NEWSದೇಶ-ವಿದೇಶವಿಜ್ಞಾನ

2021-22ಕ್ಕೆ ಏರ್ ಇಂಡಿಯಾದಲ್ಲಿ ಬಂಡವಾಳ ಹಿಂತೆಗೆತ ಪೂರ್ಣ: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ನ್ಯೂಡೆಲ್ಲಿ: ಸಾಲದಲ್ಲಿ ಮುಳುಗಿರುವ ಸಾರ್ವಜನಿಕ ಸ್ವಾಮ್ಯದ ಏರ್ ಇಂಡಿಯಾದ ಆರ್ಥಿಕ ಪುನಶ್ಚೇತನಕ್ಕಾಗಿ ವಿಶೇಷ ಉದ್ದೇಶ ವಾಹಕವೊಂದನ್ನು ಸ್ಥಾಪಿಸಲಾಗಿದ್ದು, 2021-22ನೇ ಸಾಲಿನ ಬಜೆಟ್ ನಲ್ಲಿ 2,268 ಕೋಟಿ ರೂಪಾಯಿ ಹಂಚಿಕೆ ಮಾಡಲಾಗಿದೆ ಎಂದು ಬಜೆಟ್ ಭಾಷಣದ ವೇಳೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.

ಏರ್ ಇಂಡಿಯಾ ಸಂಸ್ಥೆಯಲ್ಲಿ ಪ್ರಸ್ತುತ ಬಂಡವಾಳ ಹಿಂತೆಗೆತ ಪ್ರಕ್ರಿಯೆ ನಡೆಯುತ್ತಿದೆ. ಅನೇಕ ಬಿಡ್ ದಾರರು ಕಳೆದ ತಿಂಗಳು ಆಸಕ್ತಿ ತೋರಿದ್ದು, ಮುಂದಿನ ವಾರ ಅರ್ಹ ಬಿಡ್ ದಾರರ ಪಟ್ಟಿಯನ್ನು ಸರ್ಕಾರ ಬಿಡುಗಡೆ ಮಾಡುವ ಸಾಧ್ಯತೆಯಿದೆ. ಹೀಗಾಗಿ ಸಾಲದ ಸುಳಿಯಲ್ಲಿ ಸಿಲುಕಿರುವ ರಾಷ್ಟ್ರೀಯ ಸಂಸ್ಥೆಯ ಆರ್ಥಿಕ ಪುನಶ್ಚೇತನ ಭಾಗವಾಗಿ ವಿಶೇಷ ಉದ್ದೇಶದ ವಾಹಕ ಸ್ಥಾಪನೆಗೆ 2,268 ಕೋಟಿ ರೂ. ಹಂಚಿಕೆ ಮಾಡಿರುವುದಾಗಿ ಹೇಳಿದ್ದಾರೆ.

ನಾಗರಿಕ ವಿಮಾನಯಾನ ಸಚಿವಾಲಯದಡಿಯಲ್ಲಿ ಕಾರ್ಯನಿರ್ವಹಿಸುವ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ ದೇಶದಲ್ಲಿ ಸುಮಾರು 100 ವಿಮಾನ ನಿಲ್ದಾಣಗಳನ್ನು ಹೊಂದಿದೆ. ಏರ್ ಇಂಡಿಯಾದಲ್ಲಿ 2021-22ರಲ್ಲಿ ಬಂಡವಾಳ ಹಿಂತೆಗೆತ ಪೂರ್ಣಗೊಳ್ಳಲಿದೆ ಹಾಗೂ ಪವನ್ ಹನ್ಸ್ ನಲ್ಲಿ ಹೂಡಿಕೆ ಹಿಂತೆಗೆತ 2021-22ರಲ್ಲಿ ಮುಗಿಯಲಿದೆ ಎಂದು ತಿಳಿಸಿದರು.

2021-22ರ ಕೇಂದ್ರ ಬಜೆಟ್‌ನಲ್ಲಿ ನಾಗರಿಕ ವಿಮಾನಯಾನ ಸಚಿವಾಲಯಕ್ಕೆ 3,224 ಕೋಟಿ ರೂ.ಗಳನ್ನು ನಿಗದಿಪಡಿಸಲಾಗಿದೆ, ಇದು ಪ್ರಸಕ್ತ ಹಣಕಾಸು ವರ್ಷದಲ್ಲಿ ನಿಗದಿಪಡಿಸಿದ 4,131 ಕೋಟಿ ರೂ.ಗಳಲ್ಲಿ ಶೇ. 22 ಕ್ಕಿಂತ ಕಡಿಮೆಯಾಗಿದೆ.

ಹೊಸ ಮೂಲಸೌಕರ್ಯಗಳನ್ನು ಅಭಿವೃದ್ಧಿಗೆ ಹಣ ಸಂಗ್ರಹಿಸಲು ಸರ್ಕಾರವು ಶ್ರೇಣಿ -2 ಮತ್ತು ಶ್ರೇಣಿ -3 ನಗರಗಳಲ್ಲಿನ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ ಚಾಲಿತ ವಿಮಾನ ನಿಲ್ದಾಣಗಳ ಆಸ್ತಿಯನ್ನು ಸರ್ಕಾರ ವಿತ್ತೀಯಗೊಳಿಸಲಿದೆ.

ಕಳೆದ ವರ್ಷ 2020-21ನೇ ಸಾಲಿಗಾಗಿ ವಿಮಾನಯಾನ ಸಚಿವಾಲಯಕ್ಕೆ 3,797 ಕೋಟಿ ರೂ. ಹಂಚಿಕೆ ಮಾಡಲಾಗಿತ್ತು. ಆದರೆ, ಪರಿಷ್ಕೃತ ಅಂದಾಜಿನಂತೆ 4,131 ಕೋಟಿ ರೂ.ಗೆ ಅದನ್ನು ಹೆಚ್ಚಿಸಲಾಗಿದೆ. 2021-22ರ ಪ್ರಾದೇಶಿಕ ಸಂಪರ್ಕ ಯೋಜನೆ ಉಡಾನ್‌ಗೆ ಪ್ರಸಕ್ತ ಹಣಕಾಸು ವರ್ಷಕ್ಕಿಂತ ಶೇ. 28 ರಷ್ಟು ಕಡಿಮೆ ಅನುದಾನ ನೀಡಲಾಗಿದೆ ಎಂದರು.

ಉಡಾನ್ ಯೋಜನೆಯಡಿ, ಕೇಂದ್ರ, ರಾಜ್ಯ ಸರ್ಕಾರಗಳು ಮತ್ತು ವಿಮಾನ ನಿಲ್ದಾಣ ಆಪರೇಟರ್‌ಗಳು ಆಯ್ದು ಏರ್ ಲೈನ್ಸ್ ಗಳಿಂದ ಸೇವೆ ಇಲ್ಲದ- ಸೇವೆ ಇರುವ ವಿಮಾನ ನಿಲ್ದಾಣಗಳಿಂದ ಕೈಗೆಟುಕುವ ದರದಲ್ಲಿ ಕಾರ್ಯಾಚರಣೆಯನ್ನು ಉತ್ತೇಜಿಸುತ್ತವೆ ಎಂದು ಭಾಷಣದಲ್ಲಿ ಹೇಳಿದರು.

Leave a Reply

error: Content is protected !!
LATEST
KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ ಮೇಲುಸೇತುವೆ-ಕೆಳಸೇತುವೆಗಳ ನಿರ್ವಹಣೆ ಸರಿಯಾಗಿ ಮಾಡಿ: ತುಷಾರ್ ಗಿರಿನಾಥ್ ದೆಹಲಿ ನೂತನ ಮುಖ್ಯಮಂತ್ರಿಯಾಗಲಿದ್ದಾರೆ ಅತಿಶಿ: ಎಎಪಿ ನಾಯಕರ ಸಭೆಯಲ್ಲಿ ನಿರ್ಧಾರ BMTC 1500 ನಿವೃತ್ತ ನೌಕರರ ಗ್ರಾಚ್ಯುಟಿ, EL ಹಣ 400 ಕೋಟಿ ರೂ.ಬಾಕಿ: 16-18 ತಿಂಗಳಿನಿಂದ ಕೇಂದ್ರ ಕಚೇರಿಗೆ ಅಲೆದಾಟ!! ಸುಪ್ರೀಂ ಕೋರ್ಟ್ ಅಧಿಕೃತ  ಭಾಷೆ ಇಂಗ್ಲಿಷ್- ಹಿಂದಿಯಲ್ಲಿ ವಾದಕ್ಕೆ ಅನುಮತಿ ಇಲ್ಲ: ವಕೀಲರಿಗೆ ನೆನಪಿಸಿದ ಕೋರ್ಟ್‌ ಕೃಷಿ ಉತ್ಪನ್ನಗಳ ಬೆಂಬಲ ಬೆಲೆಗಿಂತ ಕಡಿಮೆ ದರಕ್ಕೆ ಖರೀದಿ ಮಾಡದಂತ ಕಟ್ಟುನಿಟ್ಟಿನ ಕಾನೂನು ಜಾರಿಗೆ ರೈತ ಮುಖಂಡರ ಆಗ್ರಹ KSRTC ಬಸ್‌ -ಕಾರು ನಡುವೆ ಅಪಘಾತ: ಅನಾರೋಗ್ಯದ ನಡುವೆ ಕಾರು ಚಲಾಯಿಸಿದ ಪತಿ ಮೃತ- ಪತ್ನಿ ಪ್ರಾಣಾಪಾಯದಿಂದ ಪಾರು