NEWSನಮ್ಮಜಿಲ್ಲೆನಮ್ಮರಾಜ್ಯ

ನೀರುಕುಡಿಯಲು ನದಿಗೆ ಇಳಿದ ಎಮ್ಮೆ ಹೊತ್ತೊಯ್ದ ಮೊಸಳೆ: ಗ್ರಾಮಸ್ಥರಲ್ಲಿ ಆತಂಕ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬಾಗಲಕೋಟೆ: ನೀರುಕುಡಿಯಲ್ಲಿ ನಡಿಗೆ ಇಳಿದ ಎಮ್ಮೆಯನ್ನು ಮೊಸಳೆ ಹೊತ್ತೊಯ್ದ ಘಟನೆ ಜಿಲ್ಲೆಯ ಜಮಖಂಡಿ ತಾಲೂಕಿನ ಶೂರ್ಪಾಲಿ ಗ್ರಾಮದಲ್ಲಿ ನಡೆದಿದೆ.

ಕೃಷ್ಣಾ ನದಿ ದಡದ ಗ್ರಾಮವಾಗಿರುವ ಶೂರ್ಪಾಲಿ ಬಳಿ ಹರಿಯುತ್ತಿರುವ ಕೃಷ್ಣಾ ನದಿಯಲ್ಲಿ ನೀರು ಕುಡಿಯಲು ಎಮ್ಮೆಯೊಂದು ಬುಧವಾರ ಹೋಗಿದೆ. ನದಿ ದಡದಲ್ಲೇ ದಾಳಿಗೆ ಹೊಂಚುಹಾಕಿ ಕುಳಿತಿದ್ದ ಮೊಸಳೆ, ನೀರು ಕುಡಿಯಲು ನದಿಗೆ ಇಳಿದ ಎಮ್ಮೆಯನ್ನು ಎಳೆದೊಯ್ದಿದೆ.

ಮೊಸಳೆ ಎಮ್ಮೆಯನ್ನ ಎಳೆದೊಯ್ಯುವ ದೃಶ್ಯವನ್ನು ಗ್ರಾಮಸ್ಥರು ತಮ್ಮ ಮೊಬೈಲ್‍ನಲ್ಲಿ ಲೈವ್ ವೀಡಿಯೋ ಮಾಡಿ ಸೆರೆ ಹಿಡಿದಿದ್ದಾರೆ. ಪ್ರತೀ ವರ್ಷ ಬೇಸಿಗೆ ಆರಂಭವಾಗ್ತಿದ್ದಂತೆ ನದಿದಡದ ಗ್ರಾಮಸ್ಥರಿಗೆ ಮೊಸಳೆ ದಾಳಿ ತಲೆ ನೋವಾಗಿ ಪರಿಣಮಿಸುತ್ತಿದೆ.

ಪ್ರತಿವರ್ಷವು ಕೃಷ್ಣಾ ನದಿಯಲ್ಲಿ ನೀರು ಕಡಿಮೆಯಾಗ್ತಿದ್ದಂತೆ ಮೊಸಳೆಗಳು ಪ್ರಾಣಿಗಳು ಹಾಗೂ ಮನುಷ್ಯರ ಮೇಲೆ ದಾಳಿ ನಡೆಸಿರುವ ಉದಾಹರಣೆಗಳಿವೆ. ಈಗ ನದಿಯಲ್ಲಿ ನೀರು ಕಡಿಮೆಯಾಗಿದ್ದು ಮತ್ತೆ ಮೊಸಳೆಗಳ ಹಾವಳಿ ಹೆಚ್ಚಾಗಿದೆ. ಮೊಸಳೆ ಪ್ರತ್ಯಕ್ಷವಾದ ಹಿನ್ನೆಲೆಯಲ್ಲಿ ನದಿ ಪಾತ್ರದ ಶೂರ್ಪಾಲಿ, ಕಂಕನವಾಡಿ ಹಾಗೂ ಮುತ್ತೂರು ಗ್ರಾಮಸ್ಥರಿಗೆ ಮೊಸಳೆ ದಾಳಿ ಆತಂಕ ಮೂಡಿಸಿದೆ.

ಇದರಿಂದ ಬೆಚ್ಚಿ ಬಿದ್ದಿರುವ ಗ್ರಾಮಸ್ಥರು ಮೊಸಳೆಯನ್ನು ಸೆರೆ ಹಿಡಿದು ನಮ್ಮನ್ನು ರಕ್ಷಿಸಲು ಅರಣ್ಯ ಅಧಿಕಾರಿಗಳು ಮುಂದಾಗಬೇಕು ಎಂದು ಆಗ್ರಹಿಸಿದ್ದಾರೆ. ಜತೆಗೆ ಮೊಸಳೆಗಳು ಬರುವ ನದಿ ತಟ್ಟದಲ್ಲಿ ಎಚ್ಚರಿಕೆ ಫಲಕ ಅಳವಡಿಸಬೇಕು ಎಂದು ಒತ್ತಾಯಿಸಿದ್ದಾರೆ.

Leave a Reply

error: Content is protected !!
LATEST
ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ... BBMP: ಮಳೆಯಿಂದ ಸಮಸ್ಯೆ ಆಗಿದ್ದರೆ ಕೂಡಲೇ 1533ಕ್ಕೆ ಕರೆ ಮಾಡಿ ದೂರು ನೀಡಿ