NEWSದೇಶ-ವಿದೇಶನಮ್ಮರಾಜ್ಯ

ಆಗಸ್ಟ್‌ 4ರಂದು ರಾಜ್ಯದಲ್ಲಿ 6259 ಮಂದಿಗೆ ಕೊರೊನಾ ಸೋಂಕು, 110 ಜನರು ಮೃತ

ಕರ್ನಾಟಕದಲ್ಲಿ ಇಂದು ವಿಶ್ವಮಾರಿ ಕೊರೊನಾ ಸೋಂಕು ಮೆಟ್ಟಿನಿಂತವರು ಸಂಖ್ಯೆ 6777 ಏರಿಕೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು:  ವಿಶ್ವ ಮಾರಿ ಕೊರೊನಾ ಇಂದು ಸಹ ರಾಜ್ಯದಲ್ಲಿ ಅಬ್ಬರಿಸಿದ್ದು ಬರೋಬ್ಬರಿ 6259 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ.  ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ಒಟ್ಟು  145830 ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಕೊರೊನಾ ಸೋಂಕು ತನ್ನ ಮರಣ ಮೃದಂಗವನ್ನು ತೀವ್ರಗೊಳಿಸಿದ್ದು ಇಂದು  110 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 2712 ಕ್ಕೆ  (ಅನ್ಯ ಕಾರಣಕ್ಕೆ 8ಸೇರಿ) ಏರಿಕೆಯಾಗಿದೆ.

ಈ ನಡುವೆ, ಇಂದು ರಾಜ್ಯದಲ್ಲಿ 6777 ಮಂದಿ ಗುಣಮುಖರಾಗಿದ್ದು, ಒಟ್ಟು ಗುಣಮುಖರಾದವರ ಸಂಖ್ಯೆ 69272 ಕ್ಕೇರಿದಂತಾಗಿದೆ. ಇನ್ನು 73846 ಸಕ್ರಿಯ ಪ್ರಕರಣಗಳಿವೆ.

ಇಂದು ರಾಜಧಾನಿ ಬೆಂಗಳೂರು ನಗರದಲ್ಲಿ 2035 ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 63033 ಕ್ಕೇರಿಕೆಯಾಗಿದೆ. ಬೆಂಗಳೂರಿನಲ್ಲಿ ಮಹಾಮಾರಿಗೆ ಇಂದು 30 ಮಂದಿ ಬಲಿಯಾಗಿದ್ದಾರೆ.

ಭಾರತ ಸೇರಿದಂತೆ  ವಿಶ್ವದ ನಾನಾ ರಾಷ್ಟ್ರಗಳ  ಕೊರೊನಾ ಸೋಂಕಿತರ ಅಂಕಿ ಅಂಶಗಳನ್ನು  ತಿಳಿಯಲು  ಇಲ್ಲಿ ಕ್ಲಿಕ್ ಮಾಡಿ   view by country

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ   ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು  ಇಲ್ಲಿ ಕ್ಲಿಕ್ಕಿಸಿ    https://play.google.com/store/apps/detail

Leave a Reply

error: Content is protected !!
LATEST
ಫ್ರಿಡ್ಜ್‌ನಲ್ಲಿದ್ದ ಮಹಾಲಕ್ಷ್ಮೀ ದೇಹದ 32 ಪೀಸ್‌ಗಳು ಹೇಳುತ್ತಿವೆ ಭಯಾನಕ ಸತ್ಯ ಬಡವರು-ಮಧ್ಯಮ ವರ್ಗದವರಿಗೆ ಕೈಗೆಟುಕುವ ದರದಲ್ಲಿ ನಿವೇಶನ ವಿತರಣೆ: ಡಾ.ಬಸ್ತಿ ರಂಗಪ್ಪ KSRTC ನಿರ್ದೇಶಕರ ಆದೇಶಕ್ಕೂ ಕಿಮ್ಮತ್ತಿಲ್ಲ: ಅಮಾನತು ತೆರವು ಮಾಡದೆ ಚಾಲಕನಿಗೆ ಮಾನಸಿಕ ಹಿಂಸೆ ಕೊಡುತ್ತಿರುವ ತುಮಕೂರು ... ಪ್ರಜ್ವಲ್ ರೇವಣ್ಣ ಪ್ರಕರಣ: ಅಶ್ಲೀಲ ವಿಡಿಯೋಗಳ ಹಂಚಿಕೆ ಅತ್ಯಂತ ಪಾಪ ಕೃತ್ಯ, ಸಂತ್ರಸ್ತೆಯರಿಗೆ ಅವಮಾನ- ಹೈಕೋರ್ಟ್ ವಿಶ್ವವಿಖ್ಯಾತ ಮೈಸೂರು ದಸರಾ ಗಂಡಾನೆಗಳ ನಡುವೆ ಕಿತ್ತಾಟ: ದಿಕ್ಕಾಪಾಲಾಗಿ ಓಡಿದ ಜನರು ಬನ್ನೂರು: ಬಸವನಹಳ್ಳಿ ಬಳಿ ಬೈಕ್‌ಗೆ ಡಿಕ್ಕಿ ಹೊಡೆದ ಹೆಣ್ಣು ಚಿರತೆ ಸಾವು ಅ.3ರಿಂದ ಶಾಲೆಗಳಿಗೆ ದಸರಾ ರಜೆ: ಶಾಲಾ ಶಿಕ್ಷಣ ಇಲಾಖೆ ಆದೇಶ BMTC ನೌಕರರ ₹400 ಕೋಟಿ ಗ್ರಾಚ್ಯುಟಿ, ಗಳಿಕೆ ರಜೆ ನಗದೀಕರಣ ಬಿಡುಗಡೆಗೆ ಮೀನಮೇಷ..!! KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ