CrimeNEWSನಮ್ಮಜಿಲ್ಲೆ

ಆತ್ಮಹತ್ಯೆಯೋ, ಅಪಘಾತವೋ: ರೈಲು ಡಿಕ್ಕಿ ಹೊಡೆದ ರಭಸಕ್ಕೆ ವ್ಯಕ್ತಿ ದೇಹ ಛಿದ್ರಛಿದ್ರ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು:  ನಗರದ ಮಲ್ಲೇಶ್ವರ ರೈಲು ನಿಲ್ದಾಣದಲ್ಲಿ ಮಂಗಳವಾರ ಬೆಳಗಿನ ಜಾವ ಅಪರಿಚಿತ ವ್ಯಕ್ತಿಯೊಬ್ಬ ರೈಲಿಗೆ ಸಿಲುಕಿ ಮೃತಪಟ್ಟಿರುವ ಘಟನೆ ನಡೆದಿದೆ.

ಮೃತ ವ್ಯಕ್ತಿ 40-45 ವರ್ಷದವರಾಗಿದ್ದು ರೈಲುಗುದ್ದಿದ ರಭಸಕ್ಕೆ ದೇಹ ಗುರುತು ಸಿಗಲಾರದಷ್ಟು ಛಿದ್ರ ಛಿದ್ರವಾಗಿದ್ದು ವ್ಯಕ್ತಿಯ ಗುರುತು ಪತ್ತೆಯಾಗುವುದು ಕಷ್ಟಸಾಧ್ಯವಾಗಿದೆ.

ಘಟನೆಯ ಬಗ್ಗೆ ಸ್ಥಳೀಯರು ಬೆಳಗ್ಗೆ 8 ಗಂಟೆಗೆ ಪೊಲೀಸ್ ಠಾಣೆಗೆ ಮಾಹಿತಿ ನೀಡಿದರು. ಆದರೆ 10 ಗಂಟೆಯಾದರೂ ಪೊಲೀಸರು ಸ್ಥಳಕ್ಕೆ ಬಂದಿರಲಿಲ್ಲ ಮಾಂಸದ ಮುದ್ದೆಯಾಗಿದ್ದ ಮೃತದೇಹ 4-5 ತಾಸು ಹಳಿಗಳ ಮೇಲೆ ಅನಾಥವಾಗಿ ಬಿದ್ದಿತ್ತು. ತುಂಡಾದ ಕೈ ಕಾಲುಗಳನ್ನು ಕಾಗೆ, ಹದ್ದು ಮತ್ತು ನಾಯಿಗಳು ಕಿತ್ತು ತಿನ್ನುತ್ತಿದ್ದ ದೃಶ್ಯ ಭೀಕರವಾಗಿತ್ತು.

ಈ ವ್ಯಕ್ತಿ ಬೆಳಗಿನ ಜಾವ ರೈಲು ನಿಲ್ದಾಣದಲ್ಲಿ ಓಡಾಡುವುದನ್ನು ಗಮನಿಸಿದ್ದಾಗಿ ಪ್ರತ್ಯಕ್ಷದರ್ಶಿಯೊಬ್ಬರು ತಿಳಿಸಿದ್ದು,  ಬಹುಶಃ ಬೆಳಗ್ಗೆ 6.30 ಸುಮಾರಿಗೆ ಈ  ಘಟನೆ ಸಂಭವಿಸಿರಬಹುದು ಎಂದು ಹೇಳಿದ್ದಾರೆ.

ಕೊರೊನಾ ಸೋಂಕಿನ ಭೀತಿಯಿಂದ ಆತ್ಮಹತ್ಯೆ ಮಾಡಿಕೊಂಡಿರುವ ಸಾಧ್ಯತೆ ಇದೆ ಎಂದು ರೈಲ್ವೆ ನಿಲ್ದಾಣದಲ್ಲಿದ್ದ ಪ್ರಯಾಣಿಕರು ಮಾತನಾಡಿಕೊಳ್ಳುತ್ತಿದ್ದರು. ಇದು ಆತ್ಮಹತ್ಯೆಯೋ ಅಥವಾ ಆಕಸ್ಮಿಕ ಘಟನೆಯ ಎನ್ನುವುದು ಇನ್ನೂ ಖಚಿತವಾಗಿಲ್ಲ.

ಮೃತದೇಹವಿದ್ದ  ಸ್ಥಳದಲ್ಲಿ ಯಾವ ವಸ್ತುಗಳು ದೊರೆತಿಲ್ಲ. ಇನ್ನು  ಮುಖ ಗುರುತಿಸಲಾಗದಷ್ಟು ವಿಕಾರವಾಗಿದೆ. ಹೀಗಾಗಿ ವಾರಸುದಾರರನ್ನು ಪತ್ತೆ ಹಚ್ಚುವುದು ಪೊಲೀಸರಿಗೆ ಕಷ್ಟಸಾಧ್ಯವಾಗಿದೆ.

1 Comment

Leave a Reply

error: Content is protected !!
LATEST
KSRTC ನಿರ್ದೇಶಕರ ಆದೇಶಕ್ಕೂ ಕಿಮ್ಮತ್ತಿಲ್ಲ: ಅಮಾನತು ತೆರವು ಮಾಡದೆ ಚಾಲಕನಿಗೆ ಮಾನಸಿಕ ಹಿಂಸೆ ಕೊಡುತ್ತಿರುವ ತುಮಕೂರು ... ಪ್ರಜ್ವಲ್ ರೇವಣ್ಣ ಪ್ರಕರಣ: ಅಶ್ಲೀಲ ವಿಡಿಯೋಗಳ ಹಂಚಿಕೆ ಅತ್ಯಂತ ಪಾಪ ಕೃತ್ಯ, ಸಂತ್ರಸ್ತೆಯರಿಗೆ ಅವಮಾನ- ಹೈಕೋರ್ಟ್ ವಿಶ್ವವಿಖ್ಯಾತ ಮೈಸೂರು ದಸರಾ ಗಂಡಾನೆಗಳ ನಡುವೆ ಕಿತ್ತಾಟ: ದಿಕ್ಕಾಪಾಲಾಗಿ ಓಡಿದ ಜನರು ಬನ್ನೂರು: ಬಸವನಹಳ್ಳಿ ಬಳಿ ಬೈಕ್‌ಗೆ ಡಿಕ್ಕಿ ಹೊಡೆದ ಹೆಣ್ಣು ಚಿರತೆ ಸಾವು ಅ.3ರಿಂದ ಶಾಲೆಗಳಿಗೆ ದಸರಾ ರಜೆ: ಶಾಲಾ ಶಿಕ್ಷಣ ಇಲಾಖೆ ಆದೇಶ BMTC ನೌಕರರ ₹400 ಕೋಟಿ ಗ್ರಾಚ್ಯುಟಿ, ಗಳಿಕೆ ರಜೆ ನಗದೀಕರಣ ಬಿಡುಗಡೆಗೆ ಮೀನಮೇಷ..!! KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್