NEWSನಮ್ಮಜಿಲ್ಲೆರಾಜಕೀಯ

ಮೈಸೂರು ಪಾಲಿಕೆ ಹಂಗಾಮಿ ಮೇಯರ್‌ ಆಗಿ ಅಧಿಕಾರ ಸ್ವೀಕರಿಸಿದ ಅನ್ವರ್‌ ಬೇಗ್

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಮೈಸೂರು: ಮೇಯರ್‌ ಆಗಿದ್ದ ಅವಧಿಯಲ್ಲಿ ಸದಸ್ಯತ್ವ ರದ್ದಾಗಿರುವುದು 38 ವರ್ಷಗಳ ಇತಿಹಾಸದಲ್ಲಿ ಇದೇ ಮೊದಲು. ಇದು ನೋವಿನ ಸಂಗತಿ. ಇಂತಹ ಸಂದರ್ಭದಲ್ಲಿ ಹಂಗಾಮಿ ಮೇಯರ್‌ ಸೇವೆ ಸಲ್ಲಿಸಲು ಅವಕಾಶ ಸಿಕ್ಕಿದೆ. ಸಿಕ್ಕ ಅವಕಾಶವನ್ನು ಸದ್ಬಳಕೆ ಮಾಡಿಕೊಳ್ಳುತ್ತೇನೆ ಎಂದು ಉಪಮೇಯರ್‌ ಅನ್ವರ್‌ಬೇಗ್ ತಿಳಿಸಿದರು.

ಬುಧವಾರ ಸಂಜೆ ನಗರಪಾಲಿಕೆ ಆಯುಕ್ತರಿಂದ ಹಂಗಾಮಿ ಮೇಯರ್ ನೇಮಕಾತಿ ಆದೇಶ ಪಡೆದು ಅಧಿಕಾರ ಸ್ವೀಕರಿಸಿದ ಬಳಿಕ ಸುದ್ದಿಗಾರರೊಂದಿಗೆ ವಾತನಾಡಿದರು. ಜೂ.11ರ ವರೆಗೆ ಹಂಗಾಮಿ ಮೇಯರ್‌ ಸೇವೆ ಸಲ್ಲಿಸಲಿದ್ದೇನೆ. ಕೋವಿಡ್ ಸಂದರ್ಭದಲ್ಲಿ ಜನರ ಪ್ರಾಣ ಉಳಿಸಲು ತುರ್ತಾಗಿ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಗಮನ ಹರಿಸುತ್ತೇನೆ ಎಂದು ತಿಳಿಸಿದರು.

ವಲಯ ಕಚೇರಿ ಮಟ್ಟದಲ್ಲಿ ಅಧಿಕಾರಿಗಳು ಹಾಗೂ ಸ್ಥಳೀಯ ನಗರಪಾಲಿಕೆ ಸದಸ್ಯರ ಸಭೆ ಕರೆದು ಕೋವಿಡ್ ನಿರ್ವಹಣೆಗೆ ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ಗುರುವಾರದಿಂದಲೇ ಸಭೆ ನಡೆಸುತ್ತೇನೆ. ಅದರ ಜೊತೆಗೆ ನಗರದ ಅಭಿವೃದ್ಧಿ ಬಗ್ಗೆ ಅಧಿಕಾರಿಗಳು ಕೈಗೊಂಡಿರುವ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸುತ್ತೇನೆ ಎಂದು ಹೇಳಿದರು.

ಜೂ.11 ರಂದು 12 ಗಂಟೆಗೆ ಚುನಾವಣೆ ನಿಗದಿಯಾಗಿದೆ. ಸರ್ಕಾರ ಲಾಕ್‌ಡೌನ್ ಮುಂದುವರಿಸಿದಲ್ಲಿ ಪ್ರಾದೆಶಿಕ ಆಯುಕ್ತರ ಜೊತೆ ಚರ್ಚಿಸಿ ಚುನಾವಣೆ ನಡೆಸಬೇಕೇ? ಅಥವಾ ಮುಂದೂಡಬೇಕೆ ಎಂಬ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಪಾಲಿಕೆ ಆಯುಕ್ತೆ ಶಿಲ್ಪಾನಾಗ್ ತಿಳಿಸಿದ್ದಾರೆ.

Leave a Reply

error: Content is protected !!
LATEST
KSRTC ನಿರ್ದೇಶಕರ ಆದೇಶಕ್ಕೂ ಕಿಮ್ಮತ್ತಿಲ್ಲ: ಅಮಾನತು ತೆರವು ಮಾಡದೆ ಚಾಲಕನಿಗೆ ಮಾನಸಿಕ ಹಿಂಸೆ ಕೊಡುತ್ತಿರುವ ತುಮಕೂರು ... ಪ್ರಜ್ವಲ್ ರೇವಣ್ಣ ಪ್ರಕರಣ: ಅಶ್ಲೀಲ ವಿಡಿಯೋಗಳ ಹಂಚಿಕೆ ಅತ್ಯಂತ ಪಾಪ ಕೃತ್ಯ, ಸಂತ್ರಸ್ತೆಯರಿಗೆ ಅವಮಾನ- ಹೈಕೋರ್ಟ್ ವಿಶ್ವವಿಖ್ಯಾತ ಮೈಸೂರು ದಸರಾ ಗಂಡಾನೆಗಳ ನಡುವೆ ಕಿತ್ತಾಟ: ದಿಕ್ಕಾಪಾಲಾಗಿ ಓಡಿದ ಜನರು ಬನ್ನೂರು: ಬಸವನಹಳ್ಳಿ ಬಳಿ ಬೈಕ್‌ಗೆ ಡಿಕ್ಕಿ ಹೊಡೆದ ಹೆಣ್ಣು ಚಿರತೆ ಸಾವು ಅ.3ರಿಂದ ಶಾಲೆಗಳಿಗೆ ದಸರಾ ರಜೆ: ಶಾಲಾ ಶಿಕ್ಷಣ ಇಲಾಖೆ ಆದೇಶ BMTC ನೌಕರರ ₹400 ಕೋಟಿ ಗ್ರಾಚ್ಯುಟಿ, ಗಳಿಕೆ ರಜೆ ನಗದೀಕರಣ ಬಿಡುಗಡೆಗೆ ಮೀನಮೇಷ..!! KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್