CrimeNEWSನಮ್ಮರಾಜ್ಯರಾಜಕೀಯ

ತಪ್ಪು ಮಾಡಿದವರಿಗೆ ಶಿಕ್ಷೆಯಾಗಲೇ ಬೇಕು: ಮಾಜಿ ಸಿಎಂ ಎಚ್‌ಡಿಕೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು:  ಡಿ.ಜೆ.ಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ನಡೆದ ಘಟನೆ ಅಕ್ಷಮ್ಯ. ತಪ್ಪು ಮಾಡಿದವರಿಗೆ ಶಿಕ್ಷೆಯಾಗಬೇಕು. ಧರ್ಮದ ಹೆಸರಲ್ಲಿ ಯಾರೇ ಗೂಂಡಾಗಿರಿ, ಕಾನೂನು ಕೈಗೆತ್ತಿಕೊಂಡರೂ ಅಂತವರನ್ನು ಮುಲಾಜಿಲ್ಲದೆ ಮಟ್ಟಹಾಕಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

ಯಾವುದೇ ಧರ್ಮದ ಸಮುದಾಯ ಕಾನೂನಿಗೆ ಅತೀತರಲ್ಲ. ನೆಲದ ಕಾನೂನನ್ನು ಗೌರವಿಸದ ಯಾರೊಬ್ಬರೂ ಶಿಕ್ಷೆಗೆ ಅರ್ಹರು.  ಸರ್ಕಾರ ಪುಂಡಾಟ ನಡೆಸಿದವರ ವಿರುದ್ಧ ಕಠಿಣ ಕ್ರಮ‌ಕೈಗೊಳ್ಳಬೇಕು. ಮುಂದೆಂದೂ ಇಂತಹ ಘಟನೆಗಳು ನಡೆಯದಂತೆ ಎಚ್ಚರ ವಹಿಸಬೇಕು ಎಂದು ಸಲಹೆ ನೀಡಿದ್ದಾರೆ.

ಅವಿವೇಕಿಯೊಬ್ಬ ಪೈಗಂಬರ್ ಅವರ ಬಗ್ಗೆ ಅವಹೇಳನ ಮಾಡಿದ, ಆತನಿಗೆ ಶಿಕ್ಷೆಯಾಗಬೇಕು ನಿಜ, ಆದರೆ ಪೈಗಂಬರ್ ಅನುಯಾಯಿಗಳು ದಾಂಧಲೆಗಿಳಿಯುವ ಮೂಲಕ ಪ್ರವಾದಿಯ ಪವಿತ್ರ ಸಂದೇಶಗಳನ್ನು ಮಣ್ಣುಪಾಲು ಮಾಡುವುದು ಆ ಧರ್ಮಕ್ಕೆ ಮಾಡಿದ ಅಪಚಾರ ಎಂದು ಹೇಳಿದ್ದಾರೆ.

ಕಾನೂನು ಪಾಲಕ ಪೊಲೀಸರು ಮತ್ತು ವರದಿಗಾಗಿ  ತೆರಳಿದ್ದ ಪತ್ರಕರ್ತರ ಮೇಲೆ ಅಮಾನುಷ ದೌರ್ಜನ್ಯ  ನಡೆಸುವ ಮೂಲಕ ನಾಗರಿಕ ಸಮಾಜಕ್ಕೆ ಯಾವ ಸಂದೇಶ ರವಾನಿಸುತ್ತದೆ ಎಂಬ ಕನಿಷ್ಠ ಪ್ರಜ್ಞೆಯೂ ಇಲ್ಲದೆ ವರ್ತಿಸಿರುವುದು ಅತ್ಯಂತ ಖಂಡನೀಯ ಎಂದು ಖಂಡಿಸಿದ್ದಾರೆ.

ಧರ್ಮದ ಹೆಸರಿನಲ್ಲಿ ಪುಂಡಾಟಿಕೆ ನಡೆಸುವ ಮೂಲಕ  ಸಂವಿಧಾನದ ಮೇಲೆ ಸವಾರಿ ಮಾಡುವ ಇಂತಹ ಘಟನೆಗಳಿಂದ ಸಾರ್ವತ್ರಿಕ ತಿರಸ್ಕಾರಕ್ಕೆ ಮತ್ತು ಅವಗಣನೆಗೆ ಸಮುದಾಯವೊಂದು ಪದೇಪದೆ  ಗುರಿಯಾಗುತ್ತಿರುವುದು ಸ್ವಯಂಕೃತ ಅಪರಾಧವಲ್ಲದೆ ಬೇರೇನಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ಘಟನೆ ಪೂರ್ವಯೋಜಿತ ಸಂಚು ಎಂಬ  ಅನುಮಾನಕ್ಕೂಪುಷ್ಟಿ ನೀಡಿದೆ. ಸ್ಥಳೀಯ ಜನಪ್ರತಿನಿಧಿಗಳ ಸ್ವಜನಪಕ್ಷಪಾತ, ಅಧಿಕಾರ ಲಾಲಸೆಗಳಿಂದಾಗಿ ಇಂಥದೊಂದು ಸಣ್ಣ ಕಿಡಿ ಬೆಂಕಿಯುಂಡೆ ಆಗುವ ಮೂಲಕ ಅಮಾಯಕ ಜನರ ಸಿಟ್ಟು-ಸೆಡವು ಸ್ಫೋಟಗೊಂಡಿದೆ. ನಿರುಪದ್ರವಿಗಳ ರಕ್ತ ಚೆಲ್ಲಾಡಿದೆ. ಕೌಟುಂಬಿಕ ದ್ವೇಷಾಸೂಯೆಗಳು ದುರ್ವರ್ತನೆಗೆ ವೇದಿಕೆಯಾಗಿರುವುದು ಸುಳ್ಳಲ್ಲ ಎಂದು ತಮ್ಮ ಟ್ವಿಟರ್‌ ನಲ್ಲಿ ಕಿಡಿಕಾರಿದ್ದಾರೆ.

1 Comment

Leave a Reply

error: Content is protected !!
LATEST
KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ