ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ಕರ್ನಾಟಕದಲ್ಲಿ ಇಂದು ಕೊರೊನಾ ರೌದ್ರಾವತಾರ ಮುಂದುವರಿಸಿದ್ದು ಇಂದು ದಾಖಲೆಯ 34804 ಪ್ರಕರಣ ಪತ್ತೆಯಾಗಿದ್ದು 143 ಮಂದಿ ಬಲಿಯಾಗಿದ್ದಾರೆ.
ರಾಜ್ಯದಲ್ಲಿ 34804 ಕೊರೊನಾ ಸೋಂಕು ಪತ್ತೆಯಾಗಿದ್ದು ಒಟ್ಟಾರೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 262162ಕ್ಕೆ ಏರಿಕೆಯಾಗಿದೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 14426ಕ್ಕೆ ಏರಿಕೆಯಾಗಿದೆ.
ರಾಜ್ಯದಲ್ಲಿ ಚೇತರಿಕೆ ಪ್ರಮಾಣವು ಕುಗ್ಗುತ್ತಿದ್ದು ಇಂದು 6982 ಮಂದಿ ಗುಣಮುಖರಾಗಿದ್ದಾರೆ. ಒಟ್ಟಾರೆ 1339201ಕೊರೊನಾ ಸೋಂಕಿತರಲ್ಲಿ 1062594 ಮಂದಿ ಗುಣಮುಖರಾಗಿದ್ದು ಇನ್ನು 262162 ಮಂದಿ ನಿಗದಿತ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಬೆಂಗಳೂರಿನಲ್ಲಿ ಇಂದು 20733 ಮಂದಿ ಕೊರೊನಾಗೆ ಒಳಗಾಗಿದ್ದು, ಸೋಂಕಿತರ ಸಂಖ್ಯೆ 653656 ಕ್ಕೆ ಏರಿಕೆಯಾಗಿದೆ. ಇಂದು 77 ಮಂದಿ ಮೃತಪಟ್ಟಿದ್ದು ಒಟ್ಟಾರೆ ಸಾವಿನ ಸಂಖ್ಯೆ 5800 ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ 180542 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ಬುಲೆಟಿನ್ ನಲ್ಲಿ ತಿಳಿಸಿದೆ.
20733 #Covid19 +ve in #Bengaluru. Not a figure to be proud of. 38404 +ve in #Karnataka,143 deaths@NewIndianXpress @XpressBengaluru @santwana99 @DHFWKA @BBMPCOMM @NammaBengaluroo @Namma_ORRCA @NammaKarnataka_ @namma_BTM @BellandurJothge @icindngr @_kanakapuraroad @SarjapuraRWA pic.twitter.com/dbIfWviRrl
— Bosky Khanna (@BoskyKhanna) April 25, 2021