CrimeNEWSನಮ್ಮಜಿಲ್ಲೆರಾಜಕೀಯ

ವಿಜಯೇಂದ್ರ ವಿರುದ್ಧ ಆರೋಪ ಹಿನ್ನೆಲೆ:  ಕಾಂಗ್ರೆಸ್ ವಕ್ತಾರ ಎಂ.ಲಕ್ಷ್ಮಣ್ ವಿರುದ್ಧ ಎಫ್‍ಐಆರ್  

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ಧ ಸುಳ್ಳು ಆರೋಪ ಮತ್ತು ಬಿಜೆಪಿ ಶಾಸಕರ ನಕಲಿ ಸಹಿ ಬಳಸಿ ಸುಳ್ಳು ದಾಖಲೆ ಬಿಡುಗಡೆ ಮಾಡಿದ್ದಾರೆ ಎಂದು ಕಾಂಗ್ರೆಸ್ ವಕ್ತಾರ ಎಂ.ಲಕ್ಷ್ಮಣ್ ವಿರುದ್ಧ ಎಫ್‍ಐಆರ್ ದಾಖಲಿಸಲಾಗಿದೆ.

ಬೆಂಗಳೂರಿನ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ವಕೀಲ ಜಿ.ದೇವೇಗೌಡ ಎಂಬುವರು ಕೊಟ್ಟಿರುವ ದೂರಿನ ಮೇರೆಗೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್  ಮತ್ತು ವಕ್ತಾರೆ ಮಂಜುಳಾ ಮಾನಸ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಲಕ್ಷ್ಮಣ್ ಅವರು ಆ.26ರಂದು ಮೈಸೂರಿನ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಸೂಪರ್ ಸಿಎಂ ಬಿ.ವೈ ವಿಜಯೇಂದ್ರ ದರ್ಬಾರ್ ಎಂಬ ಐದು ಪುಟಗಳ ನಕಲಿ ದಾಖಲೆ ಬಿಡುಗಡೆ ಮಾಡಿದ್ದರು. ಇದರಲ್ಲಿ ಬಿಜೆಪಿ ಶಾಸಕರು ಸಹಿ ಮಾಡಿ ಹೈಕಮಾಂಡ್ ಗೆ ದೂರು ನೀಡಿದ್ದರು ಎಂದು ಮಾಡಿರುವ ಆರೋಪ  ಸುಳ್ಳಿನಿಂದ ಕೂಡಿದೆ.

ಇದನ್ನೂ ಓದಿ: ರಾಜ್ಯ ಸರ್ಕಾರದ ಸೂಪರ್‌ ಸಿಎಂ ವಿಜಯೇಂದ್ರ

ಈ ದಾಖಲೆ ಬಿಡುಗಡೆ ಮಾಡಿರುವುದರಿಂದ ವೈಯಕ್ತಿಕವಾಗಿ ವಿಜಯೇಂದ್ರ ಮತ್ತು ಬಿಜೆಪಿಯನ್ನು ನಿಂದಿಸಿದ್ದಾರೆ. ಇದರಿಂದ ವಿಜಯೇಂದ್ರ ಮತ್ತು ಪಕ್ಷದ ಗೌರವಕ್ಕೆ ಧಕ್ಕೆಯುಂಟು ಮಾಡಿರುವ ಲಕ್ಷ್ಮಣ್‌ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಎಂದು ದೂರಿನಲ್ಲಿ ಮನವಿ ಮಾಡಿದ್ದಾರೆ.

ಈ ಸಂಬಂಧ ದೂರು ದಾಖಲಿಸಿಕೊಂಡಿರುವ ವಿಧಾನಸೌಧ ಪೊಲೀಸರು ನಕಲಿ ಅಸಲಿ ಬಗ್ಗೆ ತಿಳಿದುಕೊಳ್ಳುವತ್ತ ಮುಂದಾಗಿದ್ದಾರೆ.

Leave a Reply

error: Content is protected !!
LATEST
KSRTC ನಿರ್ದೇಶಕರ ಆದೇಶಕ್ಕೂ ಕಿಮ್ಮತ್ತಿಲ್ಲ: ಅಮಾನತು ತೆರವು ಮಾಡದೆ ಚಾಲಕನಿಗೆ ಮಾನಸಿಕ ಹಿಂಸೆ ಕೊಡುತ್ತಿರುವ ತುಮಕೂರು ... ಪ್ರಜ್ವಲ್ ರೇವಣ್ಣ ಪ್ರಕರಣ: ಅಶ್ಲೀಲ ವಿಡಿಯೋಗಳ ಹಂಚಿಕೆ ಅತ್ಯಂತ ಪಾಪ ಕೃತ್ಯ, ಸಂತ್ರಸ್ತೆಯರಿಗೆ ಅವಮಾನ- ಹೈಕೋರ್ಟ್ ವಿಶ್ವವಿಖ್ಯಾತ ಮೈಸೂರು ದಸರಾ ಗಂಡಾನೆಗಳ ನಡುವೆ ಕಿತ್ತಾಟ: ದಿಕ್ಕಾಪಾಲಾಗಿ ಓಡಿದ ಜನರು ಬನ್ನೂರು: ಬಸವನಹಳ್ಳಿ ಬಳಿ ಬೈಕ್‌ಗೆ ಡಿಕ್ಕಿ ಹೊಡೆದ ಹೆಣ್ಣು ಚಿರತೆ ಸಾವು ಅ.3ರಿಂದ ಶಾಲೆಗಳಿಗೆ ದಸರಾ ರಜೆ: ಶಾಲಾ ಶಿಕ್ಷಣ ಇಲಾಖೆ ಆದೇಶ BMTC ನೌಕರರ ₹400 ಕೋಟಿ ಗ್ರಾಚ್ಯುಟಿ, ಗಳಿಕೆ ರಜೆ ನಗದೀಕರಣ ಬಿಡುಗಡೆಗೆ ಮೀನಮೇಷ..!! KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್