ್ಕೆ 4 ಅಂಗುಲ ಅಂತರ ನೀಡಿ ಬಿತ್ತನೆ ಮಾಡುವುದು.

ಬೀಜೋಪಚಾರ
ಎಕರೆಗೆ ಬೇಕಾಗುವ ಬೀಜಕ್ಕೆ 200 ಗ್ರಾಂ. ರೈಜೋಬಿಯಂ ಹಾಗೂ 200 ಗ್ರಾಂ ಪಿ.ಎಸ್.ಬಿ.ಯನ್ನು ಅಂಟುದ್ರಾವಣ ಬಳಸಿ ಉಪಚರಿಸುವುದು.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ
https://play.google.com/store/apps/detail

ಪೋಷಕಾಂಶ ನಿರ್ವಹಣೆ

  • ಎಕರೆಗೆ 3 ಟನ್ ಸಾವಯವ ಗೊಬ್ಬರವನ್ನು ಬಿತ್ತನೆ 2-3 ವಾರಗಳ ಮುನ್ನ ಬಳಸುವುದು.
  • ಎಕರೆಗೆ 5 ಕೆ.ಜಿ. ಸಾರಜನಕ, 10 ಕೆ.ಜಿ. ರಂಜಕ ಹಾಗೂ 10 ಕೆ.ಜಿ. ಪೊಟ್ಯಾಷ್‍ನ್ನು ಬಿತ್ತನೆ ಸಮಯದಲ್ಲಿ ನೀಡುವುದು.

ಕಳೆ ನಿರ್ವಹಣೆ

  • ಬಿತ್ತಿದ ದಿವಸ/ ಮಾರನೆಯ ದಿವಸ ಪ್ರತಿ ಎಕರೆಗೆ 1.3 ಲೀ ಪೆಂಡಿಮಿಥಲಿನ್ 30ಇ.ಸಿ ಕಳೆನಾಶಕವನ್ನು 300 ಲೀ ನೀರಿನಲ್ಲಿ ಬೆರೆಸಿ ಸಿಂಪಡಿಸುವುದು.

ಸಸ್ಯ ಸಂರಕ್ಷಣೆ

  • ಸಸ್ಯ ಸಂರಕ್ಷಣಾ ಕ್ರಮಗಳನ್ನು ಕೀಟ ಮತ್ತು ರೋಗಬಾಧೆ ಕಂಡಾಗ ಮಾತ್ರ ತೆಗೆದುಕೊಳ್ಳಬೇಕು.
  • ಎಲೆ ಜಿಗಿ ಹುಳು, ಸಸ್ಯ ಹೇನು ಹತೋಟಿಗಾಗಿ 1.7ಮಿ.ಲೀ. ಡೈಮಿಥೋಯೇಟ್-30 ಇ.ಸಿ.ನ್ನು 250 ಲೀ. ಸಿಂಪರಣಾ ದ್ರಾವಣದೊಂದಿಗೆ ಸಿಂಪಡಿಸುವುದು.
  • ಬೂದಿ ರೋಗದ ಹತೋಟಿಗೆ ಕಾರ್ಬೆನ್‍ಡೈಜಿಂ. 50 ಡಬ್ಲ್ಯೂಪಿನ್ನು ಒಂದು ಗ್ರಾಂ.ನಂತೆ ಪ್ರತಿ ಲೀಟರ್ ನೀರಿಗೆ ಬೆರೆಸಿ ಸಿಂಪಡಿಸುವುದು.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ
https://play.google.com/store/apps/detail

ಉದ್ದು ಬೆಳೆಯ ಬೇಸಾಯ ಕ್ರಮಗಳು: ತಳಿ:- ಕರಂಗಾವ್-3, ಟಿ-9, ರಶ್ಮಿ (ಎಲ್.ಬಿ.ಜಿ.625) ಬೀಜಗಳ ಪ್ರಮಾಣ 8-10 ಕೆ.ಜಿ. ಪ್ರತಿ ಎಕರೆಗೆ.

ಬೀಜ ಪ್ರಮಾಣ ಮತ್ತು ಅಂತರ:  ಎಕರೆಗೆ 6-8 ಕಿ.ಗ್ರಾಂ ಬಿತ್ತನೆ ಬೀಜ ಬಳಸುವುದು. ಸಾಲಿನಿಂದ ಸಾಲಿಗೆ 12 ಅಂಗುಲ ಹಾಗೂ ಗಿಡದಿಂದ ಗಿಡಕ್ಕೆ 4 ಅಂಗುಲ ಅಂತರ ನೀಡಿ ಬಿತ್ತನೆ ಮಾಡುವುದು.

ಬೀಜೋಪಚಾರ: ಬಿತ್ತನೆಗೆ ಮುಂಚಿತವಾಗಿ ಬರ ನಿರೋಧಕ ಗುಣ ಹೆಚ್ಚಿಸಲು ಶೇ.2 ರಕ್ಯಾಲ್ಸಿಯಂಕ್ಲೋರೈಡ್ ದ್ರಾವಣದಲ್ಲಿ ಅರ್ಧತಾಸು ನೆನೆಸಿ, ನಂತರ ನೆರಳಿನಲ್ಲಿ ಕನಿಷ್ಠ 7 ತಾಸು ಒಣಗಿಸಬೇಕು ನಂತರ ಎಕರೆಗೆ ಬೇಕಾಗುವ ಬೀಜಕ್ಕೆ 200 ಗ್ರಾಂ. ರೈಜೋಬಿಯಂ ಹಾಗೂ 200 ಗ್ರಾಂ ಪಿ.ಎಸ್.ಬಿ.ಯನ್ನು ಅಂಟು ದ್ರಾವಣ ಬಳಸಿ ಉಪಚರಿಸುವುದು.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ
https://play.google.com/store/apps/detail

Leave a Reply

error: Content is protected !!
LATEST
160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ ಮೇಲುಸೇತುವೆ-ಕೆಳಸೇತುವೆಗಳ ನಿರ್ವಹಣೆ ಸರಿಯಾಗಿ ಮಾಡಿ: ತುಷಾರ್ ಗಿರಿನಾಥ್