NEWSನಮ್ಮರಾಜ್ಯ

ಗಡಿ ಜಿಲ್ಲೆ ಚಾಮರಾಜನಗರಕ್ಕೂ ಲಗ್ಗೆ ಇಟ್ಟ ಕೊರೊನಾ

ವಿಜಯಪಥ ಸಮಗ್ರ ಸುದ್ದಿ

ಚಾಮರಾಜನಗರ: ಗಡಿ ಜಿಲ್ಲೆ ಚಾಮರಾಜನಗರಕ್ಕೂ ಮಹಾಮಾರಿ ಕೊರೊನಾ ಲಗ್ಗೆಯಿಟ್ಟಿದೆ. ಇದು ಜಿಲ್ಲಾ ಜನತೆಯಲ್ಲಿ ಮತ್ತೆ ಆತಂಕಕ್ಕೆ ಕಾರಣವಾಗಿದೆ.

ರಾಜ್ಯದಲ್ಲಿ ಇದುವರೆಗೂ ಯಾವುದೇ ಕೊರೊನಾ ಸೋಂಕಿತರು ಇರಲಿಲ್ಲ. ಆದರೆ ಇಂದು  ಒಂದು ಪ್ರಕರಣ ಪತ್ತೆಯಾದಂತಾಗಿದ್ದು, ಈ ವಿಶ್ವಮಾರಿ ರಾಜ್ಯದ ಯಾವುದೇ ಜಿಲ್ಲೆಯನ್ನು ಬಿಟ್ಟಿಲ್ಲ.

ಜಿಲ್ಲೆಯ ಗುಂಡ್ಲುಪೇಟೆಯ ಮಹದೇವ್ ಪ್ರಸಾದ್‌ ನಗರದ ನಿವಾಸಿ ಲಾರಿ ಚಾಲಕನಿಗೆ ಕೊರೊನಾ ಪಾಸಿಟಿವ್‌ ಎಂದು ತಿಳಿದು ಬಂದಿದೆ.
ಈತ ತಮಿಳುನಾಡಿಗೆ ಗುಂಡ್ಲುಪೇಟೆ ಪಟ್ಟಣದಿಂದ ಕಲ್ಲಂಗಡಿ ಹಣ್ಣು ಸಾಗಿಸುತ್ತಿದ್ದ. ಈ ವೇಳೆ ಸೋಂಕು ತಗುಲಿದೆ ಎಂದು ಹೇಳಲಾಗುತ್ತಿದೆ. ಈತನಲ್ಲಿ ಕೊರೊನಾ ಸೋಂಕು ದೃಢವಾಗುತ್ತಿದ್ದಂತೆ ರಾತ್ರೋರಾತ್ರಿ ಮಹದೇವ್ ಪ್ರಸಾದ್‌ ನಗರವನ್ನು ಸೀಲ್ ಡೌನ್ ಮಾಡಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

ಜಿಲ್ಲಾಸ್ಪತ್ರೆಗೆ ಕೊರೊನಾ ಸೊಂಕಿತನ ಶಿಫ್ಟ್‌ ಮಾಡಲಾಗಿದೆ. ಪೊಲೀಸ್, ಆರೋಗ್ಯ ಇಲಾಖೆ ಅಧಿಕಾರಿಗಳು, ಕಂದಾಯಾಧಿಕಾರಿಗಳು ಸ್ಥಳದಲ್ಲಿ ಬೀಡು ಬಿಟ್ಟಿದ್ದಾರೆ.

Leave a Reply

error: Content is protected !!
LATEST
KSRTC ನಿರ್ದೇಶಕರ ಆದೇಶಕ್ಕೂ ಕಿಮ್ಮತ್ತಿಲ್ಲ: ಅಮಾನತು ತೆರವು ಮಾಡದೆ ಚಾಲಕನಿಗೆ ಮಾನಸಿಕ ಹಿಂಸೆ ಕೊಡುತ್ತಿರುವ ತುಮಕೂರು ... ಪ್ರಜ್ವಲ್ ರೇವಣ್ಣ ಪ್ರಕರಣ: ಅಶ್ಲೀಲ ವಿಡಿಯೋಗಳ ಹಂಚಿಕೆ ಅತ್ಯಂತ ಪಾಪ ಕೃತ್ಯ, ಸಂತ್ರಸ್ತೆಯರಿಗೆ ಅವಮಾನ- ಹೈಕೋರ್ಟ್ ವಿಶ್ವವಿಖ್ಯಾತ ಮೈಸೂರು ದಸರಾ ಗಂಡಾನೆಗಳ ನಡುವೆ ಕಿತ್ತಾಟ: ದಿಕ್ಕಾಪಾಲಾಗಿ ಓಡಿದ ಜನರು ಬನ್ನೂರು: ಬಸವನಹಳ್ಳಿ ಬಳಿ ಬೈಕ್‌ಗೆ ಡಿಕ್ಕಿ ಹೊಡೆದ ಹೆಣ್ಣು ಚಿರತೆ ಸಾವು ಅ.3ರಿಂದ ಶಾಲೆಗಳಿಗೆ ದಸರಾ ರಜೆ: ಶಾಲಾ ಶಿಕ್ಷಣ ಇಲಾಖೆ ಆದೇಶ BMTC ನೌಕರರ ₹400 ಕೋಟಿ ಗ್ರಾಚ್ಯುಟಿ, ಗಳಿಕೆ ರಜೆ ನಗದೀಕರಣ ಬಿಡುಗಡೆಗೆ ಮೀನಮೇಷ..!! KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್