NEWSನಮ್ಮರಾಜ್ಯ

ನಾಳೆಯಿಂದ ತುರ್ತು ಪ್ರಕರಣಗಳ ವಿಚಾರಣೆಗಷ್ಟೆ ಅವಕಾಶ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕೊರೊನಾ ಸೋಂಕು ರಾಜ್ಯದಲ್ಲಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಉಚ್ಚ ನ್ಯಾಯಾಲಯ ಹಾಗೂ ಜಿಲ್ಲಾ ನ್ಯಾಯಾಲಯಗಳಲ್ಲಿ ತುರ್ತು ಪ್ರಕರಣಗಳ ವಿಚಾರಣೆಗೆ ನಿಗದಿಪಡಿಸಿರುವ ಮಾರ್ಗಸೂಚಿಯನ್ನು ಜೂನದದ 15  ರಿಂದ ಜಾರಿಗೆ ಬರುವಂತೆ ಮಾರ್ಪಾಡು ಮಾಡಿರುವುದಾಗಿ ಹೈ ಕೋರ್ಟ್‌ ತಿಳಿಸಿದೆ.

ಇದೇ 15 ರಿಂದ ಎರಡು ವಾರಗಳ ಅವಧಿಗೆ ಮಾತ್ರ ಒಂದು ಕೋರ್ಟ್ ನಲ್ಲಿ ದಿನಕ್ಕೆ ಬೆಳಗಿನ ಅವಧಿಯಲ್ಲಿ 10 ಮತ್ತು ಮಧ್ಯಾಹ್ನದ ಅವಧಿಯಲ್ಲಿ 10 ಪ್ರಕರಣಗಳನ್ನು ಮಾತ್ರ ವಿಚಾರಣೆ ನಡೆಸಲು ಕೈಗೆತ್ತಿಕೊಳ್ಳುವಂತೆ  ಮಾರ್ಗಸೂಚಿಯಲ್ಲಿ ವಿವರಿಸಿದೆ.

ಒಂದು ವೇಳೆ ವಕೀಲರು ವಾದ ಮಂಡನೆಗೆ ಇಚ್ಛಿಸಿದರೆ ವಿಡಿಯೋ ಕಾನ್ಫರೆನ್ಸ್ ಸೌಲಭ್ಯ ಕಲ್ಪಿಸಲಾಗುವುದು. ನ್ಯಾಯಾಲಯದ ಆವರಣಕ್ಕೆ ವಾದ ಮಂಡಿಸಲಿರುವ ವಕೀಲರನ್ನು ಹೊರತುಪಡಿಸಿ ಇತರರಿಗೆ ಪ್ರವೇಶವಿಲ್ಲ ಎಂದು  ತಿಳಿಸಲಾಗಿದೆ.

ಇನ್ನು ಮುಂದಿನ ಎರಡು ವಾರಗಳ ಪರಿಸ್ಥಿತಿ ಅವಲೋಕಿಸಿ ಮಾರ್ಗಸೂಚಿ ಮಾರ್ಪಾಡು ಮಾಡುವ ಬಗ್ಗೆ ನಿರ್ಧರಿಸಲಾಗುವುದು ಎಂದು ಉಚ್ಚ ನ್ಯಾಯಾಲಯ ಪ್ರಕಟಣೆ ಹೊರಡಿಸಿದೆ.

Leave a Reply

error: Content is protected !!
LATEST
KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ