Breaking NewsNEWSದೇಶ-ವಿದೇಶ

ಇಂದಿನಿಂದ ಟ್ರೈನ್‌ ಟಿಕೆಟ್‌ ಬುಕ್ಕಿಂಗ್‌ ಶುರು

ವಿಜಯಪಥ ಸಮಗ್ರ ಸುದ್ದಿ

ನ್ಯೂಡೆಲ್ಲಿ: ಸೋಮವಾರದಿಂದ ರೈಲ್ವೆ ಟಿಕೆಟ್ ಬುಕ್ಕಿಂಗ್ ಆರಂಭವಾಗಲಿದೆ ಎಂದು  ಭಾರತೀಯ ರೈಲ್ವೆ ಇಲಾಖೆ ಮಹತ್ವ ಆದೇಶ ಹೊರಡಿಸಿದ್ದು, ಈ ಮೂಲಕ ಪ್ರಯಾಣಿಕರಿಗೆ ಸಿಹಿ ಸುದ್ದಿ ನೀಡಿದೆ.

ರೈಲುಗಳ ಟಿಕೆಟ್ ಬುಕಿಂಗ್ ಇಂದು (ಮೇ 11) ಸಂಜೆ 4 ಗಂಟೆಗೆ ಪ್ರಾರಂಭವಾಗಲಿದೆ.  ಐಆರ್‌ಸಿಟಿಸಿ ವೆಬ್‍ಸೈಟ್‍ನಲ್ಲಿ ಮಾತ್ರ ಟಿಕೆಟ್ ಲಭ್ಯವಿರಲಿದೆ. ರೈಲ್ವೆ ನಿಲ್ದಾಣಗಳ ಕೌಂಟರ್ ಗಳಲ್ಲಿ ಟಿಕೆಟ್ ಸಿಗುವುದಿಲ್ಲ ಎಂದು ರೈಲ್ವೆ ಸಚಿವಾಲಯ ಸ್ಪಷ್ಟಪಡಿಸಿದೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

ರೈಲು ಪ್ರಯಾಣಿಕರು ಮಾಸ್ಕ್ ಹಾಕಿಕೊಳ್ಳುವುದು, ಥರ್ಮಲ್ ಸ್ಕ್ರೀನಿಂಗ್‍ಗೆ ಒಳಪಡುವುದು ಕಡ್ಡಾಯವಾಗಿದೆ. ಕೊರೊನಾ ಸೋಂಕಿನ ಲಕ್ಷಣವಿಲ್ಲದ ಪ್ರಯಾಣಿಕರಿಗೆ ಮಾತ್ರ ರೈಲು ಹತ್ತಲು ಅವಕಾಶ. ರೈಲು ವೇಳಾಪಟ್ಟಿ ಸೇರಿದಂತೆ ಹೆಚ್ಚಿನ ವಿವರಗಳನ್ನು ಸರಿಯಾದ ಸಮಯದಲ್ಲಿ ನೀಡಲಾಗುತ್ತದೆ ಎಂದು ತಿಳಿಸಿದೆ.

ಪ್ರಯಾಣಿಕರ ರೈಲುಗಳನ್ನು ಮೇ 12ರಿಂದ ಹಂತ ಹಂತವಾಗಿ ಪ್ರಾರಂಭಿಸಲಿದ್ದು,  ಆರಂಭದಲ್ಲಿ 15 ಜೋಡಿ ರೈಲುಗಳು ಓಡಾಡಲಿವೆ. ಆ ವಿಶೇಷ ರೈಲುಗಳು ನ್ಯೂಡೆಲ್ಲಿ ನಿಲ್ದಾಣದಿಂದ ದಿಬ್ರುಗರ್, ಅಗರ್ತಲಾ, ಹೌರಾ, ಪಾಟ್ನಾ, ಬಿಲಾಸ್ಪುರ್, ರಾಂಚಿ, ಭುವನೇಶ್ವರ, ಸಿಕಂದರಾಬಾದ್, ಬೆಂಗಳೂರು, ಚೆನ್ನೈ, ತಿರುವನಂತಪುರಂ, ಮಡ್ಗಾಂವ್, ಮುಂಬೈ ಸೆಂಟ್ರಲ್, ಅಹಮದಾಬಾದ್ ಮತ್ತು ಜಮ್ಮುಮ ರಾವಿಗೆ ಸಂಪರ್ಕ ಕಲ್ಪಿಸಲಿವೆ ಎಂದು ರೈಲ್ವೆ ಸಚಿವಾಲಯ ತಿಳಿಸಿದೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ