NEWSನಮ್ಮಜಿಲ್ಲೆಸಂಸ್ಕೃತಿ

ಬೀಡನಹಳ್ಳಿಯಲ್ಲಿ ವೀರಹಬ್ಬಕ್ಕೆ ಸಂಭ್ರಮದ ತೆರೆ

ವಿಜಯಪಥ ಸಮಗ್ರ ಸುದ್ದಿ

ಬೀಡನಹಳ್ಳಿ: ತಿ.ನರಸೀಪುರ ತಾಲೂಕು ಬನ್ನೂರು ಹೋಬಳಿಯ ಬೀಡನಹಳ್ಳಿ ಗ್ರಾಮದ ಗ್ರಾಮ ದೇವತೆ ಮಾರಮ್ಮ ಹಬ್ಬ ಇಂದು ಸಡಗರ ಸಂಭ್ರಮದಿಂದ ಜರುಗಿತು.

ಗ್ರಾಮದಲ್ಲಿ ಪ್ರತಿವರ್ಷದಂತೆ ಕಡೆ ಕಾರ್ತಿಕ ಸೋಮವಾರದ ನಂತರ ಜರುಗುವ ವೀರಹಬ್ಬ (ಈರ್ಹಬ್ಬ) ಮಂಗಳವಾರ ಮತ್ತು ಬುಧವಾರ ಗ್ರಾಮದ ಮುಖಂಡರು ಆಯೋಜನೆ ಮಾಡಿದ್ದು, ಅದರಂತೆ ಸಂಭ್ರಮದಿಂದ ಜರುಗಿತು. ಗ್ರಾಮದ ಹೆಂಗಳೆಯರು ಆರತಿ ಯನ್ನು ಹೊತ್ತು ಗ್ರಾಮದೇವತೆ ದೇಗುಲದ ಮುಂದೆ ಜಮಾವಣೆಗೊಂಡು ಆರತಿ ಬೆಳಗಿದರು.

ಬನ್ನೂರು ಹೆಗ್ಗೆರೆಯಿಂದ ಮಂಗಳವಾರ ಸಂಜೆ ಮಜ್ಜನದ ಗಂಗೆ ತಂದು ಪೂಜೆಗಳನ್ನು ಕಟ್ಟಲಾಯಿತು. ಬುಧವಾರ ಮುಂಜಾನೆ ಪೂಜೆಗಳನ್ನು ಹೂ ಹೊಂಬಾಳೆಯಿಂದ ಅಲಂಕರಿಸಿ ಬಾಯಿಬೀಗ ಇರುವವರು ಮಡಿವಂತಿಕೆಯಿಂದ ಒಪ್ಪತ್ತು ಇದ್ದು ಗ್ರಾಮ ದೇವಿಗೆ ಬಾಯಿಬೀಗ ಸೇವೆ ಮಾಡಿ ಹರಕೆ ತೀರಿಸಿದರು.

ಗ್ರಾಮದಲ್ಲಿ ಎರಡು ದಿನಗಳು ಜರುಗಿದ ಹಬ್ಬಕ್ಕೆ ಗ್ರಾಮಸ್ಥರು ಸೇರಿದಂತೆ ಅಕ್ಕಪಕ್ಕ ಗ್ರಾಮಗಳ ನೂರಾರು ಭಕ್ತರು ಆಗಮಿಸಿ ದೇವಿಯ ದರ್ಶನ ಪಡೆದರು.

Leave a Reply

error: Content is protected !!
LATEST
KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ