CrimeNEWSಸಿನಿಪಥ

ಕೆಟ್ಟ ಹಾದಿ ತುಳಿಯಲ್ಲ, ತುಳಿತಕ್ಕೊಳಗಾದವರ ಏಳಿಗೆಗಾಗಿ ಕೆಲಸ ಮಾಡುತ್ತೇನೆ: ಆರ್ಯನ್ ಖಾನ್

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಮುಂಬೈ: ಡ್ರಗ್ಸ್ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಬಾಲಿವುಡ್ ನಟ ಶಾರೂಕ್ ಖಾನ್ ಪುತ್ರ ಆರ್ಯನ್ ಖಾನ್ ಇನ್ನೆಂದೂ ಕೆಟ್ಟ ಹಾದಿ ತುಳಿಯಲ್ಲ, ಬಡವರಿಗೆ ಸಹಾಯ ಮಾಡುತ್ತೇನೆ ಎಂದು ಹೇಳಿರುವುದಾಗಿ ತಿಳಿದುಬಂದಿದೆ.

ಇನ್ನು ನಾನು ಕೆಟ್ಟ ಹಾದಿ ತುಳಿಯಲ್ಲ, ಮುಂದಿನ ದಿನಗಳಲ್ಲಿ ಬಡವರು, ತುಳಿತಕ್ಕೊಳಗಾದವರ ಏಳಿಗೆಗಾಗಿ ಕೆಲಸ ಮಾಡುತ್ತೇನೆ. ಅಲ್ಲದೆ ಮುಂದೊಂದು ದಿನ ಎಲ್ಲರೂ ಹೆಮ್ಮೆ ಪಡುವಂತೆ ಬೆಳೆಯುತ್ತೇನೆ ಎಂದು (ಎಸ್‍ಸಿಬಿ ಅಧಿಕಾರಿಗಳ) ಮುಂಬೈ ವಲಯದ ನಿರ್ದೇಶಕ ಅಮೀರ್ ವಾಂಖೆಂಡೆ ಮುಂದೆ ಆರ್ಯನ್ ಖಾನ್ ಹೇಳಿದ್ದಾನೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಅ.2 ರಂದು ಮಧ್ಯರಾತ್ರಿ ಮುಂಬೈ ಕರಾವಳಿಯಲ್ಲಿ ಕ್ರೂಸ್ ಹಡಗಿನಲ್ಲಿ ರೇವ್‍ಪಾರ್ಟಿ ಮಾಡುತ್ತಿದ್ದ ವೇಳೆ ಎನ್‍ಸಿಬಿ ಅಧಿಕಾರಿಗಳ ಕೈಗೆ ಸಿಕ್ಕಿ ಬಿದ್ದಿರುವ 23 ವರ್ಷದದ ಆರ್ಯನ್ ಖಾನ್, ಆಥೂರ್ ರಸ್ತೆ ಜೈಲಿನಲ್ಲಿದ್ದಾನೆ. ನಿನ್ನೆ ಆತನ ಜೊತೆ ಎನ್‍ಸಿಬಿ ಮತ್ತು ಸಾಮಾಜಿಕ ಕಾರ್ಯಕರ್ತರು ಸಮಾಲೋಚನೆ ನಡೆಸಿದ್ದಾರೆ.

ಈ ವೇಳೆ ಮುಂದೊಂದು ದಿನ ಕೆಟ್ಟ ಕಾರಣಕ್ಕೆ ಸುದ್ದಿಯಾಗುವ ಕೃತ್ಯದಲ್ಲಿ ನಾನು ಭಾಗಿಯಾಗಲ್ಲ. ಬಡವರಿಗೆ ಸಹಾಯ ಮಾಡುತ್ತೆನೆ, ಸಾಮಾಜಿಕ ಬಲವರ್ಧನೆಗೆ ಕೆಲಸ ಮಾಡುತ್ತೇನೆ ಎಂದು ಆರ್ಯನ್‍ಖಾನ್ ಹೇಳಿದ್ದಾನೆ. ಆರ್ಯನ್ ಖಾನ್ ಜಾಮೀನು ಅರ್ಜಿ ತೀರ್ಪು ಅ.20 ರಂದು ಹೊರಬೀಳಲಿದೆ.

Leave a Reply

error: Content is protected !!
LATEST
ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ... BBMP: ಮಳೆಯಿಂದ ಸಮಸ್ಯೆ ಆಗಿದ್ದರೆ ಕೂಡಲೇ 1533ಕ್ಕೆ ಕರೆ ಮಾಡಿ ದೂರು ನೀಡಿ