ಬೆಂಗಳೂರು: ಸಚಿವಾಲಯದ ಎಲ್ಲಾ ಕಚೇರಿಗಳಲ್ಲಿ ಜೂನ್ 10 ರಿಂದ ಜಾರಿಗೆ ಬರುವಂತೆ “ಇ-ಆಫೀಸ್”ಅನ್ನು ಅನುಷ್ಠಾನಗೊಳಿಸಲಾಗಿದೆ ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ.
ಅದೇ ರೀತಿ ‘ಇ-ಆಫೀಸ್” ತಂತ್ರಾಶವನ್ನು ಬಳಸಿ 1.11.2019 ರಿಂದ ಜಾರಿಗೆ ಬರುವಂತೆ ನನ್ನ ಕಚೇರಿಯಿಂದ ಸಚಿವಾಲಯದ ಎಲ್ಲಾ ಇಲಾಖೆಗಳು/ಅಧೀನ ಸಂಸ್ಥೆಗಳಿಗೆ “ಇ-ಆಫೀಸ್” ಮೂಲಕವೇ ವ್ಯವಹರಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail
ರಾಜ್ಯ ಮಟ್ಟದ ಎಲ್ಲಾ ಇಲಾಖೆಗಳ ಮುಖ್ಯಸ್ಥರ ಕಚೇರಿ, ಎಲ್ಲಾ ಪ್ರಾದೇಶಿಕ ಆಯುಕ್ತರ ಕಚೇರಿ, ಜಿಲ್ಲಾಧಿಕಾರಿಗಳ, ಜಿಲ್ಲಾ ಪಂಚಾಯಿತಿ, ಪೊಲೀಸ್ ವರಿಷ್ಠಾಧಿಕಾರಿಗಳ, ಉಪ ಅರಣ್ಯ ಸಂರಕ್ಷಣಾಧಿಕಾರಿ (ಪ್ರಾದೇಶಿಕ) ಹಾಗೂ ಉಪ ಅರಣ್ಯ ಸಂರಕ್ಷಣಾಧಿಕಾರಿ (ಸಾಮಾಜಿಕ)ಗಳ ಕಚೇರಿಗಳಲ್ಲಿ ಜೂನ್ 1 ರಿಂದ ಜಾರಿಗೆ ಬರುವಂತೆ “ಇ-ಅಫೀಸ್”ಅನ್ನು ಜಾರಿಗೆ ತರಲಾಗಿದೆ ಎಂದರು.
ಕೊರೊನಾ ಸೋಂಕು ದಿನದಿಂದ ದಿನ ಏರಿಕೆಯಾಗುತ್ತಿರುವುದರಿಂದ ಇನ್ನು ಮುಂದೆ ಕಡತಗಳನ್ನು ಭೌತಿಕ ರೂಪದಲ್ಲಿ ಸಲ್ಲಿಸುವ ಬದಲಾಗಿ ನನ್ನ ಕಚೇರಿಗೆ ಇ-ಅಫೀಸ್” ಮೂಲಕ ಮಾತ್ರ ಕಡತ ಮತ್ತು ಪತ್ರಗಳನ್ನು ಸಲ್ಲಿಸಬೇಕು ಹಾಗೂ ಎಲ್ಲಾ ಸಚಿವರು ನಿಮ್ಮ ಕಚೇರಿಗಳಲ್ಲಿ “ಇ-ಆಫೀಸ್” ತಂತ್ರಾಶವನ್ನು ಅನುಷ್ಠಾನಗೊಳಿಸಿ ಎಲ್ಲ ಕಡತ ಹಾಗೂ ಪತ್ರಗಳ ಈ ತಂತ್ರಾಂಶದ ಮೂಲಕ ನಿರ್ವಹಿಸಲು ಅಗತ್ಯ ಕ್ರಮ ವಹಿಸುವಂತೆ ಎಲ್ಲಾ ಸಚಿವರು ಮತ್ತು ಮುಖ್ಯ ಕಾರ್ಯದರ್ಶಿಗಳು ಸೂಚನೆ ನೀಡಿದ್ದಾರೆ.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail