ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ರಾಜ್ಯವನ್ನು 14ದಿನ ಲಾಕ್ಡೌನ್ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.
ಇಂದು ನಡೆದ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಏ.27ರ ರಾತ್ರಿ 9ಗಂಟೆಯಿಂದ ಮೇ 10ರವರೆಗೆ ಇಡೀ ರಾಜ್ಯಾದ್ಯಂತ ಲಾಕ್ ಇರಲಿದೆ ಎಂದು ತಿಳಿಸಿದರು.
ಕೆಎಸ್ಆರ್ಟಿಸಿ, ಬಿಎಂಟಿಸಿ ಸಾರಿಗೆ, ಮೆಟ್ರೋ ರೈಲು ಸಂಚಾರವನ್ನೂ ಸಂಪೂರ್ಣ ನಿಲ್ಲಿಸಲಾಗುವುದು, ಗಾರ್ಮೆಂಟ್ಸ್ ಕೂಡ ಇರುವುದಿಲ್ಲ. ಇನ್ನು ಕಟ್ಟಡ ಕಾಮಗಾರಿ, ಕೃಷಿ ಚಟುವಟಿಕೆಗಳು ನಡೆಯಲಿವೆ. ನಿತ್ಯ ಬೆಳಗ್ಗೆ 6ಗಂಟೆಯಿಂದ ಬೆಳಗ್ಗೆ 10ಗಂಟೆ ವರೆಗೆ ಅಗತ್ಯ ವಸ್ತುಗಳನ್ನು ಖರೀದಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿಸಿದರು.
ಇನ್ನು ರಾಜ್ಯದಲ್ಲಿ ಆಮ್ಲಜನಕದ ಕೊರತೆ ಇರುವುದಿಲ್ಲ. ರೆಮ್ಡಿಸಿವರ್ ಔಷಧವು ದೊರೆಯಲಿದೆ. ಇನ್ನು ಈ 14 ದಿನದಲ್ಲೂ ಕೊರೊನಾ ನಿಯಂತ್ರಣಕ್ಕೆ ಬಾರದಿದ್ದರೆ, ಮತ್ತೆ ಮುಂದುವರಿಯ ಬಹುದು ಎಂಬ ಎಚ್ಚರಿಕೆಯನ್ನು ನೀಡಿದರು.
ಪ್ರತಿಯೊಬ್ಬರೂ ಅಂತರ ಕಾಯ್ದುಕೊಂಡು, ಮಾಸ್ಕ್ ಧರಿಸಿ ಕೈಗಳನ್ನು ಸ್ವಚ್ಛಗೊಳಿಸಿಕೊಂಡು ಕೊರೊನಾ ತಡೆಗೆ ಸಹಕರಿಸಬೇಕು ಎಂದು ತಿಳಿಸಿದರು.