NEWSನಮ್ಮರಾಜ್ಯರಾಜಕೀಯ

ಬಿಜೆಪಿ-ಕಾಂಗ್ರೆಸ್‌ ಟ್ವಿಟ್‌ವಾರ್‌: ಸುಳ್ಳು ಹೇಳುವುದರಲ್ಲಿ ನಿಮಗೆ ಸಾಟಿಯೇ ಇಲ್ಲ

ವಿಜಯಪಥ ಸಮಗ್ರ ಸುದ್ದಿ
  • ವಿಜಯಪಥ ಸಮಗ್ರ ಸುದ್ದಿ
    ಬೆಂಗಳೂರು: ಸುಳ್ಳು ಹೇಳುವುದರಲ್ಲಿ ನಿಮಗೆ ಸಾಟಿಯೇ ಇಲ್ಲ ಎಂದು ರಾಜ್ಯ ಬಿಜೆಪಿ ರಾಜ್ಯ ಕಾಂಗ್ರೆಸ್‌ ಕಾಲೆಳೆದಿದೆ.

ಬಿಜೆಪಿ ರಾಜ್ಯಯಲ್ಲಿ ಬಂಡ ಸಮರ್ಥನೆಗೆ ಮಿತಿ ಇಲ್ಲ ಎಂದು ರಾಜ್ಯ ಕಾಂಗ್ರೆಸ್‌ ಮಾಡಿದ ಟ್ವೀಟ್‌ಗೆ ಈ ರೀತಿ ಪ್ರತಿಕ್ರಿಯಿಸಿರುವ ಬಿಜೆಪಿ ಆರಂಭದಲ್ಲಿಯೇ ಜನತಾ ಕರ್ಫ್ಯೂ ಮತ್ತು ಲಾಕ್‌ಡೌನ್ ಮೂಲಕ ಕೊರೊನಾ ಮಹಾಮಾರಿಯ ಹರಡುವಿಕೆಯನ್ನು ನಿಯಂತ್ರಿಸಿದ್ದು ಪ್ರಧಾನಿ ಮೋದಿ ಸರ್ಕಾರ ಎಂಬ ಸಮರ್ಥನೆ ನೀಡಿದೆ.

ಇನ್ನು ಮುಂದುವರಿದು ಅಂದಹಾಗೆ 1984 ರಲ್ಲಿ ಮಧ್ಯಪ್ರದೇಶದಲ್ಲಿ ಗ್ಯಾಸ್ ದುರಂತವಾದಾಗ ಆರೋಪಿಯನ್ನು ಕದ್ದು ಮುಚ್ಚಿ ಹೊರಗೆ ಕಳುಹಿಸಿದ ಭಂಡರು ನೀವೇ ಅಲ್ಲವೇ ಎಂದು ಪ್ರಶ್ನಿಸುವ ಮೂಲಕ ತಿರುಗೇಟು ನೀಡಿದೆ.

ಬಂಡ ಸಮರ್ಥನೆಗೆ ಮಿತಿ ಇಲ್ಲ
ಇನ್ನು ರಾಜ್ಯ ಕಾಂಗ್ರೆಸ್‌ ಬಂಡ ಸಮರ್ಥನೆಗೆ ಮಿತಿ ಇಲ್ಲ ಎಂದು ಬಿಜೆಪಿಯನ್ನು ಜರಿದಿದೆ. ಅಲ್ಲದೇ ಕೊರೊನಾ ಬಗ್ಗೆ ನಮ್ಮ ರಾಹುಲ್‌ಗಾಂಧಿ ಆವರು ಮೊದಲೇ ಎಚ್ಚರಿಸಿದ್ದರು. ಅವರ ಮಾತನ್ನು ನಿರ್ಲಕ್ಷಿಸಿ “ನಮಸ್ತೆ ಟ್ರಂಪ್”ನಲ್ಲಿ ತಲ್ಲೀನರಾದಿರಿ ಎಂದು ಚಿವುಟಿದೆ.

ಇನ್ನು 21ದಿನದಲ್ಲಿ ಕೊರೊನಾ ಯುದ್ಧ ಗೆಲ್ಲುತ್ತೇವೆ ಎಂದಿರಿ. ಗಂಟೆ ,ಚಪ್ಪಾಳೆ, ದೀಪ ಎನ್ನುತ್ತಾ ನೀವು ಕೊರೊನಾ ಹೆಸರಲ್ಲಿ ಭ್ರಷ್ಟಾಚಾರ ಮಾಡಿದ್ದು ಬಿಟ್ಟು ಬೇರೇನು ಮಾಡಿದಿರಿ ಎಂದು ರಾಜ್ಯ ಕಾಂಗ್ರೆಸ್‌ ಛೇಡಿಸಿದೆ.

ಒಟ್ಟಾರೆ ರಾಜ್ಯ ಕಾಂಗ್ರೆಸ್‌ ಮತ್ತು ಬಿಜೆಪಿ ನಡುವೆ ಈ ರೀತಿಯ ಟ್ವೀಟ್‌ ಸಮರ ನಡೆಯುತ್ತಿದೆ. ಇದರಿಂದ ಜನರಿಗೆ ಏನು ಲಾಭ ಎಂಬುದನ್ನು ಪ್ರಜ್ಞಾವಂತ ನಾಗರಿಕರು ಕೇಳುತ್ತಿದ್ದಾರೆ. ಅದಕ್ಕೆ ಈ ಎರಡು ಪಕ್ಷದವರು ಸಮಂಜಸ ಉತ್ತರ ನೀಡುತ್ತಾರೆ ಎಂಬ ಆಶಾ ಭಾವನೆಯಿಂದ ಕಾಯುತ್ತಿರುವುದಾಗಿಯೂ ಹೇಳಿದ್ದಾರೆ. ಏನು ಮಾಡುತ್ತಾರೋ ನಾವು ಕಾದು ನೋಡೋಣ.

Leave a Reply

error: Content is protected !!
LATEST
160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ ಮೇಲುಸೇತುವೆ-ಕೆಳಸೇತುವೆಗಳ ನಿರ್ವಹಣೆ ಸರಿಯಾಗಿ ಮಾಡಿ: ತುಷಾರ್ ಗಿರಿನಾಥ್