NEWSಕೃಷಿನಮ್ಮರಾಜ್ಯ

ಬಿಪಿಎಲ್‌ ಕಾರ್ಡ್‌ ರದ್ದು ನೆಪದಲ್ಲಿ ರೈತರ ಅನ್ನದ ತಟ್ಟೆಗೆ ಕೈ ಹಾಕುವುದು ಮೂರ್ಖತನ

ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಸರಣಿ ಟ್ವಿಟ್‌ನಲ್ಲಿ ಅಸಮಾಧಾನ   

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಟ್ರ್ಯಾಕ್ಟರ್‌, ವಾಹನ ಇರುವ ರೈತರು ಬಿಪಿಎಲ್‌ ಕಾರ್ಡ್‌ಗಳನ್ನು ಹಿಂದಿರುಗಿಸಬೇಕು, ಇಲ್ಲವಾದರೆ ಕಾನೂನು ಕ್ರಮ ಜರುಗಿಸಲಾಗುತ್ತದೆ ಎಂದು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಹೇಳಿದ್ದಾರೆ. ಇದು ಮೂರ್ಖತನದ ಸೂಚನೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ಈ ಕುರಿತು ಸರಣಿ ಟ್ವಿಟ್‌ ಮಾಡಿರುವ ಮಾಜಿ ಸಿಎಂ ಎಚ್‌ಡಿಕೆ ಅರ್ಹ ಫಲಾನುಭವಿಗಳಿಗೆ ಸವಲತ್ತು ಸಿಗಬೇಕು. ಅದಕ್ಕಾಗಿ ರೈತರ ಅನ್ನದ ತಟ್ಟೆಗೆ ಕೈ ಹಾಕಬಾರದು. ಸಾರ್ವಜನಿಕ ಪಡಿತರ ವಿತರಣೆ ವ್ಯವಸ್ಥೆಯಲ್ಲಿ ದೋಷಗಳಿವೆ. ಪಟ್ಟಭದ್ರ ಹಿತಾಸಕ್ತಿಗಳಿವೆ. ಅದನ್ನು ಮೊದಲು ಹೋಗಲಾಡಿಸಬೇಕು ಎಂದು ಸಲಹೆ ನೀಡಿದ್ದಾರೆ.

ಇನ್ನು ಸರ್ಕಾರ ಅದರತ್ತ ಗಮನ ಹರಿಸಲಿ. ಮಾತಿಗೆ ಮೊದಲು ರೈತರ ಕೊರಳು ಹಿಂಡುವ ತನ್ನ ಎಂದಿನ ಅಭ್ಯಾಸವನ್ನು ಸರ್ಕಾರ ತೊರೆಯಲಿ. ಇಂದಿನ ಪೈಪೋಟಿ ಯುಗದಲ್ಲಿ ಕೃಷಿಕ ಯಂತ್ರ, ವಾಹನಗಳನ್ನು ಹೊಂದುವುದು ಅಗತ್ಯ. ಸರ್ಕಾರ ಅದಕ್ಕೆ ಪ್ರೋತ್ಸಾಹ ನೀಡಬೇಕು. ಬಿಪಿಎಲ್‌ ಕಾರ್ಡ್‌ ಕಿತ್ತುಕೊಳ್ಳುವ ಬೆದರಿಕೆಯೊಡ್ಡಬಾರದು. ಬಿಪಿಎಲ್‌ ಕಾರ್ಡ್‌ ಈಗ ಕೇವಲ ಪಡಿತರಕ್ಕೆ ಮಾತ್ರ ಸೀಮಿತವಲ್ಲ. ಹಲವು ಸವಲತ್ತು, ಸೌಲಭ್ಯಗಳಿಗೆ ಈ ಕಾರ್ಡೆ ಆಧಾರ ಎಂಬುದು ಸರ್ಕಾರದ ಗಮನದಲ್ಲಿರಲಿ ಎಂದು ತಿಳಿಸಿದ್ದಾರೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

ರೈತರಿಗೆ ಬಿಪಿಎಲ್‌ ಕಾರ್ಡ್‌ ಹಿಂದಿರುಗಿಸಲು ಹೇಳಿರುವ ಸರ್ಕಾರ ಅದಕ್ಕೆ ಟ್ರ್ಯಾಕ್ಟರ್‌, ವಾಹನಗಳನ್ನು ಮಾನದಂಡ ಮಾಡಿದೆ. ವೈಜ್ಞಾನಿಕ ಕೃಷಿ, ಟ್ರಾಕ್ಟರ್‌ ಖರೀದಿಗೆ ಪ್ರೋತ್ಸಾಹ ನೀಡುತ್ತಿರುವುದು ಸರ್ಕಾರಗಳೇ ಅಲ್ಲವೇ? ಟ್ರ್ಯಾಕ್ಟರ್‌ ಖರೀದಿಸಲು ಹೇಳಿ, ಅದನ್ನೇ ಮುಂದಿಟ್ಟು ಬಿಪಿಎಲ್‌ ಕಾರ್ಡ್‌ ಕಿತ್ತುಕೊಳ್ಳುವುದು ಮೂರ್ಖತನವಲ್ಲವೇ?  ಹೀಗೆ ರೈತರ ಮೇಲೆ ದೌರ್ಜನ್ಯ ಎಸಗುವ, ಗುಂಡಿಕ್ಕುವ, ಕಾನೂನು ಕ್ರಮದ ಅಸ್ತ್ರ ಪ್ರಯೋಗಿಸಲು ಈ ಸರ್ಕಾರ ತುದಿಗಾಲಿನ ಮೇಲೆ ನಿಂತಂತೆ ಕಾಣುತ್ತಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

@hd_kumaraswamy

Leave a Reply

error: Content is protected !!
LATEST
ಪತ್ನಿ ಜೊತೆ 40 ವರ್ಷಗಳ ಹಿಂದೆ ಕೋಪ ಮಾಡಿಕೊಂಡಿದ್ದ ಪತಿ- ಸಾಯುವ ವೇಳೆಯೂ ಮಾತಾಡಲಿಲ್ಲ ! ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಯಲ್ಲಿ 2 ತಿಂಗಳಲ್ಲೇ₹ 1.96 ಕೋಟಿ ಕಾಣಿಕೆ ಸಂಗ್ರಹ ಕಡ್ಡಾಯವಾಗಿ ಮಣ್ಣಿನ ಪರೀಕ್ಷೆ ಮಾಡಿಸಿ: ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಸಾದ್ ಕೆ.ಆರ್‌.ಪೇಟೆ: ಚೌಡೇಶ್ವರಿ ಅಮ್ಮನವರ ದೇಗುಲದಲ್ಲಿ ಆಷಾಢ ಶುಕ್ರವಾರ ಸಂಭ್ರಮ ಸಂಸತ್‌ನಲ್ಲಿ ಕನ್ನಡಿಗರ ಪರ ಧ್ವನಿ ಎತ್ತಿ: ರಾಜ್ಯದ ಎನ್‌ಡಿಎ ಸಂಸದರಿಗೆ ಎಎಪಿಯ ಡಾ. ಮುಖ್ಯಮಂತ್ರಿ ಚಂದ್ರು ಆಗ್ರಹ “ಶಕ್ತಿ" ಯೋಜನೆಯಿಂದ ಸಾರಿಗೆ ನಿಗಮಗಳ ಆದಾಯ ಹೆಚ್ಚಾಗಿದೆ- ಆದರೆ ನೌಕರರಿಗೆ ವೇತನಕೊಡಲು ಹಣವಿಲ್ಲ- ಎಂಥಾ ಹೇಳಿಕೆ ಇದು ಸಾ... KRS ಭರ್ತಿ: ಅಣೆಕಟ್ಟೆಯಿಂದ ಒಂದು ಲಕ್ಷ ಕ್ಯುಸೆಕ್‌ಗೂ ಅಧಿಕ ಪ್ರಮಾಣದ ನೀರು ಬಿಡುಗಡೆ- ಕಾವೇರಿ ಕೊಳ್ಳದ ಜನರಿಗೆ ಎಚ್ಚರಿ... ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಗೆ ಯತ್ನ: ಕಳ್ಳನ ಹೆಡೆಮುರಿಕಟ್ಟಿದ ಮಹಿಳಾ ಎಸ್‌ಐ ಕೃಷ್ಣರಾಜಪೇಟೆ: ಶ್ರೀ ಚೌಡೇಶ್ವರಿ ಅಮ್ಮನವರ ಕರಗ ಮಹೋತ್ಸವ ಅದ್ದೂರಿ ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಗೆ ಹರಿದು ಬಂತು ಕೋಟಿ ಕೋಟಿ ಹಣ