NEWSನಮ್ಮರಾಜ್ಯರಾಜಕೀಯ

ಸಿಎಂ ಬಿಎಸ್‌ವೈ ಇಂಜಿನ್ ಆಫ್​ ಆಗಿರುವ ಬಸ್​ ಡ್ರೈವರ್​ ಇದ್ದಂತೆ : ಸಿದ್ದರಾಮಯ್ಯ ಗೇಲಿ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ಇಂಜಿನ್ ಆಫ್​ ಆಗಿರುವ ಬಸ್​ ಡ್ರೈವರ್​ ಇದ್ದಂತೆ, ಅದಕ್ಕೆ ಇನ್ನೂ ಸರ್ಕಾರ ಟೇಕಾಫ್​ ಆಗಿಲ್ಲ ಎಂದು ಸಿದ್ದರಾಮಯ್ಯ ಇಂದು ನಡೆದ ವಿಧಾನ ಮಂಡಲ ಅಧಿವೇಶನದಲ್ಲಿ ಗೇಲಿ ಮಾಡಿದ್ದಾರೆ.

ಅಧಿವೇಶನದಲ್ಲಿ ಸಿಎಂ ವೈಫಲ್ಯತೆಯ ಕುರಿತು ಮಾತನಾಡಿ, ಇನ್ನೂ ಕಳೆದ ಒಂದು ವರ್ಷದ ಅವಧಿಯಲ್ಲಿ ರಾಜ್ಯದಲ್ಲಿ ಅಭಿವೃದ್ಧಿ ಎಂಬ ಮಾತೇ ಇಲ್ಲದಂತಾಗಿದೆ . ನಮ್ಮ ಸರ್ಕಾರವನ್ನು ಟೇಕಾಫ್ ಆಗಿಲ್ಲ ಅಂತಾ ಬಿಜೆಪಿ ನಾಯಕರು ಟೀಕಿಸುತ್ತಿದ್ದರು‌. ಆದರೆ, ಈಗ ಯಾವ ಶಾಸಕರನ್ನಾದರೂ ಕೇಳಿ ಯಾರಿಗಾದರೂ ಯಾವುದಾದರೂ ಅನುದಾನ ಬಂದಿದೆಯಾ‌. ಯಾರು ಕೇಳಿದ್ರೂ ಕೊರೊನಾ ಹೆಸರು ನೆಪ ಹೇಳುತ್ತಾರೆ. ದುಡ್ಡಿಲ್ಲ ಎನ್ನುತ್ತಾರೆ‌. ಹಾಗಾದರೆ ಇದ್ದ ಹಣ ಏನಾಯ್ತು?” ಎಂದು ಪ್ರಶ್ನಿಸಿದರು.

ಈ ವರ್ಷದ ಬಜೆಟ್ ಪ್ರಕಾರ 52,000 ಕೋಟಿ ರೂ.ಸಾಲ ಮಾಡಬೇಕಿತ್ತು. ಆದರೆ, 35,000 ಕೋಟಿ ರೂ. ಹೆಚ್ಚುವರಿಯಾಗಿ ತೆಗೆದುಕೊಂಡಿದ್ದೀರಿ. ಸರ್ಕಾರ ಆರ್ಥಿಕ ನಿರ್ವಹಣೆಯಲ್ಲಿ ವಿಫಲವಾಗಲು ಮುಖ್ಯ ಕಾರಣ ಕೇಂದ್ರ ಸರ್ಕಾರ. ಕೇಂದ್ರದ ತೆರಿಗೆ ಬಾಕಿ ಶೇ.39.9ರಷ್ಟು ಕೊರತೆಯಾಗಿದ್ದೇ ಎಲ್ಲ ಸಮಸ್ಯೆಗಳಿಗೆ ಕಾರಣವಾಯ್ತು. ಕೇಂದ್ರ ಪ್ರಾಯೋಜಕತ್ವದ ಗ್ರಾಂಟ್ ಗಳಲ್ಲಿ ಶೇ.24 ಹಾಗೂ ಸ್ಪೆಷಲ್ ಗ್ರಾಂಟ್ 5495 ಕೋಟಿ ರೂ ಏಕೆ ಬರಲಿಲ್ಲ…?” ಎಂದರು.

ಈ ವರ್ಷ ಡಿಸೆಂಬರ್ ವರಗೆ ರಾಜ್ಯ ಸರ್ಕಾರ 63,000 ಕೋಟಿ ರೂ.ಸಾಲ ತೆಗೆದುಕೊಂಡಿದೆ. ಈ ಹಣ ಎಲ್ಲಿ ಹೋಯ್ತು..? ಅಭಿವೃದ್ದಿ ಕಾರ್ಯ ನಡೆಯುತ್ತಿಲ್ಲ. ಆರೋಗ್ಯ ಇಲಾಖೆಯಲ್ಲಿ 1500 ಕೋಟಿ ಮಾತ್ರ ಖರ್ಚಾಗಿದೆ. ಹಾಗಾದರೆ ಉಳಿದ ಹಣ ಎಲ್ಲಿ ಹೋಯ್ತು..?. ಮುಖ್ಯಮಂತ್ರಿ ಯಡಿಯೂರಪ್ಪ ಈವರೆಗೆ ಈ ಹಣಕ್ಕೆ ಲೆಕ್ಕ ಕೊಟ್ಟಿಲ್ಲ ಎಂದು ಕಿಡಿಕಾರಿದ್ದಾರೆ.

ಕೇಂದ್ರಕ್ಕೆ ಕರ್ನಾಟಕವೊಂದೇ 2.50ಲಕ್ಷ ಕೋಟಿ ರೂ. ತೆರಿಗೆ ಪಾಲು ನೀಡುತ್ತಿದೆ. ಆದರೆ, ಅದಕ್ಕೆ ಪ್ರತಿಯಾಗಿ ಕರ್ನಾಟಕಕ್ಕೆ ಕೇಂದ್ರದಿಂದ ಬರುತ್ತಿರುವುದು ಎಷ್ಟು? ಪೆಟ್ರೋಲ್ ಸೆಸ್ 23.77ರೂ. ಡೀಸೆಲ್ ಸೆಸ್ 31.84 ರೂ.ಹೆಚ್ಚಳ ಮಾಡಲಾಗಿದೆ. ಇದು ಕೇಂದ್ರ ಸರ್ಕಾರ ಮಾಡುತ್ತಿರುವ ಸುಲಿಗೆ, ಯಾರ ಜೇಬಿಗೆ ಕೇಂದ್ರ ಸರ್ಕಾರ ಕೈ ಹಾಕಿದೆ ಅರ್ಥ ಮಾಡಿಕೊಳ್ಳಿ ಎಂದು ಹೇಳಿದರು.

ಯುಪಿಎ ಸರ್ಕಾರದ ಅವಧಿಯಲ್ಲಿ ಕಚ್ಚಾತೈಲದ ಬೆಲೆ ಬ್ಯಾರಲ್ ಗೆ 100 ಡಾಲರ್ ಇದ್ದಾಗಲೂ ಪೆಟ್ರೋಲ್ ಬೆಲೆ ಇಷ್ಟೊಂದು ಏರಿಕೆಯಾಗಿರಲಿಲ್ಲ. ಈಗ ಮತ್ತೆ ಪೆಟ್ರೋಲ್ ಮೇಲೆ ಸೆಸ್ ಹಾಕಿದ್ದಾರೆ.  ಅಬಕಾರಿ ಸುಂಕ ಹತ್ತುಪಟ್ಟು ಹೆಚ್ಚಿಸಲಾಗಿದೆ. ಪೆಟ್ರೋಲ್ ಬೆಲೆ 90 ರೂ. ಡೀಸೆಲ್ ಬೆಲೆ 80ರೂ. ಗೆ ಬಂದು ಮುಟ್ಟಿದೆ. ಪೆಟ್ರೋಲ್ ಕಚ್ಚಾ ತೈಲದ ಬೆಲೆ ಬ್ಯಾರಲ್ ಗೆ 50 ಡಾಲರ್ ಗಿಂತ ಕಮ್ಮಿ ಇದೆ. ಆದರೂ ಇಷ್ಟೊಂದು ಪ್ರಮಾಣದಲ್ಲಿ ಬೆಲೆ ಏರಿಕೆ ಏಕೆ? ಎಂದು ಆಕ್ರೋಶ ಹೊರಹಾಕಿದರು.

Leave a Reply

error: Content is protected !!
LATEST
160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ ಮೇಲುಸೇತುವೆ-ಕೆಳಸೇತುವೆಗಳ ನಿರ್ವಹಣೆ ಸರಿಯಾಗಿ ಮಾಡಿ: ತುಷಾರ್ ಗಿರಿನಾಥ್