CrimeNEWSದೇಶ-ವಿದೇಶ

ಕೊರೊನಾಗೆ ಡಿಎಂಕೆ ಶಾಸಕ ಅನ್ಬಳಗನ್ ಬಲಿ

ವಿಜಯಪಥ ಸಮಗ್ರ ಸುದ್ದಿ

ಚೆನ್ನೈ: ತಮಿಳುನಾಡಿನ ವಿಪಕ್ಷ ದ್ರಾವಿಡ ಮುನ್ನೇತ್ರ ಕಳಗಂ(ಡಿಎಂಕೆ)  ಹಿರಿಯ ಶಾಸಕ ಜೆ. ಅನ್ಬಳಗನ್ ಕೊರೊನಾ ಸೋಂಕಿನಿಂದ ಇಂದು ಬೆಳಗ್ಗೆ ಮೃತಪಟ್ಟಿದ್ದಾರೆ.

ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿತ್ತು.  ಆದರೆ, ಅವರ ಆರೋಗ್ಯ ಸ್ಥಿತಿ ಸೋಮವಾರ ಸಂಜೆಯಿಂದ ಗಂಭೀರವಾಗಿತ್ತು, ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ಬೆಳಗ್ಗೆ ಕೊನೆಯುಸಿರೆಳೆದರು.

ಡಾ.ರೆಲಾ ಇನ್ಸ್ ಟಿಟ್ಯೂಟ್ ಅಂಡ್ ಮೆಡಿಕಲ್ ಸೆಂಟರ್ ನಲ್ಲಿ ದಾಖಲಾಗಿದ್ದ 61 ವರ್ಷದ ಅನ್ಬಳಗನ್ ಆರೋಗ್ಯ ಸ್ಥಿತಿ ಬಿಗಡಾಯಿಸಿದ್ದರಿಂದ ಆಮ್ಲಜನಕದ ಪ್ರಮಾಣ ಅರ್ಧಕ್ಕೆ ಕುಸಿದಿತ್ತು. ಹೀಗಾಗಿ ಅವರ ಆರೋಗ್ಯದಲ್ಲಿ ಯಾವುದೇ ಸುಧಾರಣೆ ಕಂಡು ಬಂದಿರಲಿಲ್ಲ. ಜತೆಗೆ ವೈರಸ್ ಸೋಂಕಿನಿಂದ ರಕ್ತದೊತ್ತಡ ಸಮತೋಲನ ಕಾಯ್ದುಕೊಳ್ಳಲು ಸಾಧ್ಯವಾಗಲಿಲ್ಲ ಎಂದು ಡಾ. ರೆಲಾ ಆಸ್ಪತ್ರೆ ವೈದ್ಯಾಧಿಕಾರಿ ತಿಳಿಸಿದ್ದಾರೆ.

ತಮಿಳುನಾಡಿನಲ್ಲಿ ಜೂನ್ 9ರ ಲೆಕ್ಕಾಚಾರದಂತೆ ಒಟ್ಟು 34, 914 ಪ್ರಕರಣಗಳು ದಾಖಲಾಗಿದ್ದು, 18, 325 ಮಂದಿ ಗುಣಮುಖರಾಗಿದ್ದಾರೆ. 307 ಮಂದಿ ಮೃತರಾಗಿದ್ದಾರೆ. 6.2 ಲಕ್ಷಕ್ಕೂ ಅಧಿಕ ಸ್ಯಾಂಪಲ್ ಪರೀಕ್ಷೆ ನಡೆಸಲಾಗಿದೆ. ಒಂದೇ ದಿನದಲ್ಲಿ 1685 ಪ್ರಕರಣಗಳು ದಾಖಲಾಗಿ ಆತಂಕ ಹೆಚ್ಚಿಸಿದೆ. ಒಟ್ಟು 16, 279 ಸಕ್ರಿಯ ಪ್ರಕರಣಗಳಿವೆ.

Leave a Reply

error: Content is protected !!
LATEST
ಪತ್ನಿ ಜೊತೆ 40 ವರ್ಷಗಳ ಹಿಂದೆ ಕೋಪ ಮಾಡಿಕೊಂಡಿದ್ದ ಪತಿ- ಸಾಯುವ ವೇಳೆಯೂ ಮಾತಾಡಲಿಲ್ಲ ! ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಯಲ್ಲಿ 2 ತಿಂಗಳಲ್ಲೇ₹ 1.96 ಕೋಟಿ ಕಾಣಿಕೆ ಸಂಗ್ರಹ ಕಡ್ಡಾಯವಾಗಿ ಮಣ್ಣಿನ ಪರೀಕ್ಷೆ ಮಾಡಿಸಿ: ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಸಾದ್ ಕೆ.ಆರ್‌.ಪೇಟೆ: ಚೌಡೇಶ್ವರಿ ಅಮ್ಮನವರ ದೇಗುಲದಲ್ಲಿ ಆಷಾಢ ಶುಕ್ರವಾರ ಸಂಭ್ರಮ ಸಂಸತ್‌ನಲ್ಲಿ ಕನ್ನಡಿಗರ ಪರ ಧ್ವನಿ ಎತ್ತಿ: ರಾಜ್ಯದ ಎನ್‌ಡಿಎ ಸಂಸದರಿಗೆ ಎಎಪಿಯ ಡಾ. ಮುಖ್ಯಮಂತ್ರಿ ಚಂದ್ರು ಆಗ್ರಹ “ಶಕ್ತಿ" ಯೋಜನೆಯಿಂದ ಸಾರಿಗೆ ನಿಗಮಗಳ ಆದಾಯ ಹೆಚ್ಚಾಗಿದೆ- ಆದರೆ ನೌಕರರಿಗೆ ವೇತನಕೊಡಲು ಹಣವಿಲ್ಲ- ಎಂಥಾ ಹೇಳಿಕೆ ಇದು ಸಾ... KRS ಭರ್ತಿ: ಅಣೆಕಟ್ಟೆಯಿಂದ ಒಂದು ಲಕ್ಷ ಕ್ಯುಸೆಕ್‌ಗೂ ಅಧಿಕ ಪ್ರಮಾಣದ ನೀರು ಬಿಡುಗಡೆ- ಕಾವೇರಿ ಕೊಳ್ಳದ ಜನರಿಗೆ ಎಚ್ಚರಿ... ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಗೆ ಯತ್ನ: ಕಳ್ಳನ ಹೆಡೆಮುರಿಕಟ್ಟಿದ ಮಹಿಳಾ ಎಸ್‌ಐ ಕೃಷ್ಣರಾಜಪೇಟೆ: ಶ್ರೀ ಚೌಡೇಶ್ವರಿ ಅಮ್ಮನವರ ಕರಗ ಮಹೋತ್ಸವ ಅದ್ದೂರಿ ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಗೆ ಹರಿದು ಬಂತು ಕೋಟಿ ಕೋಟಿ ಹಣ