NEWSದೇಶ-ವಿದೇಶ

ಐಸಿಸ್‌ ಪ್ರಮುಖ ಉಗ್ರ ಅಬ್ದುಲ್ ಮತೀನ್ ಸುಳಿವು ನೀಡಿದವರಿಗೆ 3 ಲಕ್ಷ ರೂ. ಬಹುಮಾನ

ರಾಷ್ಟ್ರೀಯ ತನಿಖಾ ದಳ ಘೋಷಣೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಐಸಿಸ್‌ ಪ್ರಮುಖ ಉಗ್ರ ಅಬ್ದುಲ್ ಮತೀನ್ ತಲೆಮರೆಸಿಕೊಂಡಿದ್ದು ಆತನ ಸುಳಿವು ನೀಡಿದವರಿಗೆ 3 ಲಕ್ಷ ರೂ. ಬಹುಮಾನ ನೀಡಲಾಗುವುದು ಎಂದು ರಾಷ್ಟ್ರೀಯ ತನಿಖಾ ದಳ ಘೋಷಿಸಿದೆ.

ಇತ್ತೀಚೆಗೆ ಬೆಂಗಳೂರು ನಗರದಲ್ಲಿ ಐಸಿಸ್‌ ಪ್ರೇರಿತ ಉಗ್ರರನ್ನು ಬಂಧಿಸಲಾಗಿತ್ತು. ಪ್ರಸ್ತುತ ತಲೆಮರೆಸಿ ಕೊಂಡಿರುವ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯ ಸೊಪ್ಪುಗುಡ್ಡೆ ಪ್ರದೇಶದ ಫಿಶ್ ಮಾರ್ಕೆಟ್ ರಸ್ತೆ ನಿವಾಸಿಯಾಗಿರುವ ಅಬ್ಧುಲ್ ಮತೀನ್ ತಮಿಳುನಾಡಿನಲ್ಲಿ ಹಿಂದು ಮುಖಂಡನ ಹತ್ಯೆಯಲ್ಲಿ ಭಾಗಿಯಾಗಿದ್ದ. ಈ ಹತ್ಯೆಗೆ  ಬೆಂಗಳೂರಿನ ಸದ್ದುಗುಂಟೆಪಾಳ್ಯದ ಪಿ.ಜಿಯಲ್ಲಿ ಕುಳಿತು ಸಂಚು ರೂಪಿಸಲಾಗಿತ್ತು ಎಂದು ತಿಳಿದುಬಂದಿತ್ತು.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

ಹೀಗಾಗಿ ನಿಖರ ಮಾಹಿತಿಯ ಮೇಲೆ ಪಿಜಿ ಮೇಲೆ ದಾಳಿ ನೆಡೆಸಿದ್ದ ಎನ್ಐಎ ತನಿಖಾಧಿಕಾರಿಗಳ ತಂಡ. ಪಿಜಿ ಮುಖ್ಯಸ್ಥ ಮೆಹಬೂಬ್ ಪಾಷಾ ಸೇರಿದಂತೆ ದೇಶದ ವಿವಿಧೆಡೆ 12 ಜನ ಉಗ್ರರನ್ನ ಬಂಧಿಸಿತ್ತು. ಆದರೆ, ಮೆಹಬೂಬ್ ಜೊತೆ ನಿಕಟ ಸಂಪರ್ಕ ಹೊಂದಿದ್ದ ಅಬ್ಧುಲ್ ಮತೀನ್ ಪರಾರಿಯಾಗಿದ್ದ. ಹೀಗಾಗಿ ಈತನ ಕುರಿತು ಸುಳಿವು ನೀಡುವರಿಗೆ ರಾಷ್ಟ್ರೀಯ ತನಿಖಾ ದಳ 3 ಲಕ್ಷ ರೂಪಾಯಿ ಬಹುಮಾನ ಘೋಷಣೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

Leave a Reply

error: Content is protected !!
LATEST
ರಾಜಕಾಲುವೆ ಒತ್ತುವರಿ ತೆರವುಗೊಳಿಸಿ, ನೆರೆ ಭೀತಿಯಿಂದ ಬೆಂಗಳೂರಿಗರ ರಕ್ಷಿಸಿ: ಡಿಸಿಎಂಗೆ ಎಎಪಿ ರಾಜ್ಯಾಧ್ಯಕ್ಷ ಆಗ್ರಹ ಮಧ್ಯಮ ವರ್ಗದ ವ್ಯಕ್ತಿ ಕೇಳಿದ ಪ್ರಶ್ನೆಗೆ ಉತ್ತರಿಸಲಾಗದೆ ಮೌನಕ್ಕೆ ಶರಣಾದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ BBMP-ಡೆಂಗ್ಯೂ ನಿಯಂತ್ರಣಕ್ಕೆ ಮುನ್ನೆಚ್ಚರಿಕೆ : ಸುರಳ್ಕರ್ ವಿಕಾಸ್ ಕಿಶೋರ್ ಉಚಿತ ಕೋಳಿ ಸಾಕಾಣಿಕೆ ತರಬೇತಿಗೆ 18 ರಿಂದ 45 ವರ್ಷದವರಿಂದ ಅರ್ಜಿ ಆಹ್ವಾನ ಪ್ರತಿಷ್ಠಿತ ಶಾಲೆಗಳಿಗೆ ಸೇರ ಬಯಸುವ ಮಕ್ಕಳಿಂದ ಅರ್ಜಿ ಆಹ್ವಾನ: ಷರತ್ತು ಅನ್ವಯ ವಸತಿ ಶಾಲೆಗಳಲ್ಲಿ ಪ್ರಥಮ ಪಿಯುಸಿ ತರಗತಿ ಪ್ರವೇಶಕ್ಕೆ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ KSRTC: ₹8.76 ಲಕ್ಷ ನಷ್ಟವುಂಟು ಮಾಡಿರುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಸರ್ಕಾರದ ಮುಖ್ಯ ಕಾರ್ಯದರ್ಶ... BMTC ಚಾಲಕರಿಗೆ ಕೂಡಲೇ ವೇತನ ಪಾವತಿಸಿ: ಎಎಪಿಯ ಜಗದೀಶ್ ವಿ. ಸದಂ ಆಗ್ರಹ ಬಸವನಹಳ್ಳಿ: ನಿವೃತ್ತ ಸಹಾಯಕ ತೋಟಗಾರಿಕಾ ಇಲಾಖೆಯ ನಿರ್ದೇಶಕ ಚಿಕ್ಕಮಾಯಿಗೌಡರ ಪತ್ನಿ ಸಿದ್ದಮ್ಮ ನಿಧನ KSRTC ನೌಕರರ 2024ರ ವೇತನ ಪರಿಷ್ಕರಣೆ, 38 ತಿಂಗಳ ಹಿಂಬಾಕಿ ಬಿಡುಗಡೆಗೆ ಜೂನ್‌ 6ರಬಳಿಕ ನಿರ್ಧಾರ: ರಾಮಲಿಂಗಾರೆಡ್ಡಿ