ವಿಜಯಪಥ ಸಮಗ್ರ ಸುದ್ದಿ
ಹಾಸನ: ಚಿಕ್ಕಬಳ್ಳಾಪುರ ಜಿಲ್ಲೆಯ ಹಿರೇನಾಗವಲ್ಲಿ, ಶಿವಮೊಗ್ಗ ಜಿಲ್ಲೆಯ ಹುಣಸೋಡಿಯಲ್ಲಿ ಸಂಭವಿಸಿದ ಜಿಲೆಟಿನ್ ಸ್ಫೋಟ ಪ್ರಕರಣ ಮಾಸುವ ಮುನ್ನವೇ ಅದೇ ರೀತಿಯ ಮತ್ತೊಂದು ದುರಂತದಲ್ಲಿ ಸ್ಥಳದಲ್ಲೇ ಒಬ್ಬ ಮೃತಪಟ್ಟಿದ್ದು, ಇಬ್ಬರು ಗಾಯಗೊಂಡಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.
ಹೊಳೆನರಸೀಪುರ ತಾಲೂಕಿನ ಚಾಕೇನಹಳ್ಳಿ ಬಳಿ ಸ್ಫೋಟಕಗಳ ಗೋದಾಮು ಇತ್ತು ಎಂದು ಹೇಳಲಾಗಿದ್ದು, ಅಲ್ಲಿ ಸ್ಫೋಟಕ ವಸ್ತುಗಳನ್ನು ಇಳಿಸುವಾಗ ಜಿಲೆಟಿನ್ ಸಿಡಿದು ಈ ಘಟನೆ ಜರುಗಿದೆ.
ಸ್ಥಳಕ್ಕೆ ಅಗ್ನಿಶಾಮಕ ದಳ, ಪೊಲೀಸರು ದೌಡಾಯಿಸಿದ್ದು, ಗೋಡಾನ್ನಲ್ಲಿ ಜಿಲೆಟಿನ್ ಕಡ್ಡಿ ಸೇರಿದಂತೆ ಇತರ ಸ್ಫೋಟಕ ವಸ್ತುಗಳು ಪತ್ತೆಯಾಗಿವೆ. ಗಾಯಾಳುಗಳಿಗೆ ಚಿಕಿತ್ಸೆ ಮುಂದುವರಿದಿದ್ದು, ಅವರ ಸ್ಥಿತಿ ಗಂಭೀರವಾಗಿದೆ.