NEWSನಮ್ಮಜಿಲ್ಲೆ

ಬನ್ನೂರು- ಬಾಲ್ಯ ವಿವಾಹ ಕಂಡುಬಂದಲ್ಲಿ ತಕ್ಷಣ  ಪೊಲೀಸರಿಗೆ ಮಾಹಿತಿ ನೀಡಿ: ಪುರಸಭೆ ಅಧ್ಯಕ್ಷೆ  ಭಾಗ್ಯಶ್ರಿ

ಮೈಸೂರಿನ ಚೈಲ್ಡ್ ಲೈನ್ ಸಂಸ್ಥೆ ವತಿಯಿಂದ ಸರ್ಕಾರಿ ಹೆಣ್ಣು ಮಕ್ಕಳ ಕಾಲೇಜು ಬನ್ನೂರಿನಲ್ಲಿ, ಮಕ್ಕಳ ರಕ್ಷಣೆ ಕಾರ್ಯಕ್ರಮ 

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬನ್ನೂರು: ನಿಮ್ಮ ಸುತ್ತಮುತ್ತಲಿನ ಪ್ರದೇಶದಲ್ಲಿ ಎಲ್ಲಿಯಾದರು ಬಾಲ್ಯ ವಿವಾಹಗಳು ನಡೆಯುವುದು ಕಂಡುಬಂದಲ್ಲಿ ತಕ್ಷಣ ಪೊಲೀಸರಿಗೆ ಮಾಹಿತಿ ನೀಡಬೇಕು ಎಂದು ಬನ್ನೂರಿನ ಪುರಸಭೆ ಅಧ್ಯಕ್ಷೆ  ಭಾಗ್ಯಶ್ರಿ ಕೃಷ್ಣ ವಿದ್ಯಾರ್ಥಿನಿಯರಿಗೆ ಸಲಹೆ ನೀಡಿದರು.

ಮೈಸೂರಿನ ಚೈಲ್ಡ್ ಲೈನ್ ಸಂಸ್ಥೆ ವತಿಯಿಂದ ಸರ್ಕಾರಿ ಹೆಣ್ಣು ಮಕ್ಕಳ ಕಾಲೇಜು ಬನ್ನೂರಿನಲ್ಲಿ, ಮಕ್ಕಳ ರಕ್ಷಣೆ ಹಾಗೂ ಬಾಲ್ಯ ವಿವಾಹ ಕುರಿತು ಆಯೋಜಿಸಿದ್ದ ಅರಿವು ಕಾರ್ಯಕ್ರಮದಲ್ಲಿ ಮಾತನಾಡಿದರು.

ಬಾಲ್ಯ ವಿವಾಹದಿಂದ ಹೆಣ್ಣುಮಕ್ಕಳಿಗೆ ಆಗುವ ದೈಹಿಕ ಹಾಗೂ ಮಾನಸಿಕ  ದುಷ್ಪರಿಣಾಮಗಳ ಬಗ್ಗೆ ನೀವು ಅರಿತುಕೊಳ್ಳುವ ಮೂಲಕ ಇತರರಿಗೂ ತಿಳಿಸಬೇಕು ಎಂದು ಹೇಳಿದರು.

ಇನ್ನು ಬಾಲ್ಯ ವಿವಾಹಗಳನ್ನು ತಡೆಗಟ್ಟುವುದಕ್ಕೆ ಶಾಲೆಗಳ ಮಟ್ಟದಲ್ಲಿ ಗಂಡು ಹಾಗೂ ಹೆಣ್ಣು ಮಕ್ಕಳಿಬ್ಬರಿಗೂ ಜಾಗೃತಿ ಮೂಡಿಸಬೇಕು. ವರ್ಷಕ್ಕೊಮ್ಮೆಯಾದರು ಮಕ್ಕಳ ಪೋಷಕರನ್ನು ಕರೆದು ಕೌನ್ಸಲಿಂಗ್ ಮಾಡಬೇಕು.  ಹಳ್ಳಿಗಳಲ್ಲಿ ಗ್ರಾಮ ಪಂಚಾಯಿಯ ಮೂಲಕ ಜನರಿಗೆ ಆಗಿಂದಾಗೆ ಅರಿವು ಮೂಡಿಸುವುದರಿಂದ  ಬಾಲ್ಯ ವಿವಾಹಗಳಿಂದ ಮಕ್ಕಳ ಜೀವನ ನಾಶವಾಗದಂತೆ ಕಾಪಾಡಬಹುದು ಎಂದರು.

ಮಹಾನಗರಗಳಲ್ಲಿ ಕೆಲಸ ಕೊಡಿಸುವುದಾಗಿ ಹೆಣ್ಣುಮಕ್ಕಳ ತಂದೆತಾಯಿರವರಿಗೆ ಹಣದ ಆಮಿಷ ತೋರಿಸಿ ಹೆಣ್ಣು ಮಕ್ಕಳ ಕಳ್ಳ ಸಾಗಣೆ ಮಾಡುವ ಮೋಸಗಾರರ ಬಗ್ಗೆ ಮಾಧ್ಯಮಗಳಲ್ಲಿ ಆಗಿಂದಾಗೆ ಸುದ್ದಿಗಳು ಪ್ರಸಾರವಾಗುತ್ತಿರುತ್ತವೆ. ಹೀಗಾಗಿ ಈ ಬಗ್ಗೆ ಹೆಣ್ಣು ಮಕ್ಕಳು ಜಾಗ್ರತೆ ವಹಿಸಬೇಕು ಜತೆಗೆ  ಅಂಥವರ ಸುಳಿವು ಸಿಕ್ಕರೆ ಪೊಲೀಸರಿಗೆ ಮಾಹಿತಿ ನೀಡುವಂತೆ ತಿಳಿಸಿದರು.

ಬನ್ನೂರು ಸರ್ಕಾರಿ ಆಸ್ಪತ್ರೆ ವೈದ್ಯಾಧಿಕಾರಿ ಡಾ.ರವಿಕುಮಾರ್, ತಿ. ನರಸೀಪುರ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯ ಹಿರಿಯ ಮೇಲ್ವಿಚಾರಕಿ ವಿದ್ಯಾವತಿ  ಪಾಟೀಲ್, ಬನ್ನೂರು ಶಿಕ್ಷಣ ಸಂಯೋಜಕ ಪರಮೇಶ್ವರ್, ಮೈಸೂರು ಜಿಲ್ಲಾ ಸಂಯೋಜಕ ಧನರಾಜ್,  ಕಾಲೇಜಿನ ಪ್ರಾಂಶುಪಾಲ ಎಂ.ಮರಿಸ್ವಾಮಿ, ಮೈಸೂರು ಮಕ್ಕಳ ಸಹಾಯವಾಣಿ ಸಂಯೋಜಕ ಎಸ್‌. ಶಶಿಕುಮಾರ್, ಬನ್ನೂರು ಪೊಲೀಸ್ ಠಾಣೆ ಎಎಸ್‌ಐ  ರಂಗಸ್ವಾಮಿ, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಉಪನ್ಯಾಸಕರು ಮತ್ತು ಶಿಕ್ಷಕರು ಮತ್ತು ಕಾಲೇಜು ವಿದ್ಯಾರ್ಥಿನಿಯರು ಇದ್ದರು.

Leave a Reply

error: Content is protected !!
LATEST
160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ ಮೇಲುಸೇತುವೆ-ಕೆಳಸೇತುವೆಗಳ ನಿರ್ವಹಣೆ ಸರಿಯಾಗಿ ಮಾಡಿ: ತುಷಾರ್ ಗಿರಿನಾಥ್