NEWSಕೃಷಿನಮ್ಮರಾಜ್ಯ

ಭೂ ಸುಧಾರಣೆ ತಿದ್ದುಪಡಿ ಕಾಯ್ದೆ ಸುಗ್ರೀವಾಜ್ಞೆ ಮೂಲಕ ಜಾರಿ

ಮುಂದಿನ ಸಂಪುಟ ಸಭೆಯಲ್ಲಿ ಒಪ್ಪಿಗೆ l ಕಂದಾಯ ಸಚಿವ ಆರ್.ಅಶೋಕ್ ಹೇಳಿಕೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಸುಗ್ರೀವಾಜ್ಞೆ ಮೂಲಕ ಕರ್ನಾಟಕ ಭೂ ಸುಧಾರಣಾ ಕಾಯ್ದೆ 79ಎ 79 ಬಿ ತಿದ್ದುಪಡಿಮಾಡಿ ಜಾರಿಗೆ ತರಲು ಸರ್ಕಾರ ನಿರ್ಧರಿಸಿದ್ದು, ಇದಕ್ಕೆ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ಪಡೆಯಲಾಗುವುದು ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದ್ದಾರೆ.

ಶುಕ್ರವಾರ ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಕೊರೊನಾ ಸೋಂಕು ಹಿನ್ನೆಲೆಯಲ್ಲಿ ವಿಧಾನಮಂಡಲ ಅಧಿವೇಶನ ಸದ್ಯಕ್ಕೆ ನಡೆಯುವುದು ಅನುಮಾನ. ಹಾಗಾಗಿ ತಿದ್ದುಪಡಿಯನ್ನು ಸುಗ್ರೀವಾಜ್ಞೆ ಮೂಲಕ ತಂದು ಮುಂದಿನ ಅಧಿವೇಶನದಲ್ಲಿ ವಿಧೇಯಕ ಮಂಡನೆ ಮಾಡಿ ತಿದ್ದುಪಡಿ ಮಸೂದೆಗೆ ಅಂಗೀಕಾರ ಪಡೆದುಕೊಳ್ಳುತ್ತೇವೆ ಎಂದು ಹೇಳಿದರು.

ಭೂಮಿ ಮಾರಾಟದ ಮೇಲಿನ ನಿರ್ಬಂಧ ಸಡಿಲಿಸಲು ಈ ಕಾಯ್ದೆ ತಿದ್ದುಪಡಿಗೆ ನಿರ್ಧರಿಸಲಾಗಿದೆ. ವಿಶೇಷಾಜ್ಞೆಗೆ ಸಂಪುಟ ಸಭೆಯಲ್ಲಿ ಒಪ್ಪಿಗೆ ಪಡೆದ ಬಳಿಕ ರಾಜ್ಯಪಾಲರ ಅಂಕಿತಕ್ಕೆ ಕಳುಹಿಸಲಾಗುವುದು ಎಂದು ತಿಳಿಸಿದರು.

ಎಸಿ, ತಹಸೀಲ್ದಾರ್ ಕಚೇರಿಯಲ್ಲಿ ಜನರಿಗೆ ಆಗುತ್ತಿರುವ ಕಿರುಕುಳ ತಪ್ಪಿಸುವ ಉದ್ದೇಶದಿಂದ ಭೂಸುಧಾರಣಾ ಕಾಯ್ದೆಗೆ ತಿದ್ದುಪಡಿ ತರುತ್ತಿದ್ದೇವೆ ಎಂದರು.

ನಮ್ಮ ರಾಜ್ಯದ ಐಟಿ ಬಿಟಿ ಜನರು ಈಗಿರುವ ಕಾನೂನಿನಿಂದ ಭೂಮಿ ಖರೀದಿಸಲು ಸಾಧ್ಯವಾಗದೆ ನೆರೆ ರಾಜ್ಯಗಳಿಗೆ ಹೋಗುತ್ತಿದ್ದಾರೆ. ಹಾಗಾಗಿ ಯಾರು ಬೇಕಾದರೂ ಕೃಷಿ ಕ್ಷೇತ್ರಕ್ಕೆ ಬರಲು ಈ ಕಾಯ್ದೆ ತರುತ್ತಿದ್ದೇವೆ ಎಂದು ಅಶೋಕ್ ಸಮರ್ಥಿಸಿಕೊಂಡರು.

ರಾಜ್ಯದಲ್ಲಿ 11.79 ಲಕ್ಷ ಹೆಕ್ಟೇರ್ ಭೂಮಿ ಪಾಳು ಬಿದ್ದಿದೆ. ಇದರಲ್ಲಿ ಕೃಷಿ ಚಟುವಟಿಕೆ ನಡೆಯುತ್ತಿಲ್ಲ. ಕೃಷಿ ಕ್ಷೇತ್ರಕ್ಕೆ ಬರುವ ಆಸಕ್ತಿ ಇರುವವರಿಗೆ ಇನ್ನು ಮುಂದೆ ಇದರಿಂದ ಅವಕಾಶ ಸಿಗಲಿದೆ ಎಂದರು.

ಐಟಿ-ಬಿಟಿ ಜನರು ಕೃಷಿ ಕಡೆ ಆಸಕ್ತಿ ತಳೆಯುತ್ತಿದ್ದಾರೆ ಹಾಗಾಗಿ ಹಳ್ಳಿಗೆ ನಡೆಯಿರಿ ನೇಗಿಲಯೋಗಿ ಆಗಿ ಎನ್ನುವ ಘೋಷ ವಾಕ್ಯದೊಂದಿಗೆ ಯೋಜನೆ ಜಾರಿಗೊಳಿಸುತ್ತೇವೆ. ಇದರಿಂದ ಕೃಷಿ ಉತ್ಪನ್ನವೂ ಹೆಚ್ಚಾಗುವುದು ಎಂದು ತಿಳಿಸಿದರು.

Leave a Reply

error: Content is protected !!
LATEST
KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ