NEWSನಮ್ಮಜಿಲ್ಲೆರಾಜಕೀಯ

ಮಾಜಿ ಸಚಿವ ಸುರೇಶ್‌ ಕುಮಾರ್‌ ಕಚೇರಿಗೆ ಮುತ್ತಿಗೆ, ಪೊರಕೆ ಸೇವೆ: ಎಎಪಿ ಎಚ್ಚರಿಕೆ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾಜಾಜಿನಗರ ವಿಧಾನಸಭಾ ಕ್ಷೇತ್ರದ ಕೋವಿಡ್‌ ಸಂತ್ರಸ್ತರಿಗೆ ಹದಿನೈದು ದಿನಗಳೊಳಗೆ ಪರಿಹಾರಧನ ವಿತರಿಸದಿದ್ದರೆ ಬೃಹತ್‌ ಮೆರವಣಿಗೆ ಮೂಲಕ ಶಾಸಕ ಸುರೇಶ್‌ ಕುಮಾರ್‌ ಕಚೇರಿಗೆ ಮುತ್ತಿಗೆ ಹಾಕಿ ಪೊರಕೆ ಸೇವೆ ಮಾಡಲು ಆಮ್‌ ಆದ್ಮಿ ಪಾರ್ಟಿ ನಿರ್ಧರಿಸಿದೆ.

‌ಬುಧವಾರ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾತನಾಡಿದ ರಾಜಾಜಿನಗರ ವಿಧಾನಸಭಾ ಕ್ಷೇತ್ರದ ಆಮ್‌ ಆದ್ಮಿ ಪಾರ್ಟಿ ಅಧ್ಯಕ್ಷ ಬಿ.ಟಿ.ನಾಗಣ್ಣ, ಕೋವಿಡ್‌ ಪರಿಹಾರ ಕೋರಿ ರಾಜಾಜಿನಗರ ಕ್ಷೇತ್ರದಲ್ಲಿ ಸೇವಾಸಿಂಧು ಮೂಲಕ ಸಾವಿರಾರು ಅರ್ಜಿಗಳು ಸಲ್ಲಿಕೆಯಾಗಿವೆ. ಇದರಲ್ಲಿ ಹೆಚ್ಚಿನವರು ಮನೆಗೆಲಸದವರು, ಗಾರ್ಮೆಂಟ್ಸ್‌ ನೌಕರರು, ಕ್ಯಾಬ್‌ ಚಾಲಕರು, ದಿನಗೂಲಿ ನೌಕರರು ಹಾಗೂ ಬಡ-ಮಧ್ಯಮ ವರ್ಗದವರಾಗಿದ್ದಾರೆ.

ಕ್ಷೇತ್ರದಲ್ಲಿ 50ಕ್ಕೂ ಹೆಚ್ಚು ಜನರು ಕೋವಿಡ್‌ನಿಂದ ಮೃತಪಟ್ಟಿದ್ದಾರೆ. ಆದರು ಈವರೆಗೆ ಒಬ್ಬರಿಗೂ ಒಂದು ರೂಪಾಯಿ ಪರಿಹಾರ ದೊರೆತಿಲ್ಲ. ಕೋವಿಡ್‌ನಿಂದ ಮೃತಪಟ್ಟವರ ಕುಟುಂಬಗಳಿಗೆ ರಾಜ್ಯ ಸರ್ಕಾರ ಘೋಷಿಸಿರುವ ಒಂದು ಲಕ್ಷ ರೂಪಾಯಿ ಪರಿಹಾರವನ್ನು ಕ್ಷೇತ್ರದ ಸಂತ್ರಸ್ತರಿಗೆ ಕೊಡಿಸಲು ಶಾಸಕ ಸುರೇಶ್‌ ಕುಮಾರ್‌ ಸಂಪೂರ್ಣ ವಿಫಲರಾಗಿದ್ದಾರೆ ಎಂದು ಆರೋಪಿಸಿದರು.

ಬೆಂಗಳೂರು ನಗರದ ಆಮ್‌ ಆದ್ಮಿ ಪಾರ್ಟಿಯ ಮಹಿಳಾ ಘಟಕದ ಅಧ್ಯಕ್ಷೆ ಕುಶಲಸ್ವಾಮಿ ಮಾತನಾಡಿ, ಕೋವಿಡ್‌ನಿಂದ ದುಡಿಮೆ, ಉದ್ಯೋಗ, ಕುಟುಂಬ ಸದಸ್ಯರನ್ನು ಕಳೆದುಕೊಂಡು ಸಂಕಷ್ಟದಲ್ಲಿರುವ ಜನರಿಗೆ ಪರಿಹಾರ ವಿತರಿಸಲು ಸತಾಯಿಸುತ್ತಿರುವ ಸುರೇಶ್‌ ಕುಮಾರ್‌ರವರಿಗೆ ನಾಚಿಕೆಯಾಗಬೇಕು. ಅವರ ನಿಷ್ಕ್ರಿಯತೆಯಿಂದಾಗಿ ರಾಜಾಜಿನಗರ ಕ್ಷೇತ್ರವು ಅಭಿವೃದ್ಧಿಯಲ್ಲಿ ಹಿಂದುಳಿದಿದ್ದು, ಜನರು ಸರಿಯಾದ ಮೂಲಸೌಕರ್ಯವಿಲ್ಲದೇ ತೊಂದರೆ ಅನುಭವಿಸುತ್ತಿದ್ದಾರೆ ಎಂದು ಆರೋಪಿಸಿದರು.

ಜನರ ಹಿತಾಸಕ್ತಿಯನ್ನು ಮರೆತಿರುವ ಶಾಸಕರಿಗೆ ಆಮ್‌ ಆದ್ಮಿ ಪಾರ್ಟಿಯು ತಕ್ಕ ಪಾಠ ಕಲಿಸಲಿದೆ. ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವಜನಿಕರೊಂದಿಗೆ ಬೃಹತ್‌ ಮೆರವಣಿಗೆಯಲ್ಲಿ ಸಾಗಿ ಅವರ ಕಚೇರಿಗೆ ಮುತ್ತಿಗೆ ಹಾಕಿ ಪೊರಕೆ ಸೇವೆ ಮಾಡಲಿದ್ದೇವೆ ಎಂದು ಎಚ್ಚರಿಕೆ ನೀಡಿದರು.

ರಾಜಾಜಿನಗರದಲ್ಲಿ ಕೋವಿಡ್‌ನಿಂದ ಮೃತಪಟ್ಟವರ ಕುಟುಂಬಗಳ ನಾಲ್ವರು ಸಂತ್ರಸ್ತರು ಹಾಗೂ 30 ಸೇವಾಸಿಂಧು ಅರ್ಜಿದಾರರು ಸುದ್ದಿಗೋಷ್ಠಿಯಲ್ಲಿ ಭಾಗವಹಿಸಿದ್ದರು.

Leave a Reply

error: Content is protected !!
LATEST
ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ... BBMP: ಮಳೆಯಿಂದ ಸಮಸ್ಯೆ ಆಗಿದ್ದರೆ ಕೂಡಲೇ 1533ಕ್ಕೆ ಕರೆ ಮಾಡಿ ದೂರು ನೀಡಿ