CrimeNEWSನಮ್ಮಜಿಲ್ಲೆರಾಜಕೀಯ

ಎಷ್ಟೇ ಪ್ರಭಾವಿಗಳಾಗಿದ್ದರೂ ಡ್ರಗ್ಸ್‌ ದಂಧೆಕೊರರಿಗೆ ಶಿಕ್ಷೆ ಖಚಿತ: ಸಚಿವ ಎಸ್‌ಟಿಎಸ್‌

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ಎಷ್ಟೇ ಪ್ರಭಾವಿ ವ್ಯಕ್ತಿಗಳಾಗಿದ್ದರೂ ಡ್ರಗ್ಸ್‌ ದಂಧೆಯಲ್ಲಿ ಭಾಗಿಯಾದವರಿಗೆ ಶಿಕ್ಷೆ ಖಚಿತ ಎಂದು ಜಿಲ್ಲಾ ಉಸ್ತುವಾರಿ ಹಾಗೂ ಸಹಕಾರಿ ಸಚಿವ ಎಸ್.ಟಿ.¸ ಸೋಮಶೇಖರ್‌ ತಿಳಿಸಿದರು.

ನಗರದಲ್ಲಿ ಶನಿವಾರ  ಸುದ್ದಿಗಾರರ  ಪ್ರಶ್ನೆಗೆ ಉತ್ತರಿಸಿದ ಅವರು, ಡ್ರಗ್ಸ್ ಕಂಟ್ರೋಲ್ ಮಾಡಿ ವ್ಯವಸ್ಥಿತವಾಗಿ ಮಟ್ಟಹಾಕು ನಿಟ್ಟಿನಲ್ಲಿ ಕ್ರಮ ಜರುಗಿಸಲಾಗುತ್ತಿದೆ. ಯಾವೆಲ್ಲ ವ್ಯಕ್ತಿಗಳು ಈ ದಂಧೆಯಲ್ಲಿ ಪಾಲ್ಗೊಂಡಿದ್ದಾರೋ ಅವರಿಗೆಲ್ಲ ಶಿಕ್ಷೆ ಖಚಿತ ಎಂದು ತಿಳಿಸಿದರು.

ಸಿನಿಮಾ ಕ್ಷೇತ್ರದಲ್ಲಿ ಇರುವವರು ಜನರಿಗೆ ಮಾದರಿಯಾಗಬೇಕು. ಅದನ್ನು ಬಿಟ್ಟು ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಇವರನ್ನು ನೋಡಿ ಯುವ ಜನಾಂಗ ಹಾಳಾಗಬಾರದು ಎಂಬ ದೃಷ್ಟಿಯಿಂದ ಸರ್ಕಾರ ಕಠೀಣ ಕ್ರಮ ತೆಗೆದುಕೊಳ್ಳಲಿದೆ ಎಂದರು.

ದಂಧೆಯಲ್ಲಿ ತೊಡಗಿರುವವರು  ಎಷ್ಟೇ ಪ್ರಭಾವಿಗಳಾದರೂ ಅವರ ವಿರುದ್ಧ ಕ್ರಮ ಜರುಗಿಸುವಂತೆ ನಾವೆಲ್ಲರೂ ಸಚಿವ ಸಂಪುಟ ಸಂಬೆಯಲ್ಲಿ ಕೂಡ ಒತ್ತಾಯಿಸಿದ್ದೇವೆ ಎಂದರು.

ಮೈತ್ರಿ ಸರ್ಕಾರ ಉರುಳಿಸಿದ್ದೇ ಡ್ರಗ್ಸ್‌ ಹಣದಿಂದ ಎಂಬ ಮಾಜಿ  ಸಿಎಂ ಎಚ್‌.ಡಿ.ಕುಮಾರಸ್ವಾಮಿ ಅವರ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ಅಂದು ಎಚ್‌ಡಿಕೆಯೇ ಸಿಎಂ ಆಗಿದ್ದರು, ಆ ವೇಳೆ ಎಲ್ಲಾ ಕ್ರಮ ಕೈಗೊಳ್ಳುವ ಅಧಿಕಾರವಿತ್ತು. ಅದನ್ನು ಏಕೆ ತಡೆಯಲು ಅವರು ಮುಂದಾಗಲಿಲ್ಲ ಎಂದು ಪ್ರಶ್ನಿಸಿದರು.

ಅವರಿಗೆ ಅಧಿಕಾರವಿದ್ದಾಗ ಗೊತ್ತಾಗಿಲ್ಲವಾ? ಈಗ ಅಧಿಕಾರ ಇಲ್ಲ ಅದಕ್ಕೆ  ಮಾತನಾಡುತ್ತಿದ್ದಾರೆ. ಡ್ರಗ್ಸ್ ಹಣ ಬಳಸಿ ಸರ್ಕಾರ ಮಾಡುವ ದುರ್ಬುದ್ಧಿ  ಭಾರತೀಯ ಜನತಾ ಪಕ್ಷಕ್ಕಿಲ್ಲ ಎಂದ ಅವರು ಈ ಹೇಳಿಕೆ ವಿರುದ್ಧ  ಮುಖ್ಯಮಂತ್ರಿ ಬಿಎಸ್‌ವೈ ಗೃಹಮಂತ್ರಿ ಮತ್ತು ಅದಕ್ಕೆ ಸಂಬಂಧಿಸಿದ ಅಧಿಕಾರಿಗಳ ಜತೆ ಮಾತನಾಡಿದ್ದು, ಸೂಕ್ತ ಕ್ರಮ ತೆಗೆದುಕೊಳ್ಳುತ್ತಾರೆ ಎಂದರು.

Leave a Reply

error: Content is protected !!
LATEST
KSRTC ನಿರ್ದೇಶಕರ ಆದೇಶಕ್ಕೂ ಕಿಮ್ಮತ್ತಿಲ್ಲ: ಅಮಾನತು ತೆರವು ಮಾಡದೆ ಚಾಲಕನಿಗೆ ಮಾನಸಿಕ ಹಿಂಸೆ ಕೊಡುತ್ತಿರುವ ತುಮಕೂರು ... ಪ್ರಜ್ವಲ್ ರೇವಣ್ಣ ಪ್ರಕರಣ: ಅಶ್ಲೀಲ ವಿಡಿಯೋಗಳ ಹಂಚಿಕೆ ಅತ್ಯಂತ ಪಾಪ ಕೃತ್ಯ, ಸಂತ್ರಸ್ತೆಯರಿಗೆ ಅವಮಾನ- ಹೈಕೋರ್ಟ್ ವಿಶ್ವವಿಖ್ಯಾತ ಮೈಸೂರು ದಸರಾ ಗಂಡಾನೆಗಳ ನಡುವೆ ಕಿತ್ತಾಟ: ದಿಕ್ಕಾಪಾಲಾಗಿ ಓಡಿದ ಜನರು ಬನ್ನೂರು: ಬಸವನಹಳ್ಳಿ ಬಳಿ ಬೈಕ್‌ಗೆ ಡಿಕ್ಕಿ ಹೊಡೆದ ಹೆಣ್ಣು ಚಿರತೆ ಸಾವು ಅ.3ರಿಂದ ಶಾಲೆಗಳಿಗೆ ದಸರಾ ರಜೆ: ಶಾಲಾ ಶಿಕ್ಷಣ ಇಲಾಖೆ ಆದೇಶ BMTC ನೌಕರರ ₹400 ಕೋಟಿ ಗ್ರಾಚ್ಯುಟಿ, ಗಳಿಕೆ ರಜೆ ನಗದೀಕರಣ ಬಿಡುಗಡೆಗೆ ಮೀನಮೇಷ..!! KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್