NEWSನಮ್ಮಜಿಲ್ಲೆ

ಮೈಮುಲ್‌ನಲ್ಲಿ ಜಿಟಿಡಿ ಬಣಕ್ಕೆ ಭರ್ಜರಿ ಗೆಲುವು: ಸಾರಾ ಮಹೇಶ್‌ಗೆ ಮುಖಭಂಗ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಮೈಸೂರು: ಜೆಡಿಎಸ್‌ನಲ್ಲೇ ಎರಡು ಬಣಗಳಾಗಿ ಮೈಸೂರು ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಒಕ್ಕೂಟದ (ಮೈಮುಲ್‌) ಚುನಾವಣೆಯಲ್ಲಿ ಸ್ಪರ್ಥಿಸಿದ್ದ ಶಾಸಕ ಜಿ.ಟಿ.ದೇವೇಗೌಡ ಅವರ ಬಣ ಭರ್ಜರಿ ಗೆಲುವು ಸಾಧಿಸುವ ಮೂಲಕ ಸಾರಾ ಮಹೇಶ್‌ ಮುಖಭಂಗ ಅನುಭವಿಸುವಂತಾಯಿತು.

ಮೈಮುಲ್‌ ಆಡಳಿತ ಮಂಡಳಿಯ 15 ನಿರ್ದೇಶಕ ಸ್ಥಾನಗಳಿಗೆ ಮಂಗಳವಾರ ನಡೆದ ಚುನಾವಣೆಯಲ್ಲಿ ಜಿಟಿಡಿ ಬಣ 12 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದು, ಶಾಸಕ ಸಾ.ರಾ.ಮಹೇಶ್‌ ಬಣವು ಕೇವಲ 3 ಸ್ಥಾನಗಳನ್ನಷ್ಟೇ ಗಳಿಸಿದೆ. ಈ ಮೂಲಕ ಜಿ.ಟಿ.ದೇವೇಗೌಡ ಅವರ ಬಣ ಮುಂದಿನ 5 ವರ್ಷದವರೆಗೆ ಮೈಮುಲ್‌ ಅಧಿಕಾರದ ಗದ್ದುಗೆ ಹಿಡಿಯುವುದು ಖಚಿತವಾಗಿದೆ.

ಎಚ್‌.ಡಿ‌.ರೇವಣ್ಣ ಸಂಬಂಧಿ ಮಧುಚಂದ್ರಗೆ ಸೋಲು
ಮೈಮುಲ್ ಚುನಾವಣೆಯಲ್ಲಿ ಎಚ್‌.ಡಿ‌.ರೇವಣ್ಣ ಸಂಬಂಧಿ ಎಸ್.ಕೆ.ಮಧುಚಂದ್ರ ಸೋಲು ಅನುಭವಿಸಿದ್ದಾರೆ. ಅವರು ಎಚ್‌ಡಿಕೆ -ಸಾ.ರಾ.ಮಹೇಶ್ ಬೆಂಬಲದೊಂದಿಗೆ ಕಣಕ್ಕಿಳಿದಿದ್ದರು.

ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಮಧುಚಂದ್ರ, ‘ಮೈಸೂರು ಜಿಲ್ಲೆಯಲ್ಲಿ ಜಿ.ಟಿ.ದೇವೇಗೌಡರ ಪ್ರಾಬಲ್ಯ ಒಪ್ಪಿಕೊಂಡಿದ್ದೇವೆ. ಪೂರ್ವ ಸಿದ್ಧತೆ ಇಲ್ಲದೆ ಕಣಕ್ಕಿಳಿದಿದ್ದು ಸೋಲಿಗೆ ಕಾರಣವಾಯಿತು ಎಂದು ಹೇಳಿದರು.

ಇನ್ನು ಜಿಲ್ಲೆಯಲ್ಲಿ ಜಿಟಿಡಿ ಅವರನ್ನು ಪಕ್ಕಕ್ಕೆ ಸರಿಸಲು ಜೆಡಿಎಸ್‌ ಈಗಾಗಲೇ ನಿರ್ಧಿಸಿದ್ದು, ಜಿಟಿಡಿ ಕೂಡ ಬೇರೆ ಪಕ್ಷದವರೊಂದಿಗೆ ಈಗಾಗಲೇ ಗುರುತಿಸಿಕೊಂಡಿದ್ದಾರೆ. ಈ ನಡುವೆ ಮುಂದಿನ ಚುನಾವಣೆ ಜಿಟಿಡಿ ಅವರಿಗೆ ಕಾರೇ ಮುಳ್ಳಾಗುವ ಸಾಧ್ಯತೆಯೂ ಹೆಚ್ಚಿದೆ ಎಂದು ನಂಬಲಾರ್ಹ ಮೂಲಗಳು ತಿಳಿಸಿವೆ.

Leave a Reply

error: Content is protected !!
LATEST
KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ