NEWSನಮ್ಮಜಿಲ್ಲೆರಾಜಕೀಯ

ಮಾಜಿ ಸಚಿವ ರಮೇಶ್ ಜಾರಕಿಹೊಳಿಗೆ ಕೊರೊನಾ ಪಾಸಿಟಿವ್ ಅಂತೆ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿಗೆ ಕೊರೊನಾ ಪಾಸಿಟಿವ್ ಆಗಿದೆಯಂತೆ.

ಬೆಳಗಾವಿಯಲ್ಲಿ ಸಚಿವ ಭೈರತಿ ಬಸವರಾಜು ಈ ಹೇಳಿಕೆ ನೀಡಿದ್ದು, ಹಲವರ ಕೋಪಕ್ಕೂ ಈಗ ಸಚಿವರು ಗುರಿಯಾಗಿದ್ದಾರೆ.

ಇದರಿಂದ ಸಿಡಿ ಕೇಸ್‌ಗೆ ಮತ್ತಷ್ಟು ಟ್ವಿಸ್ಟ್‌ ಸಿಕ್ಕಿದ್ದು, ವಿಚಾರಣೆಯಿಂದ ತಪ್ಪಿಸಿಕೊಳ್ಳಲು ಸರ್ಕಾರ ಯಾರಾರರಿಂದ ಇನ್ನೇನೇನು ಹೇಳಿಕೆ ಕೊಡಿಸುತ್ತದೋ ಎಂದು ಜನರು ಕಿಡಿಕಾರುತ್ತಿದ್ದಾರೆ.

ಇನ್ನು ಸಚಿವ ಭೈರತಿ ಬಸವರಾಜ ಹೇಳಿಕೆ ಹಲವರು ಪ್ರತಿಕ್ರಿಯೆ ನೀಡುತ್ತಿದ್ದು, ಇದು ಕೊರೊನಾ ವೈರಸ್‌ ಕಾಟವೋ ಅಥವಾ ಎಸ್‌ಐಟಿ ವಿಚಾರಣೆಯಿಂದ ತಪ್ಪಿಸಿಕೊಳ್ಳಲು ಬಂದ ಜ್ವರವೋ ಎಂದು ಪ್ರಶ್ನಿಸುತ್ತಿದ್ದಾರೆ.

ಒಂದು ಕಡೆ ಎಡೆಬಿಡದೆ ಎಸ್‌ಐಟಿ ದೂರುದಾರ ಸಂತ್ರಸ್ತೆಯನ್ನೇ ಆರೋಪಿ ಎಂಬಂತೆ ವಿಚಾರಣೆ ನಡೆಸುತ್ತಿದೆ. ಇತ್ತ ಆರೋಪಿ ಸ್ಥಾನದಲ್ಲಿರುವ ಮಾಜಿ ಸಚಿವ ರಮೇಶ್‌ ಜಾರಕಿಹೊಳಿ ರಾಜ ಮಾರ್ಗದಲ್ಲೇ ತಿರುಗಾಡಿಕೊಂಡು ಇದ್ದಾರೆ.

ಇದನ್ನು ಗಮನಿಸಿದರೆ ಉಳ್ಳವರಿಗಾಗಿ ಈ ಸಂವಿಧಾನ ರಚನೆಯಾಗಿದೆಯೇ ಎಂದು ಜನಸಾಮಾನ್ಯ ಸಂವಿಧಾನವದ ದಿಕ್ಕು ತಪ್ಪಿಸಲು ಹೊರಟಿಎಉವ ಅಧಿಕಾರಿಗಳು ಮತ್ತು ರಾಜಕೃಣಿಗಳನ್ನು ಪ್ರಶ್ನಿಸುತ್ತಿದ್ದಾನೆ.

ಆದರೆ, ಈ ಪ್ರಶ್ನೆಗೆ ಇವರಾರು ಉತ್ತರ ನೀಡುತ್ತಿಲ್ಲ. ಇದರ ಅರ್ಥ ಏನು ಎಂಬುವುದು ಈಗಲೂ ಯಕ್ಷ ಪ್ರಶ್ನೆಯಾಗಿಯೇ ಉಳಿದೆ. ಈ ರೀತಿಯಾದರೆ ದೇಶದಲ್ಲಿ ಜನಸಾಮಾನ್ಯ ಬದುಕಲು ಸಾಧ್ಯವೆ ಎಂಬುದನ್ನು ಸರ್ಕಾರ ಮತ್ತು ಅಧಿಕಾರಿಗಳು ತಿಳಿಸಬೇಕು ಎಂದು ಕೇಳುತ್ತಿದ್ದಾನೆ.

ಇದಕ್ಕೆ ಮುಂದೊಂದು ದಿನ ಎಸ್‌ಐಟಿ ಅಧಿಕಾರಿಗಳು ಉತ್ತರ ನೀಡುವರು ಎಂಬ ನಂಬಿಕೆಯಿಂದ ನಾವು ಕಾಯೋಣ ಎಂದು ಜನಸಾಮಾನ್ಯ ಹೇಳುತ್ತಿದ್ದಾನೆ.

Leave a Reply

error: Content is protected !!
LATEST
ಕೆಎಸ್‌ಆರ್‌ಟಿಸಿ ರಾಮನಗರ: ಹೊಸ ETM ಮಷಿನ್ ಅವಾಂತರ- ಪಾಸ್ ನಮೂದಿಸಿದರೂ ಟಿಕೆಟ್ ಬರುತ್ತದೆ ! KSRTC: ಇದು ನಿನ್ನ ಮಗುವಲ್ಲ, ಪ್ಯಾಸೆಂಜರ್‌, ಫ್ಯಾಮಿಲಿ ಎದುರೆ ಸಹೋದ್ಯೋಗಿಯ ಅವಮಾನಿಸಿದ ಕಂಡಕ್ಟರ್‌!!? ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ