NEWSನಮ್ಮರಾಜ್ಯರಾಜಕೀಯ

ಕೋವಿಡ್‌ ಭಯ: ಇಂದು ಬಸ್‌ ಸಂಚಾರವಿದ್ದರೂ ಸ್ವಂತ ವಾಹನಗಳಲ್ಲೇ ಜನರ ಓಡಾಟ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾಜ್ಯಾದ್ಯಂತ ಭಾನುವಾರದ ಲಾಕ್‌ಡೌನ್‌ ತೆರವಾಗಿರುವ ಹಿನ್ನೆಲೆ ಸಾರಿಗೆ ಸಂಚಾರ ಇಂದು ಮಾಮೂಲಿನಂತೆ ಇದೆ. ಆದರೆ ಜನರ ಓಡಾಟ ಮಾತ್ರ ವಿರಳವಾಗಿದೆ.

ಇನ್ನು ಮೆಜೆಸ್ಟಿಕ್‌ ಬಸ್‌ ನಿಲ್ದಾಣದ ಹೊರಗೆ ಆಟೋ ಹಾಗೂ ಕ್ಯಾಬ್‌ ಸಂಚಾರ ಎಂದಿನಂತಿದ್ದು, ಬಿಎಂಟಿಸಿ ಮತ್ತು ಕೆಎಸ್‌ಆರ್‌ಟಿಸಿ ಬಸ್ ಎಂದಿನಂತೆ ಸಂಚರಿಸುತ್ತಿವೆ. ಆದರೆ ಪ್ರಯಾಣಿಕರಿಲ್ಲದೆ ಬಹುತೇಕ ಎಲ್ಲಾ ವಾಹನಗಳು ಖಾಲಿ ಖಾಲಿಯಾಗಿಯೇ ಓಡಾಡುತ್ತಿವೆ.

ಅನ್‌ಲೌಕ್‌-3 ಮಾರ್ಗಸೂಚಿ ಶನಿವಾರದಿಂದ ಜಾರಿಗೆ ಬಂದಿದ್ದು, ಮಾರ್ಗಸೂಚಿಯಂತೆ ಹಿಂಪಡೆಯಲಾಗಿರುವ ಭಾನುವಾರದ ಲಾಕ್‌ಡೌನ್‌   ಹಿನ್ನೆಲೆಯಲ್ಲಿ ರಾಜಧಾನಿ ಸೇರಿ ರಾಜ್ಯದ ಎಲ್ಲಾ ಕಡೆ ವಾಹನ ಸಂಚಾರ ಹಾಗೂ ಜನಜೀವನ ಎಂದಿನಂತಿದೆ. ಆದರೆ ಕೊರೊನಾ ಮಹಾಮಾರಿ ಮಾತ್ರ ಬೆಂಬಿಡದೆ ಜನರನ್ನು ಕಾಡುತ್ತಿದೆ.

ಅಂತ್ಯೆಯೇ ಎರಡು ತಿಂಗಳುಗಳ ಭಾನುವಾರಗಳಂದು ಲಾಕ್‌ಡೌನ್ ಇದ್ದುದರಿಂದ ಬಹುತೇಕ ಜನರು ಮನೆಯಿಂದ ಹೊರಗಡೆ ಬಂದಿರಲಿಲ್ಲ. ಆದರೆ ಈ ಭಾನುವಾರ ಎಲ್ಲಾ ಚಟುವಟಿಕೆಗೆ ಸರ್ಕಾರ ಅನುವು ಮಾಡಿಕೊಟ್ಟಿದೆ. ಹೀಗಿದ್ದರೂ ಸಾರ್ವಜನಿಕ ವಾಹನಗಳನ್ನು ಬಳಸಲು ಕೋವಿಡ್‌ ವೈರಸ್‌ ಭಯದಿಂದ ಜನರು ಹಿಂದೇಟು ಹಾಕುತ್ತಿದ್ದಾರೆ.

ಇಂದು ರಜಾ ದಿನವಾಗಿರುವುದರಿಂದ ಸರ್ಕಾರಿ ಕಚೇರಿ, ಖಾಸಗಿ ಕಚೇರಿಗಳು ಬಂದ್ ಆಗಿವೆ.  ಹೀಗಾಗಿ ಜನಸಂಚಾರವೂ ವಿರಳವಾಗಿದೆ. ಆದರೆ ದ್ವಿಚಕ್ರ ವಾಹನ ಸವಾರರು ಮಾತ್ರ ಯಾವುದೇ ಆತಂಕ ಇಲ್ಲದೆ ಎಂದಿನಂತೆ ಸಂಚರಿಸುತ್ತಿರುವುದು ಕಂಡುಬರುತ್ತಿದೆ.

Leave a Reply

error: Content is protected !!
LATEST
ಬಿಬಿಎಂಪಿ ಮೈದಾನದ ಗೇಟ್ ಬಿದ್ದು 11 ವರ್ಷದ ಬಾಲಕ ಮೃತ KSRTC ಚಾ.ನಗರ ವಿ.ಕಾರ್ಯಾಗಾರದಿಂದ ಅಕ್ರಮವಾಗಿ ಖಾಸಗಿಯವರಿಗೆ ರವಾನೆಯಾದ ಇಂಜಿನ್‌ ಟ್ರಾಲಿ, ಸ್ಟ್ಯಾಂಡ್‌ ಫ್ರಿಡ್ಜ್‌ನಲ್ಲಿದ್ದ ಮಹಾಲಕ್ಷ್ಮೀ ದೇಹದ 32 ಪೀಸ್‌ಗಳು ಹೇಳುತ್ತಿವೆ ಭಯಾನಕ ಸತ್ಯ ಬಡವರು-ಮಧ್ಯಮ ವರ್ಗದವರಿಗೆ ಕೈಗೆಟುಕುವ ದರದಲ್ಲಿ ನಿವೇಶನ ವಿತರಣೆ: ಡಾ.ಬಸ್ತಿ ರಂಗಪ್ಪ KSRTC ನಿರ್ದೇಶಕರ ಆದೇಶಕ್ಕೂ ಕಿಮ್ಮತ್ತಿಲ್ಲ: ಅಮಾನತು ತೆರವು ಮಾಡದೆ ಚಾಲಕನಿಗೆ ಮಾನಸಿಕ ಹಿಂಸೆ ಕೊಡುತ್ತಿರುವ ತುಮಕೂರು ... ಪ್ರಜ್ವಲ್ ರೇವಣ್ಣ ಪ್ರಕರಣ: ಅಶ್ಲೀಲ ವಿಡಿಯೋಗಳ ಹಂಚಿಕೆ ಅತ್ಯಂತ ಪಾಪ ಕೃತ್ಯ, ಸಂತ್ರಸ್ತೆಯರಿಗೆ ಅವಮಾನ- ಹೈಕೋರ್ಟ್ ವಿಶ್ವವಿಖ್ಯಾತ ಮೈಸೂರು ದಸರಾ ಗಂಡಾನೆಗಳ ನಡುವೆ ಕಿತ್ತಾಟ: ದಿಕ್ಕಾಪಾಲಾಗಿ ಓಡಿದ ಜನರು ಬನ್ನೂರು: ಬಸವನಹಳ್ಳಿ ಬಳಿ ಬೈಕ್‌ಗೆ ಡಿಕ್ಕಿ ಹೊಡೆದ ಹೆಣ್ಣು ಚಿರತೆ ಸಾವು ಅ.3ರಿಂದ ಶಾಲೆಗಳಿಗೆ ದಸರಾ ರಜೆ: ಶಾಲಾ ಶಿಕ್ಷಣ ಇಲಾಖೆ ಆದೇಶ BMTC ನೌಕರರ ₹400 ಕೋಟಿ ಗ್ರಾಚ್ಯುಟಿ, ಗಳಿಕೆ ರಜೆ ನಗದೀಕರಣ ಬಿಡುಗಡೆಗೆ ಮೀನಮೇಷ..!!