NEWSನಮ್ಮಜಿಲ್ಲೆರಾಜಕೀಯ

ರಾಜ್ಯ, ರಾಜಧಾನಿಯಲ್ಲಿ ದಿನದಿಂದ ದಿನಕ್ಕೆ ವೃದ್ಧಿಯಾಗುತ್ತಿದೆ ಎಎಪಿ ಕಾರ್ಯಕರ್ತರ ಪಡೆ

ಸಂಪಂಗಿರಾಮನಗರದಲ್ಲಿ ಎಎಪಿ ಕಚೇರಿ ಉದ್ಘಾಟನೆ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾಜ್ಯದ ಪ್ರತಿ ಜಿಲ್ಲೆಗಳೂ ಸೇರಿದಂತೆ ರಾಜ್ಯದ ರಾಜಧಾನಿ ಬೆಂಗಳೂರಿನ ಎಲ್ಲೆಡೆಯೂ ಬೇರೂರುತ್ತಿರುವ ಆಮ್‌ ಆದ್ಮಿ ಪಾರ್ಟಿಯು ಇಂದು ಸಂಪಂಗಿರಾಮನಗರದಲ್ಲಿ ಕಚೇರಿಯನ್ನು ಲೋಕಾರ್ಪಣೆ ಮಾಡಿದೆ.

ಈ ಮೂಲಕ ನಗರದಲ್ಲಿ ಮತ್ತೊಂದು ಕಚೇರಿಯನ್ನು ತೆರೆದು ಜನರ ಸಮಸ್ಯೆಗೆ ಸ್ಪಂದಿಸುವ ಕೆಲಸದಲ್ಲಿ ತೊಡಗಿಕೊಳ್ಳುತ್ತಿದೆ.

ಇನ್ನು ಭಾನುವಾರ ಕಚೇರಿಯನ್ನು ಉದ್ಘಾಟಿಸಿ ಮಾತನಾಡಿದ ಆಮ್‌ ಆದ್ಮಿ ಪಾರ್ಟಿಯ ರಾಜ್ಯ ಸಂಚಾಲಕ ಪೃಥ್ವಿ ರೆಡ್ಡಿ, “ಮುಂಬರುವ ಬಿಬಿಎಂಪಿ ಚುನಾವಣೆಗೆ ಎಎಪಿಯು ಸರ್ವಸನ್ನದ್ಧವಾಗಿದೆ ಎಂದು ಹೇಳಿದರು.

ಬೆಂಗಳೂರು ನಗರದ ಎಲ್ಲ ಹಳೆಯ 198 ವಾರ್ಡ್‌ಗಳಲ್ಲಿ ಪ್ರಥಮ ಹಂತದ ಬೂತ್‌ ಮಟ್ಟದ ಕಾರ್ಯಾಗಾರಗಳು ನಡೆದಿವೆ. ಚುನಾವಣೆಯಲ್ಲಿ ಪಕ್ಷ ಜಯಗಳಿಸುವುದು ನಿಶ್ಚಿತವಾಗಿದ್ದು, ಎಎಪಿಯ ಆಡಳಿತದಿಂದ ಬೆಂಗಳೂರಿಗೆ ಹೊಸ ರೂಪ ಸಿಗಲಿದೆ ಎಂಬ ಭರವಸೆ ವ್ಯಕ್ತಪಡಿಸಿದರು.

ದೆಹಲಿ ಸಿಎಂ ಅರವಿಂದ್‌ ಕೇಜ್ರಿವಾಲ್‌ ಸರ್ಕಾರದ ಅಭಿವೃದ್ಧಿ ಕಾರ್ಯಗಳನ್ನು ಬೆಂಗಳೂರಿನ ಜನತೆ ತುಂಬ ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ. ಬೆಜೆಪಿ, ಕಾಂಗ್ರೆಸ್‌, ಜೆಡಿಎಸ್‌ ಪಕ್ಷಗಳ ಭ್ರಷ್ಟ ಆಡಳಿತದ ಬದಲು ಕೇಜ್ರಿವಾಲ್‌ ಮಾದರಿಯ ಸ್ವಚ್ಛ ಹಾಗೂ ಪಾರದರ್ಶಕ ಆಡಳಿತವನ್ನು ಬಯಸುತ್ತಿದ್ದಾರೆ ಎಂದರು.

ಇನ್ನು ವಿಶೇಷವಾಗಿ ಯುವಜನತೆಯು ದೊಡ್ಡ ಪ್ರಮಾಣದಲ್ಲಿ ಎಎಪಿಯತ್ತ ಆಕರ್ಷಿತರಾಗುತ್ತಿರುವುದು ನಮ್ಮ ಉತ್ಸಾಹವನ್ನು ಇಮ್ಮಡಿಗೊಳಿಸಿದೆ ಎಂದು ಪೃಥ್ವಿ ರೆಡ್ಡಿ ಹೇಳಿದರು.

ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ಗಿರೀಶ್‌ ಕುಮಾರ್‌, ಎಎಪಿಯ ಕರ್ನಾಟಕ ಉಸ್ತುವಾರಿ ರೋಮಿ ಭಾಟಿ, ಮಾಜಿ ಶಾಸಕ ಎಚ್‌.ಡಿ. ಬಸವರಾಜು, ಬೆಂಗಳೂರು ನಗರದ ಎಎಪಿ ಅಧ್ಯಕ್ಷ ಮೋಹನ್‌ ದಾಸರಿ, ನಗರದ ಮಹಿಳಾ ಘಟಕದ ಅಧ್ಯಕ್ಷರಾದ ಕುಶಲಸ್ವಾಮಿ, ಸಂಪಂಗಿರಾಮನಗರ ವಾರ್ಡ್‌ ಅಧ್ಯಕ್ಷ ಹಾಗೂ ಪಕ್ಷದ ನೀತಿ ಮತ್ತು ಸಂಶೋಧನಾ ವಿಭಾಗದ ಅಧ್ಯಕ್ಷ ಪ್ರಕಾಶ್‌ ನೆಡಂಗಾಡಿ, ಮುಖಂಡರಾದ ಬಿ.ಟಿ.ನಾಗಣ್ಣ, ಸುರೇಶ್‌ ರಾಥೋಡ್‌ ಮತ್ತಿತರ ಮುಖಂಡರು, ಕಾರ್ಯಕರ್ತರು ಭಾಗವಹಿಸಿದ್ದರು.

Leave a Reply

error: Content is protected !!
LATEST
ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ... BBMP: ಮಳೆಯಿಂದ ಸಮಸ್ಯೆ ಆಗಿದ್ದರೆ ಕೂಡಲೇ 1533ಕ್ಕೆ ಕರೆ ಮಾಡಿ ದೂರು ನೀಡಿ