NEWSನಮ್ಮರಾಜ್ಯ

ಹೈದರಾಬಾದ್‌ನಿಂದ ಬಂದ ದಂಪತಿ ಕೈಯಲ್ಲಿ ಕ್ವಾರಂಟೈನ್‌ ಸೀಲ್‌, ಆದರೂ ಸುತ್ತಾಟ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಹೈದರಾಬಾದ್‌ನಿಂದ ಬಂದ ದಂಪತಿಯ ಕೈಯಲ್ಲಿ ಹೋಂ ಕ್ವಾರಂಟೈನ ಸೀಲ್‌ ಇರುವುದನ್ನು ನೋಡಿ ಪ್ರಯಾಣಿಕರು ಭಯಗೊಂಡ ಘಟನೆ ಬೆಂಗಳೂರು ಕೆಂಪೇಗೌಡ ಬಸ್‌ ನಿಲ್ದಾಣದಲ್ಲಿ ಇಂದು ಬೆಳಗ್ಗೆ ಜರುಗಿದೆ.

ಈ ದಂಪತಿ ಇಂದು ರೈಲಿನ ಮೂಲಕ ನಗರಕ್ಕೆ ಬಂದಿದ್ದಾರೆ. ಬೆಂಗಳೂರಿನಿಂದ ಚಿತ್ರದುರ್ಗಕ್ಕೆ ಅವರು ತೆರಳಬೇಕಿದ್ದು, ಅದಕ್ಕಾಗಿ ಮೆಜೆಸ್ಟಿಕ್‌ಗೆ ಬಂದು ಬಸ್‌ ಹತ್ತಲು ಮುಂದಾಗಿದ್ದಾರೆ. ಆದರೆ ಅವರ ಕೈಯನ್ನು ಗಮನಿಸಿದ ಪ್ರಯಾಣಿಕರು ಸ್ಥಳದಲ್ಲೇ ಇದ್ದ ಸಾರಿಗೆ ಸಿಬ್ಬಂದಿ ಗಮನಕ್ಕೆ ತಂದಿದ್ದಾರೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ    https://play.google.com/store/apps/detail

ಸಾರಿಗೆ ಸಿಬ್ಬಂದಿ ಅವರನ್ನು ತಡೆದು ವಿಚಾರಿಸಿದಾಗ ನಾವು ಹೈದರಾಬಾದ್‌ನಿಂದ ಬಂದಿದ್ದೇವೆ. ಅಲ್ಲಿ ಟ್ರೈನ್‌ ಮೂಲಕ ಬಂದಿದ್ದು, ರೈಲು ಸಿಬ್ಬಂದಿ ನಿಮ್ಮ ಊರಿಗೆ ಹೋಗಿ ಹೋಂ ಕ್ವಾರಂಟೈನ್‌ ಆಗಿ ಎಂದು ತಿಳಿಸಿದ್ದಾರೆ. ಆದರೆ ನೀವು ಬಸ್‌ ಹತ್ತಲು ಬಿಡುತಿಲ್ಲ ಎಂದು ಹೇಳಿದ್ದಾರೆ.

ಸಾರಿಗೆ ಸಿಬ್ಬಂದಿ ನಿಮ್ಮ ಕೈಯಲ್ಲಿ ಹೋಂ ಕ್ವಾರಂಟೈನ್‌ ಸೀಲ್‌ ಇರುವುದರಿಂದ ನಾವು ನಿಮಗೆ ಬಸ್‌ನಲ್ಲಿ ಪ್ರಯಾಣಿಸಲು ಅವಕಾಶ ಮಾಡಿಕೊಡಲಾಗುವುದಿಲ್ಲ. ಒಂದುವೇಳೆ ನಿಮಗೆ ಅವಕಾಶ ಮಾಡಿಕೊಟ್ಟರೆ ನಮ್ಮ ಕೆಲಸಕ್ಕೆ ತೊಂದರೆಯಾಗುತ್ತದೆ ಎಂದು ಹೇಳಿ, ನೀವು ಖಾಸಗಿ ವಾಹನದಲ್ಲಿ ಪ್ರಯಾಣಿಸಿ ಎಂದು ಸಲಹೆ ನೀಡಿದರು.

ಆದರೆ, ಹೋಂ ಕ್ವಾರಂಟೈನ್‌ನಲ್ಲಿ ಇರಬೇಕು ಎಂದು ಸೀಲ್‌ ಹಾಕಿದ ಅಧಿಕಾರಿಗಳು ಅವರನ್ನು ಗಮನಿಸದೆ ಹೊರಗೆ ಹೇಗೆ ಬಿಟ್ಟರು ಎಂಬ ಪ್ರಶ್ನೆ ಕಾಡುತ್ತಿದೆ. ಅಧಿಕಾರಿಗಳ ಈ ಎಡವಟ್ಟಿನಿಂದ ಇನ್ನು ಎಷ್ಟು ಜನರಿಗೆ ಕೊರೊನಾ ವಕ್ಕರಿಸಲಿದೆಯೋ ಎಂಬ ಆತಂಕವು ವ್ಯಕ್ತವಾಗುತ್ತಿದೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ    https://play.google.com/store/apps/detail

 

Leave a Reply

error: Content is protected !!
LATEST
160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ ಮೇಲುಸೇತುವೆ-ಕೆಳಸೇತುವೆಗಳ ನಿರ್ವಹಣೆ ಸರಿಯಾಗಿ ಮಾಡಿ: ತುಷಾರ್ ಗಿರಿನಾಥ್