NEWSನಮ್ಮರಾಜ್ಯ

ನಾಳೆ ಕರ್ಫ್ಯೂ ಇರಲ್ಲ ಮಾಮೂಲಿನಂತೆ ಜನ ಜೀವನ 

ಸರ್ಕಾರದ ಮುಖ್ಯ ಕಾರ್ಯದರ್ಶಿ ಜತೆ ಚರ್ಚಿಸಿದ ಬಳಿಕ ಸಿಎಂ ಬಿಎಸ್‌ವೈ ಸೂಚನೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಭಾನುವಾರ (ನಾಳೆ) ಹೇರಲಾಗಿದ್ದ  ಸಂಪೂರ್ಣ  ಕರ್ಫ್ಯೂವನ್ನು ರಾಜ್ಯ ಸರ್ಕಾರ ವಾಪಸ್‌ ಪಡೆದಿದೆ. ಈ ಕುರಿತು ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್‌ ಜತೆ ಚರ್ಚಿಸಿದ ಬಳಿಕ ಸಿಎಂ ಯಡಿಯೂರಪ್ಪ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.

ವೀಕ್‌ಡೆಸ್‌ಗಳಲ್ಲಿ ಎಲ್ಲರೂ ಕೆಲಸದಲ್ಲಿ ಬಿಸಿಯಾಗಿರುತ್ತಾರೆ. ಇನ್ನು ರಜದಿನವಾದ ಭಾನುವಾರ ಸ್ವಲ್ಪ ಬಿಡುವಾಗುವುದರಿಂದ ಅಂದು ಮನೆಗೆ ಬೇಕಾದ ದಿನ ಸೇರಿ ಇತರೆ ವಸ್ತುಗಳನ್ನು ಕೊಂಡುಕೊಳ್ಳಲು ಅಂಥವರಿಗೆ ಅನುವು ಮಾಡಿಕೊಡಬೇಕು ಎಂಬ ದೃಷ್ಟಿಯಿಂದ ನಾಳೆಯ ಕರ್ಫ್ಯೂವನ್ನು ಸಡಿಲಿಸಿ ಎಂದಿನಂತೆ ಅವಕಾಶ ಮಾಡಿಕೊಡಲಾಗಿದೆ ಎನ್ನಲಾಗಿದೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

ಇನ್ನು ನಾಳೆ ಕರ್ಫ್ಯೂವನ್ನು ಸಡಿಲಿಸಿರುವುದರಿಂದ ದಿನ ನಿತ್ಯದಂತೆ ಆಟೋ, ಕ್ಯಾಬ್‌ ಬಿಎಂಟಿಸಿ, ಕೆಎಸ್‌ಆರ್‌ಟಿಸಿ ಬಸ್‌ಗಳ ಸಂಚಾರ ಮಾಮೂಲಿನಂತೆ ಇರಲಿದೆ. ಜತೆಗೆ ಸಲೂನ್‌ ಶಾಪ್‌ಗಳು ತೆರೆದಿರಲಿವೆ ಎಂದು ತಿಳಿದು ಬಂದಿದೆ.

ರಾಜ್ಯಾದ್ಯಂತ ಕರ್ಫ್ಯೂವನ್ನು ಸಡಿಲಿಸಿರುವುದರಿಂದ ಅಂತರ್‌ ಜಿಲ್ಲೆಗೆ ಹೋಗುವವರಿಗೆ ಮತ್ತು ಜಿಲ್ಲೆ ಒಳಗಡೆ ವ್ಯವಹರಿಸುವವರಿಗೂ ಇದು ತುಂಬ ಅನುಕೂಲವಾಗಲಿದೆ ಎಂದು ಜನರು ಕೂಡ ಖುಷಿಯಲ್ಲಿದ್ದಾರೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ