NEWSಶಿಕ್ಷಣ-

ಶಾಲೆ ತೆರೆಯಲು ಸರ್ಕಾರಕ್ಕೆ ಏಕೆ ಆತುರ?

ಖಾಸಗಿ ಶಾಲೆಗಳ ಒತ್ತಡಕ್ಕೆ ಮಣಿದಿದೆಯೇ ಸರ್ಕಾರ l ಮಕ್ಕಳ ವಿಚಾರದಲ್ಲಿ ಚೆಲ್ಲಾಟ ಸಲ್ಲ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಖಾಸಗಿ ಶಾಲೆಗಳ ಒತ್ತಡಕ್ಕೆ ಮಣಿದು ಸರ್ಕಾರ ಶಾಲೆಗಳನ್ನು ಆರಂಭಿಸಲು ಆತುರ ತೋರುತ್ತಿದೆಯೇ ಎಂಬ ಅನುಮಾನ ಪಾಲಕರನ್ನು ಕಾಡುತ್ತಿದೆ.

ಕೊರೊನಾ ವಿಶ್ವಮಾರಿ ದಿನದಿಂದ ದಿನಕ್ಕೆ ತನ್ನ ಅಟ್ಟಹಾಸ ಮೆರೆಯುತ್ತಿರುವ ಈ ಹೊತ್ತಿನಲ್ಲಿ ಶಾಲೆ ತೆರೆದರೆ ಮಕ್ಕಳು ಸಾಮಾಜಿಕ  ಅಂತರ ಕಾಯ್ದುಕೊಳ್ಳಲು ಸಾಧ್ಯವಿದೆಯೇ? ಈ ರೀತಿ ಮಕ್ಕಳ ಜೀವದ ಜತೆ ಆಟವಾಡಲು ಸರ್ಕಾರ ಮುಂದಾಗುವುದು ಸರಿಯಲ್ಲ ಎಂದು ಪಾಲಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

ಖಾಸಗಿ ಶಾಲೆಗಳ ಮಾಲೀಕರ ಖಜಾನೆ ತುಂಬಿಸಲು ಈ ರೀತಿಯ ಕ್ರಮಕ್ಕೆ ಸರ್ಕಾರ ಮುಂದಾಗಿದೆ. ಇದರಿಂದ ಕೊರೊನಾ ಸೋಂಕು ಹೆಚ್ಚಾಗುವುದೇ ಹೊರತು. ಮಕ್ಕಳ ಜ್ಞಾನ ವೃದ್ಧಿಗೆ ಯಾವುದೇ ಪ್ರಯೋಜನ ವಾಗದು ಎಂದು ಪಾಲಕರು ಅಸಮಾಧಾನ ವ್ಯಕ್ತಪಡಿಸಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಅಭಿಯಾನವನ್ನು ಆರಂಭಿಸಿದ್ದಾರೆ.

ಇನ್ನು ಕೊರೊನಾ ಮಹಾಮಾರಿಯಿಂದ ದೂರವಿರಲು ದೊಡ್ಡವರೇ  ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಆಗುತ್ತಿಲ್ಲ. ಇಂಥ ಪರಿಸ್ಥಿಯಲ್ಲಿ ಮಕ್ಕಳು ದೂರ ದೂರ ಕೂರಲು ಸಾಧ್ಯವಿದೆಯೇ ಎಂದು ಪಾಲಕರು ಕೇಳುತ್ತಿದ್ದಾರೆ. ಆದರೆ ಈ ಬಗ್ಗೆ ಸರ್ಕಾರ ಯಾವರೀತಿ ಕ್ರಮ ಕೈಗೊಂಡಿದೆ ಎಂಬುದನ್ನು ಸ್ಪಷ್ಟವಾಗಿ ತಿಳಿಸುತ್ತಿಲ್ಲ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

ಆದರೆ, ಮಕ್ಕಳು ಒಂದಾರು ತಿಂಗಳು ಶಾಲೆಗೆ ಹೋಗದಿದ್ದರೆ ಕಲಿಕೆಯಲ್ಲಿ ಹಿಂದೆ ಬೀಳುವರೆ, ಅವರ ಜ್ಞಾನ ಕುಂದುವುದೆ? ಏಕೆ ರೀತಿಯ ನಿರ್ಧಾರಕ್ಕೆ ಸರ್ಕಾರ ಮುಂದಾಗಿದೆ. ಇದು ಎಷ್ಟು ಸರಿ ಎಂದು ಪಾಲುಕರು ಕಿಡಿಕಾರುತ್ತಿದ್ದಾರೆ.

ಮೊದಲು ಕೊರೊನಾ ನಿಯಂತ್ರಿಸುವತ್ತ ಗಮನಕೊಡಿ ಆ ನಂತರ ಶಾಲೆಗಳನ್ನು ಓಪನ್‌ ಮಾಡಿ. ಅದನ್ನು ಬಿಟ್ಟು ಸರ್ಕಾರ ಮಕ್ಕಳ ರೀತಿಯಲ್ಲೇ ನಡೆದುಕೊಳ್ಳುವ ಮೂರ್ಖತನವನ್ನು ತೋರಿಸುವುದು ಬೇಡ ಎಂದು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

ಇಂಥ ಮೂರ್ಖ ಶಿಕ್ಷಣ ಸಚಿವರು ನಮಗೆ ಬೇಕ ಎಂಬುದನ್ನು ಪಾಲಕರು ಆಕ್ರೋಶದಿಂದಲೇ ಹೊರಹಾಕುತ್ತಿದ್ದು, ಕೊರೊನಾ ನಿಯಂತ್ರಣಕ್ಕೆ ಬರುವವರೆಗೂ ಇಂಥ ದುಸ್ಸಾಹಸಕ್ಕೆ ಕೈಹಾಕುವುದನ್ನು ಬಿಡಬೇಕು ಎಂದು ಹೇಳುತ್ತಿದ್ದಾರೆ.

ಪಾಲಕರ ಸಲಹೆಯನ್ನು ಮೀರಿ ಶಾಲೆ ತೆರೆಯಲು ಅನುವು ಮಾಡಿಕೊಟ್ಟರೆ ದೊಡ್ಡ ಹೋರಾಟವನ್ನು ಮಾಡಬೇಕಾಗುತ್ತದೆ ಎಂದು ಮಕ್ಕಳ ಪಾಲನಾ ಸಂಘ ಸಂಸ್ಥೆಗಳು ಮತ್ತು ಪಾಲಕರು ಎಚ್ಚರಿಕೆ ನೀಡಿದ್ದಾರೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

 

Leave a Reply

error: Content is protected !!
LATEST
KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ