NEWS

ರಾಜ್ಯಕ್ಕೆ ಇಂದು ಕೊರೊನಾಘಾತ, 45 ಹೊಸ ಸೋಂಕು ದೃಢ

ದಿನದಿಂದ ದಿನಕ್ಕೆ ಏರುತ್ತಲೇ ಇದೆ ಸೋಂಕಿತರ ಸಂಖ್ಯೆ l ಭಯದಲ್ಲಿ ಮುಳುಗುವುದೇ ಕರ್ನಾಟಕ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾಜ್ಯದಲ್ಲಿ ಇಂದು ಕೊರೊನಾಘಾತವಾಗಿದ್ದು ಒಂದೇದಿನದಲ್ಲಿ 45 ಹೊಸ ಸೋಂಕಿತರು ಮತ್ತೆಯಾಗುವ ಮೂಲಕ ರಾಜ್ಯದ ಜನರಲ್ಲಿ ಆತಂಕ ಹೆಚ್ಚಿಸಿದ್ದಾರೆ.

ಇಂದು ಅತಿ ಹೆಚ್ಚು ಎಂದರೆ ದಾವಣಗೆರೆಯಲ್ಲಿ 14 ಮಂದಿಗೆ ಸೋಂಕು ಇರುವುದು ದೃಢಪಟ್ಟಿದೆ. ಜತೆಗೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಐದು ತಿಂಗಳ ಒಂದು ಹೆಣ್ಣು ಮತ್ತು ಮೂರು ವರ್ಷದ ಮತ್ತೊಂದು ಹೆಣ್ಣು ಮಗು ಸೇರಿ 12 ಮಂದಿಗೆ ಸೋಂಕು ತಗುಳಿದೆ. ಇನ್ನು ಬೆಳಗಾವಿಯಲ್ಲಿ 11, ಬೆಂಗಳೂರಿನಲ್ಲಿ ಏಳು ಮತ್ತು ಬಳ್ಳಾರಿಯಲ್ಲಿ ಒಂದು ಕೇಸು ಪತ್ತೆಯಾಗಿದೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಿ: https://play.google.com/store/apps/detail

ಒಟ್ಟಾರೆ ಇಂದು ರಾಜ್ಯದಲ್ಲಿ ಅತಿ ಹೆಚ್ಚು ಕೊರೊನಾ ಪಾಸಿಟಿವ್‌ ಪ್ರಕರಣಗಳು ಕಾಣಿಸಿಕೊಳ್ಳುವ ಮೂಲಕ ಎದೆ ಬಡಿತವನ್ನು ಹೆಚ್ಚು ಮಾಡಿವೆ.

ಇದುವರೆಗೆ ಕರ್ನಾಟಕದಲ್ಲಿ 30 ಮಂದಿ ಮೃತಪಟ್ಟಿದ್ದು ಜತೆಗೆ ಇಂದು 45 ಹೊಸ ಕೊರೊನಾ ಪಾಲಿಸಿಟಿವ್‌  ಸೇರಿ  ಸೋಂಕಿತರ ಸಂಖ್ಯೆ 750ಕ್ಕೆ ಏರಿಕೆಯಾಗಿದೆ.  ಅದರಲ್ಲಿ 371 ಮಂದಿ ಗುಣಮುಖರಾಗಿ ಮನೆಗೆ ಮರಳಿದ್ದರೆ, ಇನ್ನೂ 349  ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮೈಸೂರಿನಲ್ಲಿ ಯಾವುದೇ ಪಾಸಿಟಿವ್‌ಪ್ರಕರಣ ವರದಿಯಾಗಿಲ್ಲ.

ದೇಶದಲ್ಲಿ 56,409 ಕ್ಕೇರಿದ ಸೋಂಕಿತರ ಸಂಖ್ಯೆ
ಇನ್ನು ದೇಶದಲ್ಲಿ ಈವರೆಗೆ 56,409 ಮಂದಿಗೆ ಸೋಂಕು ಇರುವುದು ದೃಢಪಟ್ಟಿದೆ. 1,890 ಮಂದಿ ಮೃತಪಟ್ಟಿದ್ದಾರೆ. 16,790 ಮಂದಿ ರೋಗಮುಕ್ತರಾಗಿದ್ದಾರೆ. ಪ್ರಪಂಚಾದ್ಯಂತ ಈವರೆಗೆ 39,18,678 ಜನರಲ್ಲಿ ಸೋಂಕು ಇರುವುದನ್ನು ವಿಶ್ವ ಆರೋಗ್ಯ ಸಂಸ್ಥೆ ಖಚಿತಪಡಿಸಿದೆ. ಇನ್ನು 2,70,765 ಜನರು ಮೃತಪಟ್ಟಿದ್ದಾರೆ. 13,44,597 ಮಂದಿ ರೋಗದಿಂದ ಮುಕ್ತಗೊಂಡಿದ್ದಾರೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಿ: https://play.google.com/store/apps/detail

Leave a Reply

error: Content is protected !!
LATEST
ಪತ್ನಿ ಜೊತೆ 40 ವರ್ಷಗಳ ಹಿಂದೆ ಕೋಪ ಮಾಡಿಕೊಂಡಿದ್ದ ಪತಿ- ಸಾಯುವ ವೇಳೆಯೂ ಮಾತಾಡಲಿಲ್ಲ ! ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಯಲ್ಲಿ 2 ತಿಂಗಳಲ್ಲೇ₹ 1.96 ಕೋಟಿ ಕಾಣಿಕೆ ಸಂಗ್ರಹ ಕಡ್ಡಾಯವಾಗಿ ಮಣ್ಣಿನ ಪರೀಕ್ಷೆ ಮಾಡಿಸಿ: ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಸಾದ್ ಕೆ.ಆರ್‌.ಪೇಟೆ: ಚೌಡೇಶ್ವರಿ ಅಮ್ಮನವರ ದೇಗುಲದಲ್ಲಿ ಆಷಾಢ ಶುಕ್ರವಾರ ಸಂಭ್ರಮ ಸಂಸತ್‌ನಲ್ಲಿ ಕನ್ನಡಿಗರ ಪರ ಧ್ವನಿ ಎತ್ತಿ: ರಾಜ್ಯದ ಎನ್‌ಡಿಎ ಸಂಸದರಿಗೆ ಎಎಪಿಯ ಡಾ. ಮುಖ್ಯಮಂತ್ರಿ ಚಂದ್ರು ಆಗ್ರಹ “ಶಕ್ತಿ" ಯೋಜನೆಯಿಂದ ಸಾರಿಗೆ ನಿಗಮಗಳ ಆದಾಯ ಹೆಚ್ಚಾಗಿದೆ- ಆದರೆ ನೌಕರರಿಗೆ ವೇತನಕೊಡಲು ಹಣವಿಲ್ಲ- ಎಂಥಾ ಹೇಳಿಕೆ ಇದು ಸಾ... KRS ಭರ್ತಿ: ಅಣೆಕಟ್ಟೆಯಿಂದ ಒಂದು ಲಕ್ಷ ಕ್ಯುಸೆಕ್‌ಗೂ ಅಧಿಕ ಪ್ರಮಾಣದ ನೀರು ಬಿಡುಗಡೆ- ಕಾವೇರಿ ಕೊಳ್ಳದ ಜನರಿಗೆ ಎಚ್ಚರಿ... ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಗೆ ಯತ್ನ: ಕಳ್ಳನ ಹೆಡೆಮುರಿಕಟ್ಟಿದ ಮಹಿಳಾ ಎಸ್‌ಐ ಕೃಷ್ಣರಾಜಪೇಟೆ: ಶ್ರೀ ಚೌಡೇಶ್ವರಿ ಅಮ್ಮನವರ ಕರಗ ಮಹೋತ್ಸವ ಅದ್ದೂರಿ ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಗೆ ಹರಿದು ಬಂತು ಕೋಟಿ ಕೋಟಿ ಹಣ