NEWSನಮ್ಮಜಿಲ್ಲೆಸಂಸ್ಕೃತಿ

ಸರಳವಾಗಿ ನಡೆದ ಬೆಕ್ಕರೆ ಬಾಲಚಂದ್ರ ಬಸವೇಶ್ವರಸ್ವಾಮಿಯ ಓಕಳಿ ಹಬ್ಬ

ವಿಜಯಪಥ ಸಮಗ್ರ ಸುದ್ದಿ

 ವಿಜಯಪಥ ಸಮಗ್ರ ಸುದ್ದಿ
ಪಿರಿಯಾಪಟ್ಟಣ: ತಾಲೂಕಿನ ಬೆಕ್ಕರೆ ಗ್ರಾಮದ ಶ್ರೀ ಬಾಲಚಂದ್ರ ಬಸವೇಶ್ವರಸ್ವಾಮಿಯ ಓಕಳಿ ಹಬ್ಬ ಈ ಬಾರಿ ಸರಳವಾಗಿ ನಡೆಯಿತು.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಪ್ರತಿವರ್ಷ ಯುಗಾದಿ ಹಬ್ಬ ಕಳೆದ ವಾರಕ್ಕೆ ಸುತ್ತಮುತ್ತಲ ಗ್ರಾಮಸ್ಥರು ಸೇರಿದಂತೆ ವಿವಿಧೆಡೆಯ ಸಾವಿರಾರು ಭಕ್ತಾದಿಗಳ ಸಮ್ಮುಖ ಓಕಳಿ ಹಬ್ಬವನ್ನು ವಿಜ್ರಂಭಣೆಯಿಂದ ಎರಡು ದಿನಗಳ ಕಾಲ ಆಚರಿಸಲಾಗುತ್ತಿತ್ತು. ಆದರೆ ಈ ಬಾರಿ ಕೊರೊನಾ ಸೋಂಕು ದಿನೇದಿನೆ ಹೆಚ್ಚುತ್ತಿರುವ ಕಾರಣ ಗ್ರಾಮದ ವಿವಿಧ ಕೋಮುಗಳ ಯಜಮಾನರು, ಮುಖಂಡರು ಹಾಗೂ ಗ್ರಾಮಸ್ಥರೆಲ್ಲರೂ ಚರ್ಚಿಸಿ ವಿಜೃಂಭಣೆಯ ಆಚರಣೆ, ಹರಕೆ ಸೇವೆಗಳು, ಜಾತ್ರೆ ಮಳಿಗೆಗಳು ಮತ್ತು ಹೊರಗಿನ ಭಕ್ತಾದಿಗಳಿಗೆ ನಿರ್ಬಂಧ ಹೇರಿ ಕೇವಲ ಗ್ರಾಮಸ್ಥರ ಸಮ್ಮುಖ ಹಿಂದಿನಿಂದ ನಡೆದುಕೊಂಡು ಬಂದ ಸಂಪ್ರದಾಯದಂತೆ ಸರಳವಾಗಿ ಆಚರಿಸಲು ತೀರ್ಮಾನಿಸಲಾಗಿತ್ತು.

ಸೋಮವಾರ ರಾತ್ರಿ ಕುಶಾಲನಗರದ ಕಾವೇರಿ ನದಿಯಿಂದ ಒಳಾಗ್ನಿ (ಗಂಗಾಜಲ) ತರುವ ಮೂಲಕ ಓಕಳಿ ಹಬ್ಬದ ಆಚರಣೆಗೆ ಚಾಲನೆ ದೊರೆತು ದೇವಾಲಯದಲ್ಲಿ ವಿಶೇಷ ಪೂಜೆ ನಡೆಯಿತು, ನಂತರ ಗ್ರಾಮದ ಹೊರವಲಯದಿಂದ ಶ್ರೀ ಮೂರೂರಮ್ಮ ತಾಯಿ ದೇವರ ಕಳಸ ತಂದು ದೇವಾಲಯದ ಆವರಣದಲ್ಲಿ ಪ್ರತಿಷ್ಠಾಪಿಸಿ ಪೂಜಿಸಲಾಯಿತು.

ಮಂಗಳವಾರದಂದು ಬೆಳಗ್ಗೆ ಪುಟಾಣಿ ಹೆಣ್ಣುಮಕ್ಕಳು ಗ್ರಾಮದ ಹೊರವಲಯದ ಗಂಗಾಸ್ಥಳದಿಂದ ಗಂಗೆಯನ್ನು ಹೊತ್ತು ವಿಶೇಷ ವಾದ್ಯಗಳೊಂದಿಗೆ ಮೆರವಣಿಗೆಯಲ್ಲಿ ತಂದು ಓಕಳಿ ಕೊಳ ತುಂಬಿಸಲಾಯಿತು, ಮಧ್ಯಾಹ್ನ ಶ್ರೀ ಬಾಲಚಂದ್ರ ಬಸವೇಶ್ವರ ಸ್ವಾಮಿಯ ಉತ್ಸವ ಮೆರವಣಿಗೆಗೆ ಚಾಲನೆ ದೊರೆತ ನಂತರ ಗ್ರಾಮದ ಚಿಣ್ಣರು ಓಕಳಿ ಆಡಿ ಸಂಭ್ರಮಿಸಿದರು. ಈ ವೇಳೆ ಭಕ್ತಾದಿಗಳಿಗೆ ಪಾನಕ ಹಾಗೂ ಮಜ್ಜಿಗೆ ವಿತರಿಸಲಾಯಿತು.

ಸಂಜೆ ಶ್ರೀ ಬಾಲಚಂದ್ರ ಬಸವೇಶ್ವರ ಸ್ವಾಮಿಯ ಪಲ್ಲಕ್ಕಿ ಹಾಗೂ ಮೂರೂರಮ್ಮ ತಾಯಿಯ ಉತ್ಸವದ ಮೆರವಣಿಗೆ  ಗ್ರಾಮದ ಪ್ರಮುಖ ಬೀದಿಗಳಲ್ಲಿ ವಿಶೇಷ ವಾದ್ಯಗಳೊಂದಿಗೆ ನಡೆಸಿ ಪ್ರತಿ ಮನೆಗಳ ಬಳಿ ವಿಶೇಷ ಪೂಜೆ ಸಲ್ಲಿಸಿದ ನಂತರ ಉತ್ಸವ ಮೂರ್ತಿಯನ್ನು ದೇವಾಲಯಕ್ಕೆ ತರುವ ಮೂಲಕ ಎರಡು ದಿನಗಳ ಕಾಲ ನಡೆದ ಓಕಳಿ ಹಬ್ಬ ಮುಕ್ತಾಯಗೊಂಡಿತು.

ಪೂಜಾ ಕೈಂಕರ್ಯಗಳನ್ನು ಅರ್ಚಕರಾದ ಬಿ.ವಿ ಬಸವರಾಜ್, ನಟರಾಜ್, ರಕ್ಷಿತ್ ರಾಜ್ ಹಾಗೂ ಬಿ.ಸಿ ವಿಶ್ವನಾಥ್ ನೆರವೇರಿಸಿದರು.

Leave a Reply

error: Content is protected !!
LATEST
ಕೆಎಸ್‌ಆರ್‌ಟಿಸಿ ರಾಮನಗರ: ಹೊಸ ETM ಮಷಿನ್ ಅವಾಂತರ- ಪಾಸ್ ನಮೂದಿಸಿದರೂ ಟಿಕೆಟ್ ಬರುತ್ತದೆ ! KSRTC: ಇದು ನಿನ್ನ ಮಗುವಲ್ಲ, ಪ್ಯಾಸೆಂಜರ್‌, ಫ್ಯಾಮಿಲಿ ಎದುರೆ ಸಹೋದ್ಯೋಗಿಯ ಅವಮಾನಿಸಿದ ಕಂಡಕ್ಟರ್‌!!? ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ