NEWSಕೃಷಿನಮ್ಮರಾಜ್ಯ

ಕಾಡಂಚಿನ ಗ್ರಾಮ ಕಡಬೂರಿಗೆ ಸಚಿವ ಆನಂದ್‌ ಸಿಂಗ್‌ ಭೇಟಿ

ಹುಲಿ ದಾಳಿ ಹಿನ್ನೆಲೆ l ದಾಳಿ ನಡೆದ ಸ್ಥಳ ಪರಿಶೀಲಿಸಿ ಅಹವಾಲು ಆಲಿಕೆ

ವಿಜಯಪಥ ಸಮಗ್ರ ಸುದ್ದಿ

ಚಾಮರಾಜನಗರ: ಒಂದು ತಿಂಗಳಿಂದ ಸುತ್ತಮುತ್ತಲಿನ ಗ್ರಾಮಗಳಲ್ಲಿ ಹಸು, ಕುರಿ, ಮೇಕೆ ಸೇರಿದಂತೆ 19 ಜಾನುವಾರುಗಳ ಮೇಲೆ ಹುಲಿ ದಾಳಿ ಮಾಡಿದ್ದು ಈ  ಹಿನ್ನೆಲೆಯಲ್ಲಿ ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಸಚಿವ  ಆನಂದ್ ಸಿಂಗ್ ಬಂಡೀಪುರ ಹುಲಿ ಯೋಜನೆಯ ಕುಂದಗೆರೆ ವಲಯದ ಕಾಡಂಚಿನ ಗ್ರಾಮ ಕಡಬೂರಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿ ಯೋಜನೆಯ ವ್ಯಾಪ್ತಿಯಲ್ಲಿ ಬರುವ ಕುಂದಗೆರೆ, ಕಡಬೂರು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕಳೆದ ಒಂದು ತಿಂಗಳಿನಿಂದ ಹುಲಿದಾಳಿ ನಿರಂತರವಾಗಿ ನಡೆಯುತ್ತಿರುವುದರಿಂದ ದಾಳಿ ನಡೆದ ಅರಣ್ಯ ಪ್ರದೇಶದಲ್ಲಿ ಸ್ಥಳ ಪರಿಶೀಲನೆ ಮಾಡಿದರು.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ  https://play.google.com/store/apps/detail

ಶಾಸಕ ಸಿ.ಎಸ್. ನಿರಂಜನಕುಮಾರ್ ಅವರೊಂದಿಗೆ ಆಗಮಿಸಿದ ಅರಣ್ಯ ಸಚಿವರಾದ ಆನಂದ್ ಸಿಂಗ್ ಅವರು ಮೊದಲಿಗೆ ಅ ಭಾಗದ ಜನರಿಂದ ಅಹವಾಲುಗಳನ್ನು ಆಲಿಸಿದರು.

ಒಂದು ತಿಂಗಳಿಂದ ಜಾನುವಾರುಗಳ ಮೇಲೆ ಹುಲಿ ದಾಳಿ ಮಾಡುತ್ತಿದೆ. ಇದರಿಂದ ವ್ಯವಸಾಯಕ್ಕೆ ಕಷ್ಟವಾಗುತ್ತಿದೆ. ಆಹಾರ ಬೆಳೆಗಳನ್ನು ಬೆಳೆಯಲು ಸಾಧ್ಯವಾಗುತ್ತಿಲ್ಲ. ಜನರು ಭಯಭೀತರಾಗಿದ್ದಾರೆ. ಹುಲಿಯನ್ನು ಸೆರೆ ಹಿಡಿದು ಬೇರೆಡೆ ಬಿಡಬೇಕು. ಹುಲಿಯಲ್ಲದೆ ಇತರೆ ಪ್ರಾಣಿಗಳಿಂದ ಜಾನುವಾರು ದಾಳಿಗಳು ಆಗಾಗ್ಗೆ ಸಂಭವಿಸುತ್ತಿವೆ. ಪ್ರಾಣಿಗಳು ನಾಡಿಗೆ ಬರದಂತೆ ಕಾಡಂಚಿನಲ್ಲಿ ಬ್ಯಾರಿಕೇಡ್, ರೈಲ್ವೆಕಂಬಿಗಳನ್ನು ಹಾಕಬೇಕು. 15 ಅಡಿಗಳ ಚೈನ್‍ಲಿಂಕ್‍ಮೆಸ್‍ನ್ನು ಅಳವಡಿಸಬೇಕು. ಸರ್ಕಾರ ಮಾನವ-ಕಾಡು ಪ್ರಾಣಿಗಳ ಸಂಘರ್ಷವನ್ನು ತಡೆಗಟ್ಟಬೇಕು. ಇದರಿಂದ ಶಾಶ್ವತ ಪರಿಹಾರ ಬೇಕು ಎಂದು ಗ್ರಾಮಸ್ಥರು ಸಚಿವರಲ್ಲಿ ಮನವಿ ಮಾಡಿದರು.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ  https://play.google.com/store/apps/detail

ಗ್ರಾಮಸ್ಥರ ಸಮಸ್ಯೆಗಳನ್ನು ಆಲಿಸಿದ ಸಚಿವರು ಮಾತನಾಡಿ, ಹುಲಿ ನಿರಂತರವಾಗಿ ದಾಳಿ ನಡೆಯುತ್ತಿರುವುದು ನನ್ನ ಗಮನಕ್ಕೆ ಬಂದಿದೆ. ಪದೇಪದೆ ಹುಲಿ ದಾಳಿಯಿಂದ ಈಗಾಗಲೇ ಹಲವು ಜಾನುವಾರುಗಳು ಸಾವನ್ನಪ್ಪಿವೆ. ಜಾನುವಾರುಗಳ ಮಾಲೀಕರಗೆ ಸರ್ಕಾರದಿಂದ ಅವರ ಬೇಡಿಕೆಗನುಗುಣವಾಗಿ ಪರಿಹಾರ ಒದಗಿಸಲಾಗುವುದು ಎಂದರು.

ಕಾಡುಪ್ರಾಣಿಗಳಿಂದ ದಾಳಿಗೊಳಗಾದ ಹಸುವಿಗೆ ಅವುಗಳ ತಳಿ ಆಧಾರದ ಮೇಲೆ ಈ ಹಿಂದೆ 10 ಸಾವಿರ ಪರಿಹಾರ ನಿಗದಿ ಮಾಡಲಾಗಿತ್ತು. ಅಗತ್ಯಕ್ಕಿಂತ ಹೆಚ್ಚಿನ ಪರಿಹಾರಕ್ಕಾಗಿ ಬೇಡಿಕೆ ಸಲ್ಲಿಸಿದರೆ ಮರುಪ್ರಸ್ತಾವನೆ ಸಲ್ಲಿಸುವಂತೆ ಸಚಿವರು ಸ್ಥಳದಲ್ಲಿಯೇ ಇದ್ದ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ಇದೇ ವೇಳೆ ಶಾಸಕ ಸಿ.ಎಸ್. ನಿರಂಜನಕುಮಾರ್ , ತಾಲೂಕಿನ ಬಂಡೀಪುರ ಹುಲಿ ಯೋಜನೆಯ ವ್ಯಾಪ್ತಿಯಲ್ಲಿ ಬರುವ ಕುಂದಗೆರೆ, ಕಡಬೂರು, ಚಿರಕನಹಳ್ಳಿ, ಉಪಕಾರ ಗ್ರಾಮಗಳು ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಇತ್ತೀಚೆಗೆ ಹುಲಿ ದಾಳಿ ನಿರಂತರವಾಗಿ ನಡೆಯುತ್ತಿರುವುದರಿಂದ ಅವಶ್ಯ ಕ್ರಮಗಳನ್ನು ತುರ್ತಾಗಿ ಕೈಗೊಳ್ಳುವಂತೆ ಸಚಿವರಲ್ಲಿ ಮನವಿ ಮಾಡಿದರು.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ  https://play.google.com/store/apps/detail

ಕಾಡುಪ್ರಾಣಿಗಳಿಂದ ರೈತರಿಗೆ, ಸಾರ್ವಜನಿಕರಿಗೆ ತೊಂದರೆಯಾಗದಂತೆ ತಡೆಯುವ ಸಲುವಾಗಿ ಸರ್ಕಾರ ಅಗತ್ಯ ಕ್ರಮ ವಹಿಸಲಿದೆ. ರಾಜ್ಯದ ಅರಣ್ಯ ಪ್ರದೇಶದಲ್ಲಿ ಬ್ಯಾರಿಕೇಡ್ ಅಳವಡಿಸಲು 100 ಕೋಟಿ ರೂ. ಮಂಜೂರಾಗಿದೆ. ಬಂಡೀಪುರ ಹುಲಿ ಯೋಜನೆಯ ವ್ಯಾಪ್ತಿಯಲ್ಲಿ ಬರುವ ಕುಂದಗೆರೆ, ಕಡಬೂರು ವಲಯದಲ್ಲಿ ಸುಮಾರು 40 ಕಿ.ಮೀ. ಸುತ್ತಮುತ್ತಲಿನ ಪ್ರದೇಶದಲ್ಲಿ ಬ್ಯಾರಿಕೇಡ್ ಅಳವಡಿಸಲಾಗುವುದು ಎಂದು ಸಚಿವ ಆನಂದ್ ಸಿಂಗ್  ತಿಳಿಸಿದರು.

ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಅನಿತಾ ಹದ್ದಣ್ಣನವರ್, ಡಿ.ವೈ.ಎಸ್.ಪಿ. ಜೆ. ಮೋಹನ್, ಬಂಡೀಪುರ ಹುಲಿ ಯೋಜನೆಯ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಬಾಲಚಂದರ್, ಪಿಸಿ.ಸಿ.ಎಫ್ ಸಂಜಯ್ ಮೋಹನ್, ವನ್ಯಜೀವಿ ವಿಭಾಗದ ಪಿಸಿ.ಸಿ.ಎಫ್ ಅಜಯ್ ಮಿಶ್ರಾ, ಚಾಮರಾಜನಗರ ಸಿ.ಸಿ.ಎಫ್ ಮನೋಜ್‍ಕುಮಾರ್, ಮೈಸೂರು ಸಿ.ಸಿ.ಎಫ್ ಹಿರೇಲಾಲ್, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ರವಿಕುಮಾರ್, ಪರಮೇಶ್ವರ್, ಕುಂದಗೆರೆ ವಲಯದ ವಲಯ ಅರಣ್ಯಾಧಿಕಾರಿ ಮಂಜುನಾಥ್, ರೈತ ಮುಖಂಡರಾದ ಕಡಬೂರು ಮಂಜುನಾಥ್, ಕುಂದಗೆರೆ ಸಂಪತ್ ಇತರರುವ ಇದ್ದರು.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ  https://play.google.com/store/apps/detail

Leave a Reply

error: Content is protected !!
LATEST
ಪತ್ನಿ ಜೊತೆ 40 ವರ್ಷಗಳ ಹಿಂದೆ ಕೋಪ ಮಾಡಿಕೊಂಡಿದ್ದ ಪತಿ- ಸಾಯುವ ವೇಳೆಯೂ ಮಾತಾಡಲಿಲ್ಲ ! ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಯಲ್ಲಿ 2 ತಿಂಗಳಲ್ಲೇ₹ 1.96 ಕೋಟಿ ಕಾಣಿಕೆ ಸಂಗ್ರಹ ಕಡ್ಡಾಯವಾಗಿ ಮಣ್ಣಿನ ಪರೀಕ್ಷೆ ಮಾಡಿಸಿ: ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಸಾದ್ ಕೆ.ಆರ್‌.ಪೇಟೆ: ಚೌಡೇಶ್ವರಿ ಅಮ್ಮನವರ ದೇಗುಲದಲ್ಲಿ ಆಷಾಢ ಶುಕ್ರವಾರ ಸಂಭ್ರಮ ಸಂಸತ್‌ನಲ್ಲಿ ಕನ್ನಡಿಗರ ಪರ ಧ್ವನಿ ಎತ್ತಿ: ರಾಜ್ಯದ ಎನ್‌ಡಿಎ ಸಂಸದರಿಗೆ ಎಎಪಿಯ ಡಾ. ಮುಖ್ಯಮಂತ್ರಿ ಚಂದ್ರು ಆಗ್ರಹ “ಶಕ್ತಿ" ಯೋಜನೆಯಿಂದ ಸಾರಿಗೆ ನಿಗಮಗಳ ಆದಾಯ ಹೆಚ್ಚಾಗಿದೆ- ಆದರೆ ನೌಕರರಿಗೆ ವೇತನಕೊಡಲು ಹಣವಿಲ್ಲ- ಎಂಥಾ ಹೇಳಿಕೆ ಇದು ಸಾ... KRS ಭರ್ತಿ: ಅಣೆಕಟ್ಟೆಯಿಂದ ಒಂದು ಲಕ್ಷ ಕ್ಯುಸೆಕ್‌ಗೂ ಅಧಿಕ ಪ್ರಮಾಣದ ನೀರು ಬಿಡುಗಡೆ- ಕಾವೇರಿ ಕೊಳ್ಳದ ಜನರಿಗೆ ಎಚ್ಚರಿ... ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಗೆ ಯತ್ನ: ಕಳ್ಳನ ಹೆಡೆಮುರಿಕಟ್ಟಿದ ಮಹಿಳಾ ಎಸ್‌ಐ ಕೃಷ್ಣರಾಜಪೇಟೆ: ಶ್ರೀ ಚೌಡೇಶ್ವರಿ ಅಮ್ಮನವರ ಕರಗ ಮಹೋತ್ಸವ ಅದ್ದೂರಿ ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಗೆ ಹರಿದು ಬಂತು ಕೋಟಿ ಕೋಟಿ ಹಣ