ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಇಂದು ರಣಕೇಕೆ ಹಾಕಿದ್ದು, 299 ಹೊಸ ಪ್ರಕರಣಗಳು ದೃಢಪಟ್ಟಿದ್ದು ಈ ಮೂಲಕ ರಾಜ್ಯದಲ್ಲಿ 3221 ಮಂದಿ ಸೋಂಕಿಗೆ ಒಳಗಾಗಿದ್ದಾರೆ. ಅದರಲ್ಲಿ ಇಬ್ಬರು ಮೃತಪಟ್ಟಿದ್ದಾರೆ.
ಇಂದು ರಾಯಚೂರು ಜಿಲ್ಲೆಯೊಂದರಲ್ಲೇ 83 ಮಂದಿಗೆ ಕೊರೊನಾ ಸೋಂಕು ತಗುಲಿದ್ದು, ಈವರೆಗೆ ಕೊರೊನಾದಿಂದ ಅಸುನೀಗಿದವರ ಸಂಖ್ಯೆ 53 ಕ್ಕೆ ಏರಿಕೆ ಆಗಿದೆ. (ಇದರಲ್ಲಿ ಎರಡು ಅನ್ಯಕಾರಣದಿಂದ ಬಲಿಯಾಗಿದ್ದಾರೆ). ಅದರಲ್ಲಿ ಇಂದು ಬೀದರ್ (ರೋಗಿ ನಂ. 2965) 75 ವರ್ಷದ ವೃದ್ಧ ಮತ್ತು ರಾಯಚೂರಿನ (ರೋಗಿ ನಂ. 2597) 50 ವರ್ಷದ ವ್ಯಕ್ತಿ ಮೃತಪಟ್ಟಿದ್ದಾರೆ.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail
ಇಂದು ದೃಢಪಟ್ಟಿರುವ 299 ಪ್ರಕರಣಗಳ ಪೈಕಿ ಬಹುತೇಕರು ಅಂತಾರಾಜ್ಯ ಸಂಪರ್ಕ ಹೊಂದಿದ್ದಾರೆ. 253 ಜನ ಅಂತಾರಾಜ್ಯ ಪ್ರಯಾಣಿಕರಿದ್ದಾರೆ. ಇನ್ನು ಯಾದಗಿರಿಯಲ್ಲಿ 44, ಬೀದರ್ನಲ್ಲಿ 33, ಕಲಬುರಗಿಯಲ್ಲಿ 28, ಬೆಂಗಳೂರಿನಲ್ಲಿ 21, ವಿಜಯಪುರ 26, ಮಂಡ್ಯ ಮತ್ತು ಬೆಳಗಾವಿಯಲ್ಲಿ ತಲಾ 13, ದಕ್ಷಿಣ ಕನ್ನಡದಲ್ಲಿ 21, ಉಡುಪಿಯಲ್ಲಿ 10, ದಾವಣಗೆರೆಯಲ್ಲಿ 6, ಉತ್ತರ ಕನ್ನಡದಲ್ಲಿ 5, ಬಳ್ಳಾರಿಮ ಶೀವಮೊಗ್ಗ ಮತ್ತು ಕೋಲಾರದಲ್ಲಿ ತಲಾ ಒಂದೊಂದು ಪ್ರಕರಣ ಪತ್ತೆಯಾಗಿವೆ ಎಂದು ಸಂಜೆ ಆರೋಗ್ಯ ಇಲಾಖೆ ನೀಡಿದ ಬುಲೆಟಿನ್ನಲ್ಲಿ ಅಧಿಕಾರಿಗಳು ಖಚಿತಪಡಿಸಿದ್ದಾರೆ.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail
ಇದುವರೆಗೆ 1218 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ಮರಳಿದ್ದಾರೆ. 1950 ಮಂದಿಯಲ್ಲಿ ಸಕ್ರಿಯವಾಗಿದೆ. ಪ್ರಸ್ತುತ 15 ಮಂದಿ ಕೊರೊನಾ ಸೋಂಕಿತರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ದೇಶದಲ್ಲಿ 183,008 ಕ್ಕೇರಿದ ಸೋಂಕಿತರ ಸಂಖ್ಯೆ
ಇನ್ನು ದೇಶದಲ್ಲಿ ಈವರೆಗೆ 183,008 ಮಂದಿಗೆ ಸೋಂಕು ಇರುವುದು ದೃಢಪಟ್ಟಿದೆ. 5,188 ಮಂದಿ ಮೃತಪಟ್ಟಿದ್ದಾರೆ. 87,179 ಮಂದಿ ರೋಗಮುಕ್ತರಾಗಿದ್ದಾರೆ. ಪ್ರಪಂಚಾದ್ಯಂತ ಈವರೆಗೆ 6,191,647 ಜನರಲ್ಲಿ ಸೋಂಕು ಇರುವುದನ್ನು ವಿಶ್ವ ಆರೋಗ್ಯ ಸಂಸ್ಥೆ ಖಚಿತಪಡಿಸಿದೆ. ಇನ್ನು 371,472 ಜನರು ಮೃತಪಟ್ಟಿದ್ದಾರೆ 2,759,158 ಮಂದಿ ರೋಗದಿಂದ ಮುಕ್ತಗೊಂಡಿದ್ದಾರೆ. view by country
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail