NEWSನಮ್ಮರಾಜ್ಯಶಿಕ್ಷಣ-

ಸರ್ಕಾರಿ ಶಾಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್‌

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಖಾಸಗಿ ಶಾಲೆಗಳ ವ್ಯಾಮೋಹ ಬಿಡಿ ಎಂದು ಪಾಲಕರಿಗೆ ಸರ್ಕಾರ ಎಷ್ಟು ಬಾರಿ ಮನವಿ ಮಾಡಿಕೊಂಡರು ಕ್ಯಾರೆ ಎನ್ನುತ್ತಿರಲಿಲ್ಲ. ಆದರೆ ಈಗ ಕಾಲ ಬದಲಾಗಿದ್ದು, ಇಂದು ಬಹುತೇಕ ಖಾಸಗಿ ಶಾಲೆಗಳಲ್ಲಿ ಕಲಿಯುತ್ತಿದ್ದ ಮಕ್ಕಳು ಸರ್ಕಾರಿ ಶಾಲೆಗಳಲ್ಲಿ ದಾಖಲಾತಿ ಪಡೆಯುತ್ತಿದ್ದಾರೆ.

ಹೌದು! ಕೊರೊನಾ ವಿಶ್ವಮಾರಿ ಬಂದ ದಿನದಿಂದ ಪಾಲಕರಿಗೆ ಖಾಸಗಿ ಶಾಲೆಗಳ ಧನದಾಹ ಹೆಚ್ಚಿದ್ದರಿಂದ ಬೇಸತ್ತ ಪಾಲಕರು ಸಾವಿರ ಸಾವಿರ ರೂಪಾಯಿಗಳನ್ನು ಪಾವತಿಮಾಡಲು ಶಕ್ತರಾಗಿಲ್ಲ. ಅಲ್ಲದೇ ಸರ್ಕಾರಿ ಶಾಲೆಗಳಲ್ಲಿ ಕಲಿಯಲು ಯಾವುದೇ ಶುಲ್ಕ ಕಟ್ಟಬೇಕಿಲ್ಲ ಹೀಗಾಗಿ ಖಾಸಗಿ ಶಾಲೆಗಳಿಂದ ಮಕ್ಕಳನ್ನು ಬಿಡಿಸಿ ಸರ್ಕಾರಿ ಶಾಲೆಗಳಲ್ಲಿ ದಾಖಲಿಸುತ್ತಿದ್ದಾರೆ.

ಖಾಸಗಿ ಶಾಲೆಗಳು ಆನ್‌ಲೈನ್‌ ಶಿಕ್ಷಣ ಕೊಡುತ್ತೇವೆ ಫೀಸ್‌ಕಟ್ಟಿ ಜತೆಗೆ ಮಕ್ಕಳಿಗೆ ಮೊಬೈಲ್‌ ಫೋನ್‌ ಕೊಡಿಸಿ ಎಂದು ದುಂಬಾಲು ಬಿದ್ದಿದ್ದರಿಂದ ಬೇಸತ್ತ ಪಾಲಕರು ತಮ್ಮ ಮಕ್ಕಳನ್ನು ಈಗ ಸರ್ಕಾರಿ ಶಾಲೆಗಳಿಗೆ ಸೇರಿಸುತ್ತಿದ್ದಾರೆ. ಅಲ್ಲದೆ ಸರ್ಕಾರಿ ಶಾಲೆಗಳಲ್ಲೂ ಉತ್ತಮ ಶಿಕ್ಷಣ ಕೊಡುತ್ತಿದ್ದಾರೆ ಎಂದು ಪಾಲಕರಿಗೆ ಅರಿವಾಗಿದೆ. ಹೀಗಾಗಿ ಬಹುತೇಕ ಪಾಲಕರು ಸರ್ಕಾರಿ ಶಾಲೆಗಳತ್ತ ಮುಖಮಾಡಿದ್ದಾರೆ.

ಇನ್ನು ಕೊರೊನಾ ಸೋಂಕಿನಿಂದ ಉಂಟಾದ ಆರ್ಥಿಕ ಪರಿಸ್ಥಿತಿಯಲ್ಲಿ ಜೀವನ ನಡೆಸುವುದೇ ಕಷ್ಟವಾಗಿದೆ. ಈ ನಡುವೆ ಸಾವಿರಾರು ರೂಪಾಯಿಯನ್ನು ಶಾಲೆಗಳಿಗೆ ಕಟ್ಟಿ ಮಕ್ಕಳನ್ನು ಓದಿಸುವುದು ಅಂದರೆ ಅದು ಪ್ರಸ್ತುತ ದಿನಗಳಲ್ಲಿ ಕಷ್ಟಸಾಧ್ಯ ಹಾಗಾಗಿ ನಾವು ಮಕ್ಕಳನ್ನು ಖಾಸಗಿ ಶಾಲೆ ಬಿಡಿಸಿ ಸರ್ಕಾರಿ ಶಾಲೆಗೆ ದಾಖಲು ಮಾಡಿದ್ದೇವೆ ಎಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಪಾಲಕರು ತಮ್ಮ ನಿಲುವನ್ನು ಹಂಚಿಕೊಳ್ಳುತ್ತಿದ್ದಾರೆ.

ಮಕ್ಕಳ ಭವಿಷ್ಯ ಬಹಳ ಮುಖ್ಯ ಆದರೆ ಖಾಸಗಿ ಶಾಲೆಗಳು ತಮ್ಮ ಧನದಾಹದಿಂದ ಇಂದು ನಮ್ಮನ್ನು ಸುಲಿಗೆ ಮಾಡಲು ಒಂದು ರೀತಿ ಮಾನಸಿಕ ಕಿರುಕುಳ ನೀಡುತ್ತಿದ್ದವು ಇದರಿಂದ ಬೇಸತ್ತು ನಮ್ಮ ಮಗುವನ್ನು ಸರ್ಕಾರಿ ಶಾಲೆಗೆ ಸೇರಿಸಿದ್ದೇನೆ ಎಂದು ಮೈಸೂರು ಜಿಲ್ಲೆಯ ಪಾಲಕರೊಬ್ಬರು ಹೇಳಿದ್ದಾರೆ.

ಇದಿಷ್ಟೇ ಅಲ್ಲದೇ ಖಾಸಗಿ ಶಾಲೆಗಳ ಸುಲಿಗೆಗೆ ಸರ್ಕಾರವೂ ಕಡಿವಾಣ ಹಾಕಲು ಸಾಧ್ಯವಾಗಿರಲಿಲ್ಲ. ಆದರೆ ಇಂದು ಪಾಲಕರು ತಮ್ಮ ಮನಸ್ಸನ್ನು ಬದಲಾಯಿಸಿದ್ದರಿಂದ ಮುಚ್ಚುತ್ತಿದ್ದ ಸರ್ಕಾರಿ ಶಾಲೆಗಳು ಇಂದು ಮತ್ತೆ ಓಪನ್‌ ಆಗುವತ್ತ ಸಾಗುತ್ತಿವೆ. ಇಂದು ರಾಜ್ಯದ ಮಟ್ಟಿಗೆ ಉತ್ತಮ ಬೆಳವಣಿಗೆಯೇ ಎಂದು ಹೇಳಬಹುದಾಗಿದೆ.

1 Comment

Leave a Reply

error: Content is protected !!
LATEST
KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ