NEWSನಮ್ಮಜಿಲ್ಲೆಸಂಸ್ಕೃತಿ

ಬೆಂಗಳೂರು ರೌಂಡ್ಸ್‌ಗಾಗಿ ಮೆಜೆಸ್ಟಿಕ್‌ನಿಂದ ಬೆಂಗಳೂರು ದರ್ಶಿನಿ ಹವಾನಿಯಂತ್ರಿತ ಬಸ್‌ಗೆ ಚಾಲನೆ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು, ಸಾರ್ವಜನಿಕ ಪ್ರಯಾಣಿಕರಿಗೆ ಮಿತವ್ಯಯಕರ ದರದಲ್ಲಿ ಉತ್ತಮ ಸಾರಿಗೆ ಸೌಲಭ್ಯವನ್ನು ಒದಗಿಸುತ್ತಿದೆ. ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಮತ್ತೆ ಈ ಕೆಳಕಂಡ ಮಾರ್ಗಗಳಲ್ಲಿ ಹವಾನಿಯಂತ್ರಿತ ಸಾರಿಗೆಯನ್ನು ಪ್ರಾರಂಭಿಸಲಾಗಿದೆ.

ಶುಕ್ರವಾರ, ಶನಿವಾರ ಮತ್ತು ಭಾನುವಾರಗಳಲ್ಲಿ ಮಾರ್ಗ ಸಂಖ್ಯೆ ವಿ-365 – ಹವಾನಿಯಂತ್ರಿತ ಬಸ್‌ ಕೆಂಪೇಗೌಡ ಬಸ್ ನಿಲ್ದಾಣದಿಂದ ಬನ್ನೇರುಘಟ್ಟ ನ್ಯಾಷನಲ್ಪಾರ್ಕ್ ಕಾರ್ಪೋರೇಷನ್, ಶಾಂತಿನಗರ ಬಸ್ ನಿಲ್ದಾಣ,ಗುರಪ್ಪನಪಾಳ್ಯ, ಗೊಟ್ಟಿಗೆರೆ ಮಾರ್ಗವಾಗಿ ಚಲಿಸಲಿದ್ದು, ವಾರದ ಮೂರು ದಿನಗಳಲ್ಲಿ ಸಂಚರಿಸಲಿದೆ. ಆ ದಿನಗಳಲ್ಲಿ ನಿತ್ಯ 12 ಸುತ್ತುವಳಿಗಳು ಇರಲಿವೆ.

ಈ ಬಸ್‌ ಕೆಂಪೇಗೌಡ ಬಸ್ ನಿಲ್ದಾಣದಿಂದ ಬೆಳಗ್ಗೆ 07:30, 08:00, 08:30, 13.15, 14:15, 15:15ಕ್ಕೆ ನಿರ್ಗಮಿಸಲಿದೆ. ಅದರಂತೆ ಬನ್ನೇರುಘಟ್ಟ ನ್ಯಾಷನಲ್ ಪಾರ್ಕ್ ನಿಂದ ಬೆಳಗ್ಗೆ 9:15, 10:30, 11:30, 17:00, 17:30, 18 ಗಂಟೆಗೆ ನಿರ್ಗಮಿಸಲಿದೆ.

ಬೆಂಗಳೂರು ದರ್ಶಿನಿ-01 ನಂ.ನ ಹವಾನಿಯಂತ್ರಿತ ಬಸ್‌ ಕೆಂಪೇಗೌಡ ಬಸ್ ನಿಲ್ದಾಣ-ಇಸ್ಕಾನ್ ದೇವಾಲಯ, ವಿಧಾನಸೌಧ, ಟಿಪ್ಪು ಪ್ಯಾಲೇಸ್, ಗವಿಗಂಗಾಧರೇಶ್ವರ ದೇವಸ್ಥಾನ, ಬುಲ್ ಟೆಂಪಲ್, ದೊಡ್ಡಗಣಪತಿ ದೇವಸ್ಥಾನ, ಕರ್ನಾಟಕ ಸಿಲ್ಕ್ ಎಂಪೋರಿಯಂ.

ಎಂ.ಜಿ.ರಸ್ತೆ, ಹಲಸೂರು ಕೆರೆ, ಕಬ್ಬನ್ ಪಾರ್ಕ್, ಸರ್.ಎಂ.ವಿಶ್ವೇಶ್ವರಯ್ಯ ಮ್ಯೂಸಿಯಂ, ಕರ್ನಾಟಕ ಚಿತ್ರಕಲಾ ಪರಿಷತ್ ಕೆಂಪೇಗೌಡ ಬಸ್ ನಿಲ್ದಾಣ ಮಾರ್ಗವಾಗಿ ಸಲಿಸಲಿದೆ. ಕೆಂಪೇಗೌಡ ಬಸ್ ನಿಲ್ದಾಣ ದಿಂದ ಬೆಳಗ್ಗೆ 9 ಗಂಟೆಗೆ ನಿರ್ಗಮಿಸಲಿದ್ದು ಸಂಜೆ 18 ಗಂಟೆಗೆ ಆಗಮಿಸಲಿದೆ.

ಇನ್ನು ಮಾರ್ಗ ಸಂಖ್ಯೆ ವಿ-226 ಎಚ್‍ಎಸ್‍ಆರ್ ಎಚ್.ಎಸ್.ಆರ್. ಬಿಡಿಎ ಕಾಂಪ್ಲೆಕ್ಸ್‍ವಂಡರ್‍ಲಾ ಬಿಟಿಎಂ ಲೇಔಟ್, ರಾಗಿಗುಡ್ಡ, ಬನಶಂಕರಿ ಟಿಟಿಎಂಸಿ, ಪಿಇಎಸ್ ಕಾಲೇಜು, ನಾಯಂಡಹಳ್ಳಿ, ಕೆಂಗೇರಿ ಮಾರ್ಗವಾಗಿ ಗುರುವಾರ, ಶುಕ್ರವಾರ, ಶನಿವಾರ ಮತ್ತು ಭಾನುವಾರಗಳಲ್ಲಿ ಚಲಿಸಲಿದೆ.

ಎಚ್.ಎಸ್.ಆರ್ ಬಿಡಿಎ ಕಾಂಪ್ಲೆಕ್ಸ್ ನಿಂದ ಬೆಳಗ್ಗೆ 9 ಗಂಟೆಗೆ ನಿರ್ಗಮಿಸಲಿದ್ದು, ವಂಡರ್‌ಲಾದಿಂದ ಸಂಜೆ 18:15 ನಿರ್ಗಮಿಸಲಿದೆ ಎಂದು ಬಿಎಂಟಿಸಿ ಸಾರ್ವಜನಿಕ ಸಂಪರ್ಕಾಧಿಕಾರಿ ತಿಳಿಸಿದ್ದಾರೆ.

Leave a Reply

error: Content is protected !!
LATEST
ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ...