CrimeNEWSನಮ್ಮಜಿಲ್ಲೆ

ಚಾಮರಾಜನಗರ: ಕೊರೊನಾ ಸೋಂಕು, ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ ಒಂದೇ ಕುಟುಂಬ ನಾಲ್ವರು ಆತ್ಮಹತ್ಯೆ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಚಾಮರಾಜನಗರ: ಕೊರೊನಾ ಸೋಂಕು ಮತ್ತು ಆರ್ಥಕ ಸಂಕಷ್ಟವನ್ನು ಎದುರಿಸಲಾಗದೇ ಮನೆಯಲ್ಲೇ ಐಸೊಲೇಷನ್‌ ಆಗಿದ್ದ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಎಚ್‌.ಮೂಕನಹಳ್ಳಿಯಲ್ಲಿ ಬುಧವಾರ ನಡೆದಿದೆ.

ಗ್ರಾಮದ ಮಹದೇವಸ್ವಾಮಿ(45), ಅವರ ಪತ್ನಿ ಮಂಗಳಮ್ಮ, ಮಕ್ಕಳಾದ ಗೀತಾ ಹಾಗೂ ಶ್ರುತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕೊರೊನಾದ ಜತೆಗೆ ಆರ್ಥಿಕ ಸಂಕಷ್ಟಕ್ಕೂ ಸಿಲುಕಿ ಪತಿ, ಪತ್ನಿ ಮಕ್ಕಳು ಸೇರಿದಂತೆ ಕುಟುಂಬದ ಈ ನಾಲ್ವರು ನೇಣಿಗೆ ಶರಣಾಗಿರುವುದು ಗ್ರಾಮದಲ್ಲಿ ದುಃಖ ಮಡುಗಟ್ಟಿದೆ.

ಮಹದೇವಸ್ವಾಮಿ ಅವರಿಗೆ ಕೊರೊನಾ ಪಾಸಿಟಿವ್ ಆಗಿ ಹೋಂ ಐಸೊಲೇಷನ್ ನಲ್ಲಿದ್ದರು. ಕೋವಿಡ್‌ ಸೋಂಕಿಗೆ ಹೆದರಿ ಇವರು ನೇಣಿಗೆ ಶರಣಾಗಿದ್ದಾರೆ ಎಂದು ಹೇಳಲಾಗಿದೆ. ಈ ಕಟುಂಬವು ಆರ್ಥಿಕ ಸಂಕಷ್ಟದಿಂದ ಬಳಲುತ್ತಿತ್ತು ಎಂದು ಗ್ರಾಮಸ್ಥರಿಂದ ತಿಳಿದು ಬಂದಿದೆ.

20 ದಿನಗಳ ಹಿಂದೆ ಮಹದೇವಸ್ವಾಮಿ ಅವರಿಗೆ ಕೋವಿಡ್‌ ಸೋಂಕು ತಗುಲಿ ಗುಣಮುಖರಾಗಿದ್ದರು. ಇದೀಗ ಬೆಳಗ್ಗೆ ಇಡೀ ಕುಟುಂಬ ನೇಣಿಗೆ ಶರಣಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.

Leave a Reply

error: Content is protected !!
LATEST
KSRTC ನಿರ್ದೇಶಕರ ಆದೇಶಕ್ಕೂ ಕಿಮ್ಮತ್ತಿಲ್ಲ: ಅಮಾನತು ತೆರವು ಮಾಡದೆ ಚಾಲಕನಿಗೆ ಮಾನಸಿಕ ಹಿಂಸೆ ಕೊಡುತ್ತಿರುವ ತುಮಕೂರು ... ಪ್ರಜ್ವಲ್ ರೇವಣ್ಣ ಪ್ರಕರಣ: ಅಶ್ಲೀಲ ವಿಡಿಯೋಗಳ ಹಂಚಿಕೆ ಅತ್ಯಂತ ಪಾಪ ಕೃತ್ಯ, ಸಂತ್ರಸ್ತೆಯರಿಗೆ ಅವಮಾನ- ಹೈಕೋರ್ಟ್ ವಿಶ್ವವಿಖ್ಯಾತ ಮೈಸೂರು ದಸರಾ ಗಂಡಾನೆಗಳ ನಡುವೆ ಕಿತ್ತಾಟ: ದಿಕ್ಕಾಪಾಲಾಗಿ ಓಡಿದ ಜನರು ಬನ್ನೂರು: ಬಸವನಹಳ್ಳಿ ಬಳಿ ಬೈಕ್‌ಗೆ ಡಿಕ್ಕಿ ಹೊಡೆದ ಹೆಣ್ಣು ಚಿರತೆ ಸಾವು ಅ.3ರಿಂದ ಶಾಲೆಗಳಿಗೆ ದಸರಾ ರಜೆ: ಶಾಲಾ ಶಿಕ್ಷಣ ಇಲಾಖೆ ಆದೇಶ BMTC ನೌಕರರ ₹400 ಕೋಟಿ ಗ್ರಾಚ್ಯುಟಿ, ಗಳಿಕೆ ರಜೆ ನಗದೀಕರಣ ಬಿಡುಗಡೆಗೆ ಮೀನಮೇಷ..!! KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್